ಸಿದ್ದು ಸಹಕಾರದಿಂದ ಬಬಲೇಶ್ವರ ಪ್ರಗತಿ

ನೂತನ ತಾಪಂ ಕಚೇರಿ ಉದ್ಘಾಟನೆಸುದೀರ್ಘ‌ ಹೋರಾಟದ ಪ್ರತಿಫಲ

Team Udayavani, Jun 25, 2020, 1:34 PM IST

25-June-13

ವಿಜಯಪುರ: ಬಬಲೇಶ್ವರ ಪಟ್ಟಣದಲ್ಲಿ ಬಬಲೇಶ್ವರ ನೂತನ ತಾಪಂ ಕಚೇರಿಯನ್ನು ಶಾಸಕ ಎಂ.ಬಿ. ಪಾಟೀಲ ಉದ್ಘಾಟಿಸಿದರು.

ವಿಜಯಪುರ: ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ನೀಡಿದ ಸಹಕಾರದಿಂದಾಗಿ ಬಬಲೇಶ್ವರ ತಾಲೂಕು ಕೇಂದ್ರವಾಗಿ ಘೋಷಿಸಲ್ಪಟ್ಟಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹೊಸ ತಾಲೂಕು ಕೇಂದ್ರಗಳ ರಚನೆ ಪ್ರಸ್ತಾವನೆ ಬಂದಾಗ ಬಬಲೇಶ್ವರ ನೂತನ ತಾಲೂಕು ಕೇಂದ್ರವಾಗಿ ಕಾರ್ಯಾರಂಭ ಮಾಡಲು ಅವಕಾಶ ಸಿಕ್ಕಿತು. ಅಲ್ಲದೇ ಬಬಲೇಶ್ವರ ಸಮಗ್ರ ಅಭಿವೃದ್ಧಿಗೆ ಅವರು ನೀಡಿದ ಸಹಕಾರವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಹೇಳಿದರು.

ಬುಧವಾರ ಬಬಲೇಶ್ವರ ಪಟ್ಟಣದಲ್ಲಿ ನೂತನ ತಾಪಂ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2002ರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ವಿಶೇಷ ತಹಶೀಲ್ದಾರ್‌ ಕಚೇರಿ ನಿಯೋಜಿತ ತಾಲೂಕು ಕೇಂದ್ರಗಳಿಗೆ ಕೊಡುಗೆಯಾಗಿ ನೀಡಿತ್ತು. ಆದರೆ ಬಬಲೇಶ್ವರಕ್ಕೆ ಮಾತ್ರ ಆ ಭಾಗ್ಯ ದೊರಕಿರಲಿಲ್ಲ. ಇದರಿಂದ ಡಾ| ಮಹಾದೇವ ಶ್ರೀಗಳ ಅಧ್ಯಕ್ಷತೆಯಲ್ಲಿ, ವಿ.ಎಸ್‌. ಪಾಟೀಲ ನೇತೃತ್ವದಲ್ಲಿ ಬಬಲೇಶ್ವರ ತಾಲೂಕು ಕೇಂದ್ರ ಹೋರಾಟ ಮಾಡಲಾಗಿತ್ತು. 2003ರಲ್ಲಿ 51 ದಿನಗಳವರೆಗೆ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಮಾಡಲಾಗಿತ್ತು. ಪರಿಣಾಮ ಅಂದು ನಾನು ನೀಡಿದ್ದ ಪತ್ರಕ್ಕೆ ಅಂದಿನ ಕಂದಾಯ ಸಚಿವ ಎಚ್‌.ಸಿ. ಶ್ರೀಕಂಠಯ್ಯ ಅವರು ವಿಶೇಷ ತಹಶೀಲ್ದಾರ್‌ ಕಚೇರಿ ಮಂಜೂರು ಮಾಡಿದ್ದರು. ಇಂಥ ಸುದೀರ್ಘ
ಹೋರಾಟ, ಸತತ ಪ್ರಯತ್ನದಿಂದಾಗಿ ಬಬಲೇಶ್ವರ ತಾಲೂಕು ಕೇಂದ್ರದ ಮಾನ್ಯತೆ ಪಡೆಯುವಂತಾಗಿದೆ ಎಂದು ವಿವರಿಸಿದರು.

ಜಿಲ್ಲೆಯನ್ನು ಬರಮುಕ್ತ ಮಾಡಲು ಕೋಟಿ ವೃಕ್ಷ ಅಭಿಯಾನ ಆರಂಭಿಸಿದ್ದು, ಲಾಲ್‌ಬಾಗ್‌ನಲ್ಲಿ ಬೆಳೆದಿರುವ ಎಲ್ಲ ತರಹದ ಸಸಿಗಳನ್ನು ವಿಜಯಪುರ ನಗರದ ಕರಾಡ ದೊಡ್ಡಿ 35 ಎಕರೆ ಪ್ರದೇಶದಲ್ಲಿ ನೆಟ್ಟು ಪೋಷಿಸಲಾಗಿದೆ. ಲಾಲ್‌ಬಾಗ್‌ ಎಂದರೆ ಹೂವಿನಿಂದ ಅಲಂಕೃತಗೊಂಡ ಪಾರ್ಕ್‌ ಮಾದರಿಯಂತೆ ವಿಜಯಪುರದ ಕರಾಡ ದೊಡ್ಡಿಯಲ್ಲಿ ಸಸ್ಯ ಸಂಗಮ ಹೆಸರಿನಲ್ಲಿ ಅಪರೂಪದ ಉದ್ಯಾನವನ ನಿರ್ಮಿಸಲಾಗುತ್ತಿದೆ ಎಂದರು.

ಜಿಪಂ ಸಿಇಒ ಗೋವಿಂದರೆಡ್ಡಿ, ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಬಬಲೇಶ್ವರ ತಾಪಂ ಇಒ ಬಿ.ಆರ್‌. ಬಿರಾದಾರ, ತಿಕೋಟಾ ತಾಪಂ ಇಒ ಬಿ.ಎಸ್‌. ರಾಠೊಡ, ಜಿಪಂ ಮಾಜಿ ಅಧ್ಯಕ್ಷ ವಿ.ಎಸ್‌. ಪಾಟೀಲ ಬಬಲೇಶ್ವರ, ನಂದಿ ಸಕ್ಕರೆ ಸಹಕಾರಿ ಕಾರ್ಖಾನೆ ಉಪಾಧ್ಯಕ್ಷ ಎಚ್‌.ಆರ್‌. ಬಿರಾದಾರ, ಜಿಪಂ ಸದಸ್ಯ ಕಲ್ಲಪ್ಪಣ್ಣ ಕೊಡಬಾಗಿ, ಬಬಲೇಶ್ವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಗೊಂಡ ಬಿರಾದಾರ, ಗ್ರಾಪಂ ಅಧ್ಯಕ್ಷೆ ಬೋರಮ್ಮ ಬೂದಿಹಾಳ, ಉಪಾಧ್ಯಕ್ಷೆ ನಿವೇದಿತಾ ಮರ‍್ಯಾಣಿ ಇದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.