ಕೋಟಿವೃಕ್ಷ ಅಭಿಯಾನ ಯಶಸ್ಸಿಗೆ ಒಗ್ಗಟ್ಟು ಅಗತ್ಯ

ಭೂತನಾಳ-ಕರಾಡದೊಡ್ಡಿ ಪ್ರದೇಶದಲ್ಲಿ 285 ಜಾತಿ ಪಕ್ಷಿ ಪ್ರಬೇಧ ಪತ್ತೆ  ಪ್ರಸಕ್ತ ವರ್ಷ 25 ಲಕ್ಷ ಸಸಿ ನೆಡುವ ಗುರಿ

Team Udayavani, May 29, 2020, 12:26 PM IST

29-May-06

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿ ಕೋಟಿ ವೃಕ್ಷ ಅಭಿಯನಕ್ಕಾಗಿ ಈ ವರ್ಷ ಸಸಿ ನೆಡುವ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ವಿಜಯಪುರ: ಮುಂಗಾರು ಮಳೆ ಪ್ರಾರಂಭವಾಗಲಿರುವ ಕಾರಣ ಕೋಟಿ ವೃಕ್ಷ ಅಭಿಯಾನ ಸಂಪೂರ್ಣ ಸಫಲತೆ ಸಾಧಿಸಲು ಜಿಲ್ಲೆಯ ಅಧಿಕಾರಿಗಳು, ಸಾರ್ವಜನಿಕರು ಒಗ್ಗಟ್ಟಿನಿಂದ ಕೈಜೋಡಿಸಬೇಕು. ಜಿಲ್ಲೆಯಲ್ಲಿ 1 ಕೋಟಿ ಸಸಿ ಬೆಳೆಸುವ ಗುರಿಯಲ್ಲಿ ಬಾಕಿ ಇರುವ 25 ಲಕ್ಷ ಸಸಿ ನೆಡುವ ಗುರಿ ಸಾಧನೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಕೋಟಿ ವೃಕ್ಷ ಅಭಿಯಾನದ ಪೂರ್ವ ಸಿದ್ಧತೆ ಕುರಿತು ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಕಳೆದ 4 ವರ್ಷಗಳಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 75 ಲಕ್ಷ ಸಸಿ ನೆಡಲಾಗಿದೆ. ಈ ವರ್ಷ 25 ಲಕ್ಷ ಸಸಿ ನೆಡುವ ಮೂಲಕ ಜಿಲ್ಲೆಯಲ್ಲಿ ಕೋಟಿ ವೃಕ್ಷ ನೆಡುವ ಹಾಗೂ ಬೆಳೆಸುವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಭೂತನಾಳ ಕೆರೆ ಬಳಿಯ ಕರಾಡದೊಡ್ಡಿ ಸೇರಿದಂತೆ ಜಿಲ್ಲೆಯಾದ್ಯಂತ ಈಗಾಗಲೇ ನೆಡಲಾಗಿರುವ 75 ಲಕ್ಷ ಸಸಿಗಳು ಮರವಾಗಿ ಬೆಳೆಯುತ್ತಿವೆ. ಇದರಿಂದ ಪಕ್ಷಿ ಸಂಕುಲಕ್ಕೆ ಹೆಚ್ಚಿನ ರೀತಿಯ ಆಕರ್ಷಣೆಯಾಗುತ್ತಿದೆ. ಜಿಲ್ಲೆಯಲ್ಲಿ ವಿವಿಧ ಜಾತಿ, ಪ್ರಬೇಧಕ್ಕೆ ಸೇರಿದ 285 ಪಕ್ಷಿಗಳಿದ್ದು, ಭೂತನಾಳದ ಸುತ್ತಮುತ್ತಲಿನ ಒಂದೇ ಪ್ರದೇಶದಲ್ಲಿ 185ಕ್ಕೂ ಹೆಚ್ಚು ವಿವಿಧ ಜಾತಿಯ ಪಕ್ಷಿ ಸಂಕುಲ ವಾಸ ಇರುವುದು ಪತ್ತೆಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಅರಣ್ಯವಲಯ ಹೆಚ್ಚಿನ ಪ್ರಮಾಣದಲ್ಲಿ ಬಲ ಹೊಂದುತ್ತಿದೆ. ಅರಣ್ಯ ಪ್ರದೇಶಕ್ಕೆ ನಾವೆಲ್ಲರು ಹೆಚ್ಚಿನ ರೀತಿಯಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಈ ವರ್ಷ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 25 ಲಕ್ಷ ಸಸಿ ನೆಡುವ ಗುರಿ ಮುಟ್ಟಲು ಕೆಬಿಜೆಎನ್‌ಎಲ್‌ ಹಾಗೂ ವಿವಿಧ ನರ್ಸರಿಗಳಿಂದ 8 ಲಕ್ಷ ಸಸಿ ಗುರುತಿಸಿ ಜೂನ್‌ ತಿಂಗಳಲ್ಲಿ ನೆಡುವ ಕಾರ್ಯ ಆರಂಭಿಸಬೇಕು. ವಿವಿಧ ಜಾತಿಯ ಸಸಿಗಳನ್ನು ಜಿಲ್ಲೆಯ ವಾತಾವರಣಕ್ಕೆ ಹೊಂದಿಕೊಳ್ಳುವಂತೆ ನೋಡಿಕೊಳ್ಳಬೇಕು. ಅವುಗಳ ಸೂಕ್ತ ಪೋಷಣೆ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಆಕ್ರಮಿತ ಪ್ರದೇಶ ಹಾಗೂ ಖಾಲಿ ಇರುವ ಜಾಗಗಳನ್ನು ಈಗಲೇ ಗುರುತಿಸಲು ಪ್ರಾರಂಭಿಸಬೇಕು. ಜತೆಗೆ ಸಸಿ ನೆಡಲು ಇರಾದೆ ವ್ಯಕ್ತವಾಗಿದ್ದು, ಜಿಲ್ಲೆಯ ವಾತಾವರಣಕ್ಕೆ ಹೊಂದಿಕೊಳ್ಳುವ ವಿವಿಧ ಜಾತಿಯ ಸಸಿ ನೆಡಲು ಹಾಗೂ ಅವುಗಳನ್ನು ಮರವಾಗಿ ಬೆಳೆಸಲು ಆದ್ಯತೆ ನೀಡಬೇಕು. ಜೂನ್‌ ಮೊದಲ ವಾರದಿಂದ ಕೆಬಿಜೆಎನ್‌ ಎಲ್‌ ನರ್ಸರಿಗಳಲ್ಲಿ ಕೃಷ್ಣಾ ನದಿ ತೀರದ ರೈತರಿಗೆ ಸಸಿ ವಿತರಣೆ ಆರಂಭಿಸಬೇಕು. ವಿವಿಧ ನರ್ಸರಿಗಳು ತಮ್ಮಲ್ಲಿರುವ ಸಸಿಗಳ ಮಾಹಿತಿ ನೀಡಬೇಕು. ಸರ್ಕಾರಿ ಕಚೇರಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಸಸಿ ನೆಡುವಂತಾಗಬೇಕು. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿರುವ ಉದ್ಯಾನವನಗಳ ಸುತ್ತಲು ಗಿಡಗಳನ್ನು ನೆಡಬೇಕು ಹಾಗೂ ಅವುಗಳ ಪಾಲನೆ, ಪೋಷಣೆ ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋಟಿವೃಕ್ಷ ಅಭಿಯಾನದ ಅಂಗವಾಗಿ ಜಿಲ್ಲೆಯ ಕರಾಡದೊಡ್ಡಿ ಪ್ರದೇಶದಲ್ಲಿ ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ಸಸ್ಯ ಸಂಗಮ ಉದ್ಯಾನವನ ನಿರ್ಮಿಸಲು ವಿವಿಧ ಜಾತಿಯ ಗಿಡಗಳ ವರದಿ ಪಡೆಯಲಾಗಿದೆ. ಈ ಕುರಿತು ಕೂಡಲೇ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ವಿಜಯಪುರ ಉಪವಿಭಾಗಾ ಧಿಕಾರಿ ಸೋಮಲಿಂಗ ಗೆಣ್ಣೂರ, ಸಂಗಮೇಶ ಬಿರಾದಾರ, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.