ಆ.19 ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ: ಇಲ್ಲಿದೆ ಸಂಪರ್ಕ ವಿವರ
Team Udayavani, Aug 13, 2022, 3:49 PM IST
ವಿಜಯಪುರ: ಹಣಮಂತ ನಿರಾಣಿ ಫೌಂಡೇಶನ್ ಹಾಗೂ ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ವಿಜಯಪುರ ನಗರದಲ್ಲಿ ಆ.19 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುರೇಶ ಬಿರಾದಾರ ಹೇಳಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದ ಅವರು, ನಗರದ ಬಿಎಲ್ ಡಿಇ ಎಂಜಿನಿಯರಿಂಗ್ ಕಾಲೇಜ್ ಎದುರಿನ ಶಾಂತಿನಿಕೇತನ ಶಿಕ್ಷಣ ಸಮೂಹ ನಮೃತಾ ಕಾಲನಿಯಲ್ಲಿ ಮೇಳ ನಡೆಯಲಿದೆ. ಮೇಳಕ್ಕೆ ಈಗಾಗಲೇ ಸಕಲ ಸಿದ್ದತೆ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.
ಕೋವಿಡ್ ಕಾರಣದಿಂದ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಬೃಹತ್ ಪ್ರಮಾಣದ ಉದ್ಯೋಗ ಮೇಳ ಆಯೋಜಿಸಲಾಗಿದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಶೈಕ್ಷಣಿಕ ಅರ್ಹತೆ ಹೊಂದಿದವರನ್ನು ನೇಮಿಸಿಕೊಳ್ಳಲೆಂದೇ ಸುಮಾರು 75 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ. ಉದ್ಯೋಗ ಮೇಳದಲ್ಲಿ ಸಂದರ್ಶನಕ್ಕೆ ಹಾಜರಾಗುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ನಿರುದ್ಯೋಗಿ ಪದವೀಧರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಯಾವುದೇ ಪದವಿ, ತಾಂತ್ರಿಕ ಕೋರ್ಸ್, ಮಾರ್ಕೆಟಿಂಗ್ ಹಾಗೂ ಮ್ಯಾನೇಜ್ ಮೆಂಟ್ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಶಿಕ್ಷಣ ಪಡೆದ ವಿದ್ಯಾರ್ಥಿಗಳೂ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಂದರ್ಶನಕ್ಕೆ ಬರುವ ಉದ್ಯೋಗಾಕಾಂಕ್ಷಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಮತ್ತು ಸ್ವ ವಿವರ ಅರ್ಜಿಯನ್ನು ಇ ಮೇಲ್ [email protected] ಗೆ ಸಲ್ಲಿಸಬಹುದು. ಮಾಹಿತಿಗೆ ಮೊ. 9071772722, 9071776454, 9945000793 ಗೆ ಸಂಪರ್ಕಿಸಬಹುದು ಎಂದರು.
ಈರಣ್ಣ ಪಟ್ಟಣಶೆಟ್ಟಿ, ರಾಜು ಕಳಸಗೊಂಡ, ಈರಣ್ಣ ಹೆರಲಗಿ, ಐ.ಜಿ. ನ್ಯಾಮಗೌಡ, ವಿಜಯ ಜೋಶಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ