Vijayapura; ಯತ್ನಾಳ್ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋ ದಾಖಲೆಗಳಿವೆ: ಎಂ.ಬಿ.ಪಾಟೀಲ್
Team Udayavani, Dec 25, 2023, 11:50 AM IST
ವಿಜಯಪುರ: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಮುನ್ನ ಹೊಂದಾಣಿಕೆ, ಸೌಹಾರ್ದತೆ ಇತ್ತು. ಇದೀಗ ಕದಡಲಾಗಿದ್ದು, ಶಿಕ್ಷಣದ ನೆಲೆಗಳಲ್ಲಿ ಜಾತಿ, ಧರ್ಮ, ಪಕ್ಷ ಅಂತೆಲ್ಲ ವೈಮನಸ್ಸು ಸೃಷ್ಟಿಸಲಾಗಿದೆ. ಪರಿಣಾಮ ಹಿಜಾಬ್ ವಿಷಯ ಇದೀಗ ಕೋರ್ಟ್ ಮೆಟ್ಟಿಲೇರಿದೆ ಎಂದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಶಾಲಾ ಕಾಲೇಜುಗಳಲ್ಲಿ ಪರಸ್ಪರ ಹೊಂದಾಣಿಕೆ, ವಿಶ್ವಾಸ, ಸೌಹಾರ್ದತೆಯನ್ನು ಕದಡಲಾಗಿದೆ ಎಂದರು.
ಸದ್ಯ ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದ್ದು, ಕಾನೂನಾತ್ಮಕವಾಗಿ ವಿಚಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.
ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಜರಿಯುವ ಇದೇ ಯತ್ನಾಳ್ ಈ ಹಿಂದೆ ಟಿಪ್ಪು ಸುಲ್ತಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ನನ್ನ ಬಳಿ ಇವೆ. ಮಾಧ್ಯಮದವರೇ ಯಾರೋ ನನಗೆ ಅವುಗಳನ್ನು ಕಳಿಸಿದ್ದಾರೆ. ಎಲ್ಲವೂ ನಿಮ್ಮ ಬಳಿಯೇ ಇದ್ದರೂ ನಮ್ಮ ಬಾಯಿಂದ ಹೇಳಿಸುತ್ತೀರಿ ಎಂದು ಬಿಜೆಪಿ ಶಾಸಕ ಯತ್ನಾಳಗೆ ತಿರುಗೇಟು ನೀಡಿದರು.
ರೈತರು, ಬರ, ಸಾಲ ಮನ್ನಾ ವಿಷಯದಲ್ಲಿ ಸಚಿವ ಶಿವಾನಂದ ಪಾಟೀಲ ಏನು ಹೇಳಿಕೆ ನೀಡಿದ್ದಾರೆಂದು ನಾನು ಗಮನಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ನೀವು ಅವರನ್ನೇ ಕೇಳಿದರೆ ಸೂಕ್ತ ಎಂದರು.
ವಿಜಯಪುರ ನಗರದಲ್ಲಿ ನಾನು ಹಮ್ಮಿಕೊಂಡಿದ್ದ ವೃಕ್ಷೋಥಾನ ಹೆರಿಟೇಜ್ ಮ್ಯಾರಥಾನ್ ಹಾಗೂ ಬೆಳಗಾವಿಯಲ್ಲಿ ಪ್ರಭಾಕರ ಕೋರೆ ಅವರ ವಿವಾಹದ 50ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳಿದ್ದವು. ಹೀಗಾಗಿ ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಸಮಾವೇಶಕ್ಕೆ ಹೋಗಿರಲಿಲ್ಲ. ಆದರೆ ಸಂದೇಶ ಕಳಿಸಿದ್ದೆ ಎಂದು ಸಮಾಜದ ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸಮಜಾಯಿಷಿ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ