ಲಾಕ್‌ ಡೌನ್‌: ಜಿಲ್ಲೆ ಸಂಪೂರ್ಣ ಸ್ತಬ್ಧ

ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಆದೇಶಕ್ಕೆ ಜನರ ಸ್ಪಂದನೆ

Team Udayavani, May 25, 2020, 11:39 AM IST

25-May-5

ವಿಜಯಪುರ: ಕೋವಿಡ್ ನಿಯಂತ್ರಣಕ್ಕೆ ಕರ್ಫ್ಯೂ ಘೋಷಣೆ ಹಿನ್ನೆಲೆಯಲ್ಲಿ ನಗರದ ಮಹಾತ್ಮಾ ಗಾಂಧಿ ವೃತ್ತ ಬಿಕೋ ಎನ್ನುತ್ತಿತ್ತು.

ವಿಜಯಪುರ: ಕೋವಿಡ್‌-19 ಕೋವಿಡ್ ಸೋಂಕು ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ರವಿವಾರ ವಿಧಿಸಿದ್ದ ಕರ್ಫ್ಯೂ ವಿಜಯಪುರ ನಗರ ಸೇರಿದಂತೆ ಜಿಲ್ಲೆ ಸಂಪೂರ್ಣ ಸ್ತಬ್ಧಗೊಳ್ಳುವ ಮೂಲಕ ಪೂರ್ಣ ಪ್ರಮಾಣದಲ್ಲಿ ಸ್ಪಂದನೆ ವ್ಯಕ್ತವಾಗಿದೆ.

ಮಾರ್ಚ 22 ರಂದು ಜನತಾ ಕರ್ಫ್ಯೂ ನಂತರ ಎರಡು ತಿಂಗಳ ಬಳಿಕ ಸರ್ಕಾರ ರಾಜ್ಯದಾದ್ಯಂತ ಘೋಷಿಸಿದ ವಾರದ ಕೊನೆ ದಿನ ಕರ್ಫ್ಯೂ ಆದೇಶಕ್ಕೆ ವಿಜಯಪುರ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ರಂಜಾನ್‌ ಹಬ್ಬಕ್ಕೆ ಮುನ್ನಾ ದಿನವೇ ಘೋಷಿತವಾದ ಕರ್ಫ್ಯೂಗೆ ವಿಜಯಪುರ ಜಿಲ್ಲೆಯಲ್ಲಿ ಸೂಕ್ತ ಸ್ಪಂದನೆ ಸಿಕ್ಕಿದೆ. ಬೆಳಗ್ಗೆಯಿಂದಲೇ ನಗರದ ಪ್ರಮುಖ ರಸ್ತೆಗಳು ಜನ ಸಂಚಾರ ಇಲ್ಲದೇ ಬಿಕೋ ಎನ್ನತೊಡಗಿತ್ತು. ಅಲ್ಲಲ್ಲಿ ಕೆಲವರು ತುರ್ತು ಕೆಲಸಗಳಿಗೆ ಬೈಕ್‌, ಲಘು ವಾಹನಗಳ ಓಡಾಟ ಕಂಡು ಬಂದರೂ ಪೊಲೀಸರ ಎಚ್ಚರಿಕೆ ಕಾರಣ ಅನಗತ್ಯ ರಸ್ತೆಗೆ ಇಳಿಯುವವರೂ ಕಾಣಿಸಿಕೊಳ್ಳಲಿಲ್ಲ.

ಕರ್ಫ್ಯೂ ರವಿವಾರ ಇದ್ದ ಕಾರಣ ಸರ್ಕಾರಿ ಕಚೇರಿಗಳಿಗೂ ಸಹಜವಾಗಿ ರಜೆ ಇದ್ದು, ಸರ್ಕಾರಿ ಸೇವೆಯ ಕರ್ತವ್ಯಕ್ಕೆ ತೆರಳುವವರೂ ರಸ್ತೆಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ವಾರದಿಂದ ಬಸ್‌ ಸಂಚಾರ ಆರಂಭಗೊಂಡು ಮತ್ತೆ ತನ್ನ ವೈಭವ ಕಂಡುಕೊಂಡಿದ್ದ ನಗರದ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ಜಿಲ್ಲೆಯ ಎಲ್ಲ ಬಸ್‌ ನಿಲ್ದಾಣಗಳು ಮತ್ತೆ ಸ್ತಬ್ಧಗೊಂಡಿದ್ದವು. ನಗರದ ಪ್ರಮುಖ ವಾಣಿಜ್ಯ ಕೇಂದ್ರ ಎನಿಸಿರುವ ಮಹಾತ್ಮಾ ಗಾಂಧೀಜಿ ವೃತ್ತದ ಸುತ್ತಲ ಪ್ರದೇಶಗಳಾದ ಲಾಲ್‌ ಬಹದ್ದೂರ ಶಾಸ್ತ್ರಿ ಮಾರುಕಟ್ಟೆ, ಕಿತ್ತೂರ ರಾಣಿ ಚನ್ನಮ್ಮ ಮಾರುಕಟ್ಟೆ, ನೆಹರು ಮಾರುಕಟ್ಟೆ, ಶ್ರೀ ಸಿದ್ಧೇಶ್ವರ ದೇವಸ್ಥಾನ ರಸ್ತೆ, ಕಿರಾಣಿ ಬಜಾರ್‌ ಸೇರಿದಂತೆ ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳು ಶನಿವಾರ ಸಂಜೆ 7 ರಿಂದಲೇ ಬಾಗಿಲು ಹಾಕಿದ್ದರಿಂದ ರವಿವಾರ ಮಾರುಕಟ್ಟೆ ಪ್ರದೇಶ ಸಂಪೂರ್ಣ ಬಿಕೋ ಎನ್ನುತ್ತಿತ್ತು.

ಜನತಾ ಕರ್ಫ್ಯೂ ಬಳಿಕ ಕೋವಿಡ್‌ ಸೋಂಕಿನ ವೇಗ ನಿಗ್ರಹಕ್ಕೆ ಕೇಂದ್ರ ಸರ್ಕಾರ ಸರಾಸರಿ ಒಂದೂವರೆ ತಿಂಗಳು ಘೋಷಿಸಿದ್ದ ಲಾಕ್‌ಡೌನ್‌ನಿಂದಲೂ ವಿಜಯಪುರ ಜಿಲ್ಲೆ ಸ್ತಬ್ಧವಾಗಿತ್ತು. ಸರಕು ವಾಹನಗಳ ಹೊರತಾಗಿ ಸಾರಿಗೆ ಸಂಸ್ಥೆಯ ಬಸ್‌, ನಗರ ಸಾರಿಗೆ, ಆಟೋ ಸೇರಿದಂತೆ ಎಲ್ಲ ರೀತಿಯ ಜನಸಾರಿಗೆಯೂ ನಿಷೇಧಿಸಲ್ಪಟ್ಟಿತ್ತು. ರವಿವಾರದ ಕರ್ಫ್ಯೂ ಸಂದರ್ಭದಲ್ಲಿ ಕೂಡ ರಸ್ತೆಗಳು ಮತ್ತೆ ಸಂಪೂರ್ಣ ಸ್ತಬ್ಧವಾಗಿ, ನಿರ್ಜನವಾಗಿದ್ದವು. ಕರ್ಫ್ಯೂ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ವಾಹನಗಳು ಗಸ್ತು ತಿರುಗುತ್ತಿದ್ದವು. ಮತ್ತೊಂದೆಡೆ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿದ್ದ ಪೊಲೀಸರು ಸಂಚಾರ ಬಂದ್‌ ಮಾಡಿದ್ದರು. ವೈದ್ಯರು ಸೇರಿದಂತೆ ಕೋವಿಡ್‌ ವಾರಿಯರ್‌ಗಳು ಹಾಗೂ ತುರ್ತು ಸೇವೆಗೆ ತೆರಳುವವರು ಗುರುತಿನ ಪತ್ರ ಪರಿಶೀಲನೆ ಬಳಿಕ ಅನುಮತಿಸಲಾಗುತ್ತಿತ್ತು.

Ad

ಟಾಪ್ ನ್ಯೂಸ್

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Muddebihal: ಆಕಾಶದತ್ತ ಮುಖ ಮಾಡಿದ ಅನ್ನದಾತ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

19

Vijayapura: ಖಾಸಗಿ ಶಾಲೆ-ತರಗತಿ: ವಿಜಯಪುರದ್ದೇ ಸಿಂಹಪಾಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.