ರೈತರಿಂದ ರೈಲು ತಡೆ ಚಳವಳಿ ಎಚ್ಚರಿಕೆ

ಸೇತುವೆ ಕಾಮಗಾರಿಯಲ್ಲಿ ವಿಳಂಬ ನೀರು ಹರಿಸಲು ರೈಲ್ವೆ ಇಲಾಖೆ ಅಸಹಕಾರ

Team Udayavani, Mar 9, 2020, 3:54 PM IST

9-March-16

ವಿಜಯಪುರ: ಮುಳವಾಡ ಏತ ನೀರಾವರಿ ಕಾಲುವೆಗೆ ನೀರು ಹರಿಸಿ ಕೆರೆ ಹಾಗೂ ಬಾಂದಾರಗಳನ್ನು ತುಂಬಿಸಬೇಕಿದೆ. ಕೂಡಗಿ ಬಳಿ ಹಾಯ್ದು ಹೋಗಿರುವ ಕಾಲುವೆ ಮಾರ್ಗದಲ್ಲಿ ರೈಲ್ವೆ ಸೇತುವೆ ಕೆಳಗೆ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದು ಸಮಸ್ಯೆ ಆಗುತ್ತಿದೆ. ಕೂಡಗಿ ಬಳಿ ಮಣ್ಣಿನ ರಾಶಿ ತೆಗೆಯಯವಲ್ಲಿ ರೈಲ್ವೆ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಜಿಲ್ಲೆ ನೀರಾವರಿ ಅನುಷ್ಠಾನಕ್ಕೆ ತೊಂದರೆ ಉಂಟಾಗುತ್ತಿದೆ. ತಕ್ಷಣ ರೈಲ್ವೆ ಇಲಾಖೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಬರುವ ದಿನಗಳಲ್ಲಿ ರೈಲು ತಡೆ ಹೋರಾಟ ಹಮ್ಮಿಕೊಳ್ಳುವುದಾಗಿ ರೈತರು ಎಚ್ಚರಿಸಿದ್ದಾರೆ.

ನಗರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಡಾ|ಔದ್ರಾಮ್‌ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈಲ್ವೆ ಇಲಾಖೆ ಅನಗತ್ಯ ವಿಳಂಬದ ಮೂಲಕ ನಾಲೆಗೆ ನೀರು ಹರಿಸಲು ಸಮಸ್ಯೆ ಆಗುತ್ತಿದೆ. ಕೂಡಲೇ ರೈಲ್ವೆ ಇಲಾಖೆ ರೈತರ ನೀರಾವರಿಗಾಗಿ ರೈಲ್ವೆ ಸೇತುವೆ ಕಾಮಗಾರಿ ತ್ವರಿತಗೊಳಿಸುವ ಜೊತೆಗೆ ನಾಲೆಗೆ ನೀರು ಹರಿಸಲು ತೊಡಕಾಗಿರುವ ಮಣ್ಣಿನ ರಾಶಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಕೂಡಗಿ ರೈಲ್ವೆ ಬ್ರಿಜ್ಡ್  ಬಳಿ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ಸ್ಥಳದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿ ರೈಲು ತಡೆ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಕೂಡಗಿ ಬಳಿ ಮುಳವಾಡ ಏತ ನೀರಾವರಿ ಕಾಲುವೆಯಲ್ಲಿ ರೈಲ್ವೆ ಸೇತುವೆ ಕೆಳಗೆ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ನಡೆಯುತ್ತಿದೆ. ಮಂದಗತಿಯಲ್ಲಿ ಬಾಕ್ಸ್‌ ಪುಸ್ಸಿಂಗ್‌ ನಡೆಯುತ್ತಿದೆ. ಸದರಿ ಕಾಮಗಾರಿ ಸ್ಥಳದಲ್ಲಿ ಕಾಲುವೆಗೆ ನೀರು ಹರಿಸಲಕು ತೊಡಕಾಗಿರುವ ಮಳೆ ಮಣ್ಣಿನ ರಾಶಿಯನ್ನು ಹೊರ ಹಾಕುವಲ್ಲಿ ವಿಳಂಬ ಮಾಡಲಾಗುತ್ತಿದೆ. ಇದರಿಂದಾಗಿ ಬೇಸಿಗೆ ನಿಗ್ರಹಕ್ಕಾಗಿ ಮಾರ್ಚ್‌ ತಿಂಗಳಲ್ಲಿ ಕಾಲುವೆಗೆ ನೀರು ಹರಿಸುವ ಯೋಜನೆ ಕೈಗೂಡುವುದು ಅನುಮಾನವಾಗಿದೆ. ವಿಳಂಬವಾದಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ನೀರಿನ ಆಹಾಕಾರ ಉಂಟಾಗಲಿದೆ ಎಂದು ಆಕ್ರೋಶ ಹೊರ ಹಾಕಿದರು.

ಮುಳವಾಡ ಏತ ನೀರಾವರಿ, ಚಿಮ್ಮಲಗಿ ಏತ ನೀರಾವರಿ ಕಾಲವೆಗಳಿಗೆ ನೀರು ಹರಿಸಿ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ, ಕುಲಬೆಂಚಿ, ವಡವಡಗಿ, ನಾಗರಾಳ ಹುಲಿ, ಸೋಮನಾಳ, ತಳೇವಾಡ, ಮನಗೂಳಿ, ಮಸೂತಿ, ಗ್ರಾಮಗಳ ವ್ಯಾಪ್ತಿಗೆ ಬರುವ ಹಾಗೂ ಸಿಂದಗಿ ತಾಲೂಕಿನ ಬಮ್ಮನಜೋಗಿ, ಕನ್ನೋಳ್ಳಿ, ಬೋರಗಿ, ಬ್ಯಾಕೋಡ, ಕೊಗಟನೂರು, ಇಬ್ರಾಹಿಂಪುರ, ಹುರದಾಳ ಗ್ರಾಮಗಳ ವ್ಯಾಪ್ತಿಗೆ ಬರುವ ಕೆರೆಗಳಿಗೆ ಹಾಗೂ ಬಾಂದಾರಗಳಿಗೆ ಕೋರವಾರ ಶಾಖಾ ಕಾಲುವೆ ಮುಖಾಂತರ ನೀರು ಹರಿಸಿ ಕರೆ ಬಾಂಬಾರ ತುಂಬಿಸಬೇಕಿದೆ. ಕುಂಟು ನೆಪಗಳನ್ನು ಹೇಳದೇ ಮೂರ್ನಾಲ್ಕು ದಿನಗಳಲ್ಲಿ ನಾಲೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ರೈಲು ತಡೆ ಹೋರಾಟ ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿದರು.

ಸದಾಶಿವ ಬರಟಗಿ, ಸಿದ್ದರಾಮ ಅಂಗಡಗೇರಿ, ರೇವಣೆಪ್ಪ ಕಡಗೋಲ, ಗಂಗಯ್ಯ ಚಿಕ್ಕಮಠ, ಅಣ್ಣುಗೌಡ ಪಾಟೀಲ, ವಿಠ್ಠಲ ಬಿರಾದಾರ, ಕಾಸಪ್ಪ ಬಡಿಗೇರ, ರವಿ ಕೊಲ್ಲೂರ, ದೇವೇಂದ್ರ ಕೊಡೇಕಲ, ಸುರೇಖಾ ರಜಪೂತ, ರಾಮಣ್ಣ ಶಿರಮಗೋಳ, ಖಾಜೇಸಾಬ ಕೋಲಾರ, ಮಳಸಿದ್ದ ನಾಯ್ಕೋಡಿ, ಗಂಗಯ್ಯ ಚಿಕ್ಕಮಠ, ಮಹಮ್ಮದ ಅಲಿ ಕೊಲಾರ, ಭೂತಾಳಿ ಪೂಜೇರಿ, ರಮೇಶ ತೋಟದ, ಜಿ.ಎಸ್‌. ಇಂಗಳಗಿ, ಸಂಗಮೇಶ ಬಾಗಿ, ಮಳಿಸಿದ್ದ ನಾಯ್ಕೋಡಿ, ನಾಗಪ್ಪ ಹಡಪದ, ಮೈಬೂಸಾಬ ಮುಲ್ಲಾ, ಬಸವರಾಜ ಅಗಸರ, ಕಾಸಪ್ಪ ಬಡಿಗೇರ, ಸಿದ್ದಪ್ಪ ಕೊರಬು, ಲಾಲಸಾಬ ಹಳ್ಳೂರ, ಈರಣ್ಣ ಮಠಪತಿ, ಕೃಷ್ಣಪ್ಪ ಬಮ್ಮರಡ್ಡಿ, ಧರೆಪ್ಪ ಅವಟಿ, ಚಂದ್ರಾಮ ತೆಗ್ಗಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.