ಕೃಷ್ಣೆಗೆ ಪ್ರವಾಹ : ಗಂಗೂರಿನ ದೇವಸ್ಥಾನ ಜಲಾವೃತ
Team Udayavani, Jul 29, 2021, 1:21 PM IST
ಅಡವಿ ಸಿದ್ದೇಶ್ವರ ದೇವಸ್ಥಾನ ಜಲಾವೃತ
ಮುದ್ದೇಬಿಹಾಳ : ತಾಲೂಕಿನ ಕೃಷ್ಣಾನದಿಗೆ ಪ್ರವಾಹ ಹೆಚ್ಚಾಗುವ ಆತಂಕ ಮುಂದುವರೆದಿದ್ದು ಇದರ ಮೊದಲ ಭಾಗವಾಗಿ ನದಿ ತೀರದಲ್ಲಿರುವ ಗಂಗೂರು ಗ್ರಾಮದ ಶ್ರೀ ಅಡವಿ ಸಿದ್ದೇಶ್ವರ ದೇವಸ್ಥಾನ, ಗದ್ದುಗೆ ಜಲಾವೃತವಾಗಿದೆ.
ಗಂಗೂರ – ಕಮಲದಿನ್ನಿ ರಸ್ತೆ ಮೇಲೆ ಒಂದು ಅಡಿಗಳಷ್ಟು ನೀರು ನಿಂತು ಸಂಚಾರ ದುಸ್ತರವಾಗಿದೆ. ಇದರೊಟ್ಟಿಗೆ ನದಿ ತೀರದ ದೇವೂರ, ಕಮಲದಿನ್ನಿ, ಗಂಗೂರ, ಕುಂಚಗನೂರ, ಹಂಡರಗಲ್ಲ, ನಾಗರಾಳ, ಮುದೂರ, ತಂಗಡಗಿ ಗ್ರಾಮಗಳಿಗೂ ನೀರು ತೀರ ಸಮೀಪಕ್ಕೆ ಬಂದು ಆತಂಕ ಹೆಚ್ಚುವಂತೆ ಮಾಡಿದೆ. ಕೃಷ್ಣಾನದಿಗೆ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರೀ ಜಲಾಶಯದಿಂದ 4 ಲಕ್ಷ ಕ್ಯೂಸೆಕವರೆಗೆ ನೀರು ಹರಿಸುತ್ತಿರುವುದು ಇಂಥ ಪರಿಸ್ಥಿತಿಗೆ ಕಾರಣವಾಗಿದೆ.
ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?
ತಹಶೀಲ್ದಾರ್ ಬಿ.ಎಸ್. ಕಡಕಭಾವಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪರಿಸ್ಥಿತಿ ಅವಲೋಕಿಸತೊಡಗಿದ್ದು ಸಂಭವನೀಯ ಆತಂಕ ಎದುರಿಸಲು ಸನ್ನದ್ದರಾಗಿದ್ದಾರೆ.
ಏತನ್ಮಧ್ಯೆ, ನೋಡಲ್ ಅಧಿಕಾರಿಗಳ ಸಹಾಯಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಬಂಧಿಸಿದ ಗ್ರಾಪಂ ಸಿಬ್ಬಂದಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಸಹ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ನಿಯೋಜಿಸಲಾಗಿದೆ. ಸಂದರ್ಭಾನುಸಾರ ಪ್ರವಾಹ ಪೀಡಿತರನ್ನು ರಕ್ಷಿಸಲು ಕಾಳಜಿ ಕೇಂದ್ರಗಳನ್ನು ಸಕಲ ಮೂಲಸೌಕರ್ಯಗಳೊಂದಿಗೆ ಸಿದ್ದತೆಯಲ್ಲಿಡಲಾಗಿದೆ.
ಇದನ್ನೂ ಓದಿ : ಜಾಹೀರಾತು: ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…