Vijayapura: ಸುಗಂಧರಾಜ ಹೂವಿನ ಹಾರವನ್ನು ತಿರಸ್ಕರಿಸಿದ ಡಿಕೆಶಿ!
ಹಾರ ತರದಂತೆ ಮೊದಲೇ ಸೂಚಿಸಲಾಗಿತ್ತು...
Team Udayavani, Feb 3, 2024, 6:46 PM IST
ವಿಜಯಪುರ : ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸುಗಂಧರಾಜ ಹೂವಿನ ಹಾರ ಹಾಕಲು ಬಂದಾಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಯವಾಗಿ ತಿರಸ್ಕರಿಸಿದ ಘಟನೆ ನಡೆಯಿತು.
ಶನಿವಾರ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನಿಗಳು ಸುಗಂಧರಾಜ ಹೂವಿನ ಹಾರ ಹಾಕಲು ಮುಂದಾಗಿದ್ದರು. ಇದನ್ನು ಕಂಡೊಡನೆಯೇ ಇಲ್ಲಿಂದ ಕೊಂಡೊಯ್ಯಿರಿ ಇದನ್ನು ಎಂದು ಸೂಚಿಸಿದರು.
ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳುವ ಸಮಾರಂಭದಲ್ಲಿ ಸುಗಂಧರಾಜ ಹೂವಿನ ಹಾರ ತರದಂತೆ ಮೊದಲೇ ಸೂಚಿಸಲಾಗಿತ್ತು. ಆದರೂ ಅಭಿಮಾನಿಗಳು ಸುಗಂಧರಾಜ ಪುಷ್ಟಹಾರವನ್ನೇ ತಂದಿದ್ದು, ನಿರಾಕರಿಸಿದ ಬಳಿಕ ಅಭಿಮಾನಿಗಳು ಅದನ್ನು ಮರಳಿ ಒಯ್ದರು. ಇದಲ್ಲದೇ ಉಪ ಮುಖ್ಯಮಂತ್ರಿಗಳು ಸೂಚಿಸುತ್ತಲೇ ಅವರ ಟಿಪಾಯಿ ಮೇಲಿದ್ದ ಸುಗಂಧರಾಜ ಪುಷ್ಟ ಹಾರವನ್ನು ಸ್ಥಳದಲ್ಲಿದ್ದ ಅಧಿಕಾರಿಗಳು ತೆರವುಗೋಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್