ಸಿಬ್ಬಂದಿಗೆ ಉತ್ತಮ ಊಟದ ವ್ಯವಸ್ಥೆ ಮಾಡಿ

2101 ಮತಗಟ್ಟೆಸಿಬ್ಬಂದಿಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಚುನಾವಣಾಧಿಕಾರಿ ಕನಗವಲ್ಲಿ

Team Udayavani, Apr 12, 2019, 1:36 PM IST

12-April-17

ವಿಜಯಪುರ: ಚುನಾವಣಾ ಸಿಬ್ಬಂದಿಗೆ ಊಟದ ವ್ಯವಸ್ಥೆ ಕಲ್ಪಿಸುವ ಕುರಿತು ಡಿಸಿ ಎಂ. ಕನಗವಲ್ಲಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಜರುಗಿತು.

ವಿಜಯಪುರ: ಲೋಕಸಭಾ ಚುನಾವಣೆ ಅಂಗವಾಗಿ ಸ್ಥಾಪಿಸಲಾಗಿರುವ ಜಿಲ್ಲೆಯ 2101 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮಸ್ಟರಿಂಗ್‌-ಡಿ- ಮಸ್ಟರಿಂಗ್‌ ದಿನ ಹಾಗೂ ಮತದಾನ ದಿನದಂದು ಚುನಾವಣಾ ಸಿಬ್ಬಂದಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಊಟ-ಉಪಾಹಾರದ ವ್ಯವಸ್ಥೆ ಮಾಡುವಂತೆ
ಜಿಲ್ಲಾ ಚುನಾವಣಾ ಅಧಿಕಾರಿ ಎಂ.ಕನಗವಲ್ಲಿ ಸೂಚಿಸಿದರು.

ಗುರುವಾರ ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದ ಅವರು, ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನದ ಮುನ್ನ ದಿನ ಹಾಗೂ ಮತದಾನ ದಿನದಂದು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಸಿಬ್ಬಂದಿಗಳಿಗೆ ಊಟೋಪಾಹಾರದ
ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ದೂರು ಬಂದಲ್ಲಿ ಸಂಬಂಧಪಟ್ಟವರಿಗೆ ನೊಟೀಸ್‌ ನೀಡದೇ ತಕ್ಷಣ ಅಮಾನತ್ತಿನ ಕ್ರಮ
ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2101
ಮತಗಟ್ಟೆಗಳಿದ್ದು, ಪ್ರತಿಯೊಂದು ಮತಗಟ್ಟೆಗೆ ಅಲೊ³àಪಾಹಾರ
ಹಾಗೂ ಉಪಾಹಾರಕ್ಕಾಗಿ ತಲಾ 1,250 ರೂ. ಹಾಗೂ
ಕುಡಿಯುವ ನೀರಿಗಾಗಿ 100 ರೂ. ಸೇರಿದಂತೆ 1,350 ರೂ. ಕಾಯ್ದಿರಿಸಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮತದಾನದ ಪೂರ್ವದಿನ
ಮಧ್ಯಾಹ್ನ ಊಟ, ಸಂಜೆ ಅಲ್ಪೋಪಾಹಾರ ಹಾಗೂ ರಾತ್ರಿ ಊಟದ ವ್ಯವಸ್ಥೆ ಅದರಂತೆ ಮತದಾನ ದಿನದಂದು ಬೆಳಿಗ್ಗೆ ಅಲ್ಪೋಪಾಹಾರ, 11ಗಂಟೆಗೆ ಟೀ ವ್ಯವಸ್ಥೆ, ಮಧ್ಯಾಹ್ನ ಊಟ ಹಾಗೂ ಸಂಜೆ ಅಲ್ಪೋಪಾಹಾರದ ವ್ಯವಸ್ಥೆ
ಮಾಡಬೇಕು. ಇದರಲ್ಲಿ ಯಾವ ಲೋಪವಿಲ್ಲದೇ ಉತ್ತಮ ರೀತಿಯ ಸೌಲಭ್ಯ ಕಲ್ಪಿಸಬೇಕು. ಆರೋಗ್ಯಕ್ಕೆ ಹಿತರಕವಾದ ಆಹಾರ
ಬಳಸಬೇಕು. ಯಾವುದೇ ರೀತಿಯ ದೂರುಗಳು ಬಂದಲ್ಲಿ ಕಟ್ಟುನಿಟ್ಟಿನ
ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ಏಕಮತಗಟ್ಟೆ ಹಾಗೂ ಒಂದೇ
ಕಡೆ ಒಂದಕ್ಕಿಂತ ಹೆಚ್ಚಿರುವ ಮತಗಟ್ಟೆಗಳಲ್ಲಿ ಸಹಾಯಕರ ನೆರವಿನೊಂದಿಗೆ
ಸಿಬ್ಬಂದಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಾಹಾರದ ವ್ಯವಸ್ಥೆಯಾಗಬೇಕು. ಒಂದೇ ಕಡೆ ಎರಡರಿಂದ ಮೂರು ಮತಗಟ್ಟೆಗಳಿರುವ ಪ್ರದೇಶದಲ್ಲಿ ಒಂದೇ ಸ್ಥಳದಲ್ಲಿ ಊಟದ ವ್ಯವಸ್ಥೆ ಮಾಡಿ ಇನ್ನೊಂದು ಮತಗಟ್ಟೆಗೆ ಆಹಾರ ಪೂರೈಸಲು ಸಹಾಯಕರೊಬ್ಬರನ್ನು ನಿಯೋಜಿಸಿಕೊಳ್ಳುವಂತೆ ತಿಳಿಸಿದರು.

ಶಾಲಾ ಕಟ್ಟಡಗಳಲ್ಲಿರುವ ಮತಗಟ್ಟೆಗಳು ಹಾಗೂ ಶಾಲೆ ಹೊರತುಪಡಿಸಿ ಇರುವ ಮತಗಟ್ಟೆಗಳನ್ನು ಗುರುತಿಸಿದ್ದು, ಅದರನ್ವಯ ಅಚ್ಚುಕಟ್ಟಾದ ಊಟೋಪಾಹಾರದ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಸಂಪೂರ್ಣ ರೀತಿಯ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ವಹಿಸಿಕೊಂಡಲ್ಲಿ ಮಾತ್ರ ಯಾವುದೇ ಲೋಪಕ್ಕೆ ಅವಕಾಶವಿರುವುದಿಲ್ಲ. ಇದಕ್ಕಾಗಿ ತಕ್ಷಣ ಸಂಬಂಧಿ ಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದ ಅವರು, ತಾಪಂ ಇಓ, ಡಿಸಿಪಿಐ, ಅಕ್ಷರ ದಾಸೋಹ ಅ ಧಿಕಾರಿಗಳ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಿಕೊಂಡು ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಕ್ಷರ ದಾಸೋಹದ ಜಿಲ್ಲಾ ಶಿಕ್ಷಣಾಧಿಕಾರಿ ವೀರೇಶ ಜೇವರ್ಗಿ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಎಚ್‌. ಪ್ರಸನ್ನ ಸೇರಿದಂತೆ ಇತರ
ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.