ವಿಜಯಪುರ: ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

ಸರಕಾರದ ಅಂಗ ಸಂಸ್ಥೆಗಳನ್ನೆಲ್ಲಾ ಉದ್ಯಮಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

Team Udayavani, Feb 11, 2021, 5:55 PM IST

ವಿಜಯಪುರ: ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

ವಿಜಯಪುರ: ಕೇಂದ್ರದ ಬಿಜೆಪಿ ಸರಕಾರ ರೈತ ವಿರೋ ಧಿಯಾಗಿರುವ ಕೃಷಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಜಲನಗರ ಬ್ಲಾಕ್‌ ಸಮಿತಿಯ ಸಹಯೋಗದಲ್ಲಿ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಅಬ್ದುಲ್‌ ಹಮೀದ ಮುಶ್ರಿಫ್‌, ಜಮೀರ ಅಹ್ಮದ ಬಕ್ಷಿ ಹಾಗೂ ಆರತಿ ಶಹಪೂರ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಮನಬಂದಂತೆ ವರ್ತಿಸುತ್ತಿದೆ. ಪರಿಣಾಮ ದೇಶದಲ್ಲಿ ಜನ ಹಾಗೂ ಕೃಷಿ ವಿರೋಧಿ ಯಾಗಿರುವ ಮೂರು ಕರಾಳ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದವರ ವಿರುದ್ಧ ದೇಶದ ರೈತರು 75 ದಿನಗಳಿಂದ ದೆಹಲಿ ಸುತ್ತಲೂ ಚಳವಳಿ ನಡೆಸಿದ್ದರೂ ಸ್ಪಂದಿಸುವ ಸೌಜನ್ಯ ತೋರಿಲ್ಲ. ಹೋರಾಟದಲ್ಲಿ ಸುಮಾರು 155 ಕ್ಕೂ ಹೆಚ್ಚು ರೈತರು ಬಲಿದಾನ ಮಾಡಿದರೂ ಸರ್ಕಾರ ಕಣ್ತೆರೆದು ನೋಡಿಲ್ಲ ಎಂದು ಹರಿಹಾಯ್ದರು.

ಒಂದೆಡೆ ರೈತರು ಇಂತಹ ಕರಾಳ ಕಾನೂನುಗಳ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸರಕಾರ ಲಾಭದಲ್ಲಿ ಮಗ್ನವಾಗಿದೆ. ಇದಕ್ಕಾಗಿ ಇಂಧನ ಬೆಲೆ ಏರಿಕೆ ಮಾಡುತ್ತಲೇ ಇದ್ದು, ಸಾಮಾನ್ಯ ಜನರ ಜೀವನಕ್ಕೆ ಕುತ್ತು ತಂದಿದೆ. ತಕ್ಷಣ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿ ತೈಲ ಬೆಲೆ ಏರಿಕೆ ಇಳಿಸಿ ಜನ ಸಾಮಾನ್ಯರ ಮೇಲೆ ಹೊರೆಯಾಗದಂತೆ ಸ್ಪಂದಿಸಿ ಜನರ ದ್ವನಿಯಾಗಬೇಕು ಎಂದು ಆಗ್ರಹಿಸಿದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಶಾಕೀರ ಸನದಿ ಮಾತನಾಡಿ, ಕೇಂದ್ರ ಬಿ.ಜೆ.ಪಿ ಸರಕಾರ ತಂದಿರುವ ಕರಾಳ ಕೃಷಿ ಕಾನೂನುಗಳನ್ನು ಕಾಂಗ್ರೆಸ್‌ ಖಂಡಿಸುತ್ತದೆ. ಈ ದೇಶದ ಜಿ.ಡಿ.ಪಿ ಬೆಳವಣಿಗೆ ಸಂಪೂರ್ಣ ರೈತರ ಮೇಲೆ ನಿಂತಿದ್ದನ್ನು ಕೇಂದ್ರ ಸರಕಾರ ಗಂಭಿರವಾಗಿ ಪರಿಗಣಿಸಬೇಕು. ಲೋಕಸಭೆ ಚುನಾವಣೆಗಳಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೊದಿ, ದೇಶದಲ್ಲಿ ಸರಕಾರದ ಅಂಗ ಸಂಸ್ಥೆಗಳನ್ನೆಲ್ಲಾ ಉದ್ಯಮಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಕೆಪಿಸಿಸಿ ಬ್ಲಾಕ್‌ ಉಸ್ತುವರಿ ಸುನೀತಾ ಐಹೊಳ್ಳಿ, ಕಾಂಗ್ರೆಸ್‌ ಮುಖಂಡರಾದ ವೈಜನಾಥ ಕರ್ಪೂರಮಠ, ಸುರೇಶ ಘೊಣಸಗಿ, ಕಾಂಗ್ರೆಸ್‌ ಮಹಿಳಾ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶ್ರೀಕಾಂತ ಛಾಯಾಗೋಳ, ವಿದ್ಯಾವತಿ ಅಂಕಲಗಿ, ಶಬ್ಬೀರ್‌ ಜಾಗೀರದಾರ, ರುಕ್ಮಿಣಿ ಲಮಾಣಿ ಸೇರಿದಂತೆ
ಇತರರು ಉಪಸ್ಥಿತರಿದ್ದರು.

ಚಾಂದಸಾಬ ಗಡಗಲಾವ, ಕೆ.ಪಿ.ಸಿ.ಸಿ ಸಂಚಾಲಕರಾದ ಮಲ್ಲನಗೌಡ ಬಿರಾದಾರ, ಶಹಜಾನ ದುಂಡಸಿ, ವಿನೋದ ವ್ಯಾಸ, ಮೊಹಮದ್‌ ರಫೀಕ್‌ ಟಪಾಲ್‌, ಸಾಹೇಬಗೌಡ ಬಿರಾದಾರ, ನಾಗಠಾಣ ಬ್ಲಾಕ್‌ ಅಧ್ಯಕ್ಷ ಇಲಿಯಾಸ ಬಗಲಿ, ಪೀರಪ್ಪ ನಡುವಿನಮನಿ, ಡಿ.ಎಚ್‌.ಕಲಾಲ, ವಸಂತ ಹೊನಮೋಡೆ, ಮೈನುದ್ದೀನ್‌ ಬೀಳಗಿ, ಅಜೀಮ ಇನಾಮದಾರ, ರೌಫ್‌ ಶೇಖ, ಅನ್ವರ ದ್ರಾಕ್ಷಿ, ಶರಣಪ್ಪ ಯಕ್ಕುಂಡಿ, ಜಾಕೀರ ಬಾಗವಾನ, ಹಾಜಿಲಾಲ್‌ ದಳವಾಯಿ, ಚನ್ನಬಸ್ಪಪ್ಪ ನಂದರಗಿ, ದಾವಲಸಾಬ ಬಾಗವಾನ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.