ವಿಶೇಷ ಪ್ಯಾಕೇಜ್‌ಗೆ ಆಗ್ರಹಿಸಿ ದ್ರಾಕ್ಷಿ ಬೆಳೆಗಾರರಿಂದ ಸರ್ಕಾರಕ್ಕೆ ಮನವಿ


Team Udayavani, May 29, 2020, 4:21 PM IST

29-May-17

ವಿಜಯಪುರ: ಲಾಕ್‌ಡೌನ್‌ದಿಂದ ನಷ್ಟಕ್ಕೀಡಾದ ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದ್ರಾಕ್ಷಿ ಬೆಳೆಗಾರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ವಿಜಯಪುರ: ಲಾಕ್‌ಡೌನ್‌ ಪರಿಣಾಮ ಸಂಕಷ್ಟಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದ್ರಾಕ್ಷಿ ಬೆಳೆಗಾರರ ಸಂಘದಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ, ಕೊರೊನಾ ಸೋಂಕಿನ ಹಾವಳಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ. ಇದರ ನೇರ ಪರಿಣಾಮ ದ್ರಾಕ್ಷಿ ಬೆಳೆಗಾರರ ಮೇಲೂ ದಟ್ಟವಾಗಿ ಬೀರಿದ್ದು, ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ನೈಸರ್ಗಿಕ ವಿಕೋಪಕ್ಕೆ ನಲುಗಿದವರಲ್ಲಿ ದ್ರಾಕ್ಷಿ ಬೆಳೆಗಾರರೂ ಹೊರತಾಗಿಲ್ಲ ಎಂದು ಸಮಸ್ಯೆ ನಿವೇದಿಸಿಕೊಂಡಿದ್ದಾರೆ. ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಅತಿವೃಷ್ಟಿ, ಅನಾವೃಷ್ಟಿ ಅಂತೆಲ್ಲ ಹಲವು ಕಾರಣಗಳಿಂದಾಗಿ ಹಾಳಾಗುತ್ತಲೇ ಬಂದಿದೆ. ಇದರಿಂದ ದ್ರಾಕ್ಷಿ ಬೆಳೆಗಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆಹಾನಿ ರೈತರನ್ನು ಒಂದೇ ಸೂರಿನಡಿ ಪರಿಗಣಿಸಿ ವೈಜ್ಞಾನಿಕ ಪರಿಹಾರ ನೀಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವೇದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಆರ್ಥಿಕ ತಜ್ಞರು ಸಲಹೆಯಂತೆ ಹೆಕ್ಟೇರ್‌ಗೆ 2.80 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಒಣದ್ರಾಕ್ಷಿ ಮಾರಾಟ ವ್ಯವಸ್ಥೆಯಲ್ಲಿ ಮಧ್ಯವರ್ತಿಗಳ ಕರಾಳ ವ್ಯವಸ್ಥೆಗೆ ಕಡಿವಾಣ ಹಾಕಿ, ರೈತ ಸಂಪರ್ಕ ಕೇಂದ್ರದಲ್ಲಿ ಗುಣಮಟ್ಟದ ಕೃಷಿ ಸಲಕರಣೆ ಸಿಗುವಂತೆ ನೋಡಿಕೊಳ್ಳಬೇಕು. ಮಹಾರಾಷ್ಟ್ರದ ವ್ಯಾಪಾರಸ್ಥರನ್ನು ಕೋವಿಡ್‌ ಪರೀಕ್ಷೆ ನಡೆಸಿ, ಒಣದ್ರಾಕ್ಷಿ ಖರೀದಿಗಾಗಿ ಕರ್ನಾಟಕಕ್ಕೆ ಬರಲು ಅವಕಾಶ ನೀಡಬೇಕು. ಸರಕಾರ ಕ್ರಮ ಕೈಗೊಂಡರೂ ಮುಕ್ತ ಹಾಗೂ ಆನ್‌ಲೈನ್‌ ವಹಿವಾಟು ನಡೆದಿಲ್ಲ. ದ್ರಾಕ್ಷಿಗೆ ಸರಕಾರ ಬೆಂಬಲ ಬೆಲೆ ನೀಡಿ ಖರೀದಿಸಲು ಮುಂದಾಗಬೇಕು ಎಂದು ಕೋರಿದರು.

ಅಭಯಕುಮಾರ ನಾಂದ್ರೇಕರ್‌, ವಿಜಯಪುರ ದ್ರಾಕ್ಷಿ ಬೇಳೆಗಾರರ ಸಂಘದ ಅಧ್ಯಕ್ಷ ಪೀರಗೊಂಡ ಗದ್ಯಾಳ, ಎ.ಪಿ.ಎಂ.ಸಿ ವಿಜಯಪುರ ಜಿಲ್ಲಾಧ್ಯಕ್ಷ ಸುರೇಶಗೌಡ ಬಿರಾದಾರ, ನಿರ್ದೇಶಕರಾದ ಎಸ್‌.ಎಚ್‌.ನಾಡಗೌಡ, ಎಂ.ಎಸ್‌.ರುದ್ರಗೌಡರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.