Vijayapura: ಪತ್ನಿಯ ಅಕ್ರಮ ಸಂಬಂಧ; ಪತಿಯ ಬರ್ಬರ ಹತ್ಯೆ

6 ತಿಂಗಳ ಬಳಿಕ ಪ್ರಕರಣ ಪತ್ತೆ : ಪತ್ನಿ, ಆಕೆಯ ಪ್ರಿಯಕರನ ಬಂಧನ

Team Udayavani, Aug 28, 2023, 11:04 PM IST

love birds

ವಿಜಯಪುರ : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ತನ್ನ ಪ್ರಿಯಕರನೊಂದಿಗೆ ವ್ಯವಸ್ಥಿತ ಸಂಚು ರೂಪಿಸಿ ಹತ್ಯೆ ಮಾಡಿದ ಪ್ರಕರಣವನ್ನು 6 ತಿಂಗಳ ಬಳಿಕ ಪೊಲೀಸರು ಬೇಧಿಸಿದ್ದಾರೆ.

ಬಸವನಬಾಗೇವಾಡಿ ಪಟ್ಟಣದಲ್ಲಿ ಕಳೆದ ಫೆಬ್ರವರಿ 23 ರಂದು ಮಧ್ಯರಾತ್ರಿ 11-30 ರ ಸುಮಾರಿಗೆ ಜಕರಾಯ ದಳವಾಯಿ ಎಂಬ ವ್ಯಕ್ತಿಯ ಹತ್ಯೆಯಾಗಿತ್ತು. ಜಕರಾಯನ ಪತ್ನಿ ಜಯಶ್ರೀ (34) ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಡೋಂಗ್ರಿಸಾಬ್ ಬೊಮ್ಮನಹಳ್ಳಿ (38) ಇಬ್ಬರೂ ವ್ಯವಸ್ಥಿತ ಸಂಚು ರೂಪಿಸಿ, ಹತ್ಯೆ ಮಾಡಿ, ಶವವನ್ನು ಸುಟ್ಟು ಹಾಕಿ, ಸಾಕ್ಷಿ ನಾಶ ಪಡಿಸಿದ್ದರು.

ಕಾಣೆಯಾದ ಮಗನ ಕುರಿತು ಅನುಮಾನಗೊಂಡ ಜಕರಾಯನ ತಂದೆ ಭೀಮರಾಯ ಆ.25 ರಂದು ಬಸವನಬಾಗೇವಾಡಿ ಪೊಲೀಸರಿಗೆ ದೂರು ನೀಡಿದ್ದರು. ಹತ್ಯೆಯಾದ ವ್ಯಕ್ತಿಯ ಕುರಿತು ಯಾವ ಸುಳಿವೂ ಇರಲಿಲ್ಲ. ಆದರೂ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ಸಂಚು ರೂಪಿಸಿ ಹತ್ಯೆ ಮಾಡಿ, ಸಾಕ್ಷಿ ನಾಶ ಮಾಡಿರುವುದು ಬೆಳಕಿಗೆ ಬಂದಿದೆ.

ಬಸವನಬಾಗೇವಾಡಿ ಮೂಲದ ಡೋಂಗ್ರೀಸಾಬ್ ಮದುವೆ ಇತರೆ ಸಮಾರಂಭಗಳಿಗೆ ಅಡುಗೆ ಮಾಡುವ ಗುತ್ತಿಗೆ ಪಡೆಯುತ್ತಿದ್ದ. ವಿಜಯಪುರ ತಾಲೂಕಿನ ಹೆಗಡಿಹಾಳ ಮೂಲದ ಬಸವನಬಾಗೇವಾಡಿ ಪಟ್ದಣದಲ್ಲಿ ವಾಸವಿದ್ದ ಜಕರಾಯನ ಪತ್ನಿ ಜಯಶ್ರೀ ಅಡುಗೆ ಕೆಲಸಕ್ಕೆ ಹೋಗುತ್ತಿದ್ದಳು.

ಈ ಹಂತದಲ್ಲಿ ಜಯಶ್ರೀ ಹಾಗೂ ಡೊಂಡ್ರೀಸಾಬ್ ಇವರ ಮಧ್ಯೆ ಅನೈಕ ಸಂಬಂಧ ಬೆಸೆದಿದೆ. ಈ ವಿಷಯ ಜಕರಾಯನಿಗೆ ಗೊತ್ತಾಗಿ ಡೋಂಗ್ರಿಸಾಬ್‍ನ ಸಹವಾಸ ಬಿಡುವಂತೆ ಪತ್ನಿ ಜಯಶ್ರೀಗೆ ಬುದ್ದಿವಾದ ಹೇಳಿದ್ದಾನೆ. ಆದರೆ ಪತಿಯ ಬುದ್ದಿ ಮಾತಿಗೆ ಬಗ್ಗದ ಜಯಶ್ರೀ ಪತಿಯನ್ನೇ ಹತ್ಯೆ ಮಾಡುವ ಸಂಚು ರೂಪಿಸಿದ್ದಾಳೆ.

ಫೆ.23 ರಂದು ರಾತ್ರಿ 11-50ಕ್ಕೆ ಪತಿ ಮನೆಗೆ ಬರುತ್ತಲೇ ಜಯಶ್ರೀ ಮಾಹಿತಿ ನೀಡಿದಂತೆ ಡೋಂಗ್ರೀಸಾಬ್ ಮನೆಗೆ ಬಂದಿದ್ದಾನೆ. ಪತಿಯನ್ನು ಜಯಶ್ರೀ ಬಿಗಿಯಾಗಿ ಹಿಡಿಯುತ್ತಲೇ ಡೋಂಗ್ರಿಸಾಬ್ ಕೊಡಲಿಯಿಂದ ಜಕರಾಯನನ್ನು ಹೊಡೆದು ಹತ್ಯೆ ಮಾಡಿದ್ದಾನೆ.

ಬಳಿಕ ಶವವನ್ನು ಹೊದಿಕೆಯಲ್ಲಿ ಕಟ್ಟಿಕೊಂಡು ದ್ವಿಚಕ್ರ ವಾಹನದಲ್ಲಿ ಲಾವಣಿ ಯಮನಪ್ಪ ಅವಟಿ ಎಂಬವರ ಜಮೀನಿಲ್ಲಿ ಮೊದಲೇ ಸಂಗ್ರಹಿಸಿ ಇರಿಸಿದ ಕಟ್ಟಿಗೆಯಲ್ಲಿ ಹಾಕಿ ಬೆಂಕಿಹಚ್ಚಿ ಬಂದಿದ್ದಾರೆ. ಆದರೆ ಶವ ಸರಿಯಾಗಿ ಸುಡದ ಕಾರಣ ಫೆ.25 ರಂದು ಮತ್ತಷ್ಟು ಕಟ್ಟಿಗೆ ಹಾಕಿ ಶವನ್ನು ಸುಟ್ಟು ಉಳಿದ ಬೂದಿ ಹಾಗೂ ಕಟ್ಟಿಗೆಯನ್ನು ಪಕ್ಕದಲ್ಲಿದ್ದ ಭಾವಿಗೆ ಎಸೆದಿದ್ದಾರೆ.

ಅಲ್ಲದೇ ಜಕರಾಯನ ಎಟಿಎಂ ಕಾರ್ಡ್, ಪಾನ್ ಕಾರ್ಡ್, ವಾಹನ ಚಾಲನಾ ಪರವಾನಿಗೆ ಪತ್ರ, ಪಾಸ್‍ಪೋರ್ಟ್ ಅಳತೆಯ ಫೋಟೋ, ಕೊಲೆಗೆ ಬಳಸಿದ ಕೊಡಲಿ ಎಲ್ಲವನ್ನೂ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಇಟ್ಟಿಗೆಯನ್ನು ಇಟ್ಟು ಬಾವಿಗೆ ಎಸೆದು ಸಾಕ್ಷಿ ನಾಶಮಾಡಿ ಬಂದಿದ್ದಾರೆ.

ತನ್ನ ತಂದೆ ಕಾಣೆಯಾದ ಕುರಿತು ಮಗಳು ಪದೇ ಪದೇ ಕೇಳು ಆರಂಭಿಸಿದಾ, ಜಕರಾಯನ ತಂದೆ ಭೀಮರಾಯ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿ, ವಿಚಾರಣೇ ನಡೆಸಿದಾಗ ಅಕ್ರಮ ಸಂಬಂಧ ಹಾಗೂ ಸಾಕ್ಷಿ ನಾಶ ಪಡಿಸಿದ ವ್ಯವಸ್ಥಿತ ಸಂಚಿನ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮೀಣ ಉಪ ವಿಭಾಗದ ಡಿಎಸ್ಪಿ ಜಿ.ಎಚ್.ತಳಕಟ್ಟಿ, ಸಿಪಿಐ ಆರ್.ಎಸ್.ಜಾನರ, ಪಿಎಸ್‍ಐ ವಿನೋನ ಪೂಜಾರಿ, ಆರ್.ಎ.ದಿನ್ನಿ ಅವರ ನೇತೃತ್ವದಲ್ಲಿ ತನಿಖಾ ತಂಡ ಇಲಾಖೆಗೆ ಸವಾಲಾಗಿದ್ದ ಇಡೀ ಪ್ರಕರಣವನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.