ವಿಜಯಪುರ ಜಿಲ್ಲೆಯ ಮಠಾಧೀಶರಿಂದ ಯಡಿಯೂರಪ್ಪಗೆ ಬೆಂಬಲ
Team Udayavani, Jul 22, 2021, 12:03 PM IST
ವಿಜಯಪುರ: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡದಂತೆ ವಿಜಯಪುರ ಜಿಲ್ಲೆಯ ಮಠಾಧೀಶರ ದಂಡು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದೆ.
ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಖಚಿತ ಎಂಬ ಸಂದೇಶ ಹೊರಬರುತ್ತಲೇ, ಗುರುವಾರ ನಗರದಲ್ಲಿ ಬಬಲೇಶ್ವರ ಡಾ.ಮಹದೇವ ಶ್ರೀಗಳ ನೇತೃತ್ವದಲ್ಲಿ 15-20 ಮಠಾಧೀಶರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸದಂತೆ ಬಿಜೆಪಿ ಹೈಕಮಾಂಡಗೆ ಆಗ್ರಹಿಸಿದರು.
ಬಿಜೆಪಿ ರಾಜ್ಯದಲ್ಲಿ ಬಲಿಷ್ಠವಾಗಿ ನೆಲೆಯೂರಲು ಹಾಗೂ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕೊಡುಗೆಯೇ ಪ್ರಮುಖ ಕಾರಣ. ಹೀಗಾಗಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದ ವ್ಯಕ್ತಿಯನ್ನು ಏಕಾಏಕಿ ಅಧಿಕಾರದಿಂದ ಕೆಳಗಿಳಸುವ ಚಿಂತನೆ ಇದ್ದರೆ ತಕ್ಷಣ ಅದರಿಂದ ಹಿಂದೆ ಅರಿಯಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಉಳಿಕೆಯ ಅಧಿಕಾರವನ್ನು ಪೂರ್ಣ ಅವಧಿ ವರೆಗೆ ಮುಂದುವರೆಸಬೇಕು ಎಂದು ಮಠಾಧೀಶರು ಒಕ್ಕೋರಲಿನಿಂದ ಆಗ್ರಹಿಸಿದರು.
ಪತ್ರಿಕಾಗೋಷ್ಠಿಗೆ ಮುನ್ನ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ಸೇರಿದ ವಿವಿಧ ಮಠಾಧೀಶರು ಚರ್ಚೆ ನಡೆಸಿದರು.
ಮನಗೂಳಿ ಅಭಿನವ ಸಂಗನಬಸವ ಶ್ರೀ, ಬುರಣಾಪುರದ ಯೋಗೇಶ್ವರಿ ಮಾತಾಜಿ, ಶಂಕರಾನಂದ ಸ್ವಾಮಿಜಿ, ಶಂಭುಲಿಂಗ ಸ್ವಾಮಿಜಿ, ನಾಗಠಾಣ ಸ್ವಾಮಿಜಿ, ಮಲ್ಲಿಕಾರ್ಜುನಶ್ರೀ, ಮುತ್ತಗಿ ಸ್ವಾಮಿಜಿ, ತಿಕೋಟಾ ಸ್ವಾಮಿಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಸಭೆಯಲ್ಲಿ ಭಾಗಿಯಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ