Vijayapura; ಮುಂಗಾರು ಮಳೆ ವಿಫಲ: ಕತ್ತೆಗಳ ಮದುವೆ…!
Team Udayavani, Jul 12, 2023, 7:17 PM IST
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಮಳೆಗಾಗಿ ಜಿಲ್ಲೆಯ ಜನರು ಸಾಂಪ್ರದಾಯಿಕದ ಆಚರಣೆಗೆ ಮುಂದಾಗಿದ್ದಾರೆ.ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ರೈತರು ಮಳೆಗಾಗಿ ಕತ್ತೆಗಳ ಮದುವೆ ಹಾಗೂ ವಿಶೇಷ ಹೋಮ, ಹವನ, ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಗ್ರಾಮದ ಹಿರಿಯರೆಲ್ಲ ಸೇರಿ ಸಾಂಪ್ರದಾಯಿಕ ಆಚರಣೆಗಾಗಿ ಕತ್ತೆಗಳಿಗೆ ಶಾಸ್ತ್ರೋಕ್ತ ಮದುವೆಗಾಗಿ ಬಾಸಿಂಗ್ ಕಟ್ಟಿ, ಹೂಮಾಲೆ ಹಾಕಿ ವಧು-ವರರಂತೆ ಸಿಂಗರಿಸಿ ಮದುವೆ, ಅಕ್ಷತಾ ಕಾರ್ಯಕ್ರಮ ನಡೆಸಿದ್ದಾರೆ. ಮುತೈದೆಯರು ತಲೆಯ ಮೇಲೆ ಕುಂಬ ಕಳಸ ಹೊತ್ತು ಸಾಗುತ್ತಾ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಗುಲಾಲು ಎರಚಿ ಮೆರವಣಿಗೆ ಮಾಡಿದ್ದಾರೆ. ಕತ್ತೆಗಳ ಮೆರವಣಿಗೆ ಸಾಗುತ್ತಿದ್ದಂತೆ ಯುವಕರು ಡೊಳ್ಳು ಬಡಿಯುತ್ತಾ ಬಾಜಾ ಭಜಂತ್ರಿ ವಾಧ್ಯಗಳೊಂದಿಗೆ ಮೆರವಣಿಗೆಗೆ ಮೆರಗು ನೀಡಿದ್ದಾರೆ.
ಕಳೆದ ವರ್ಷ ಮಾರ್ಚ್-ಎಪ್ರಿಲ್ ಸಮಯದಲ್ಲಿ ಬೇಸಿಗೆಯ ಅರಿವು ನಮಗೆ ಆಗಗಿಲ್ಲ. ಬೇಸಿಗೆ ಇದ್ದರೂ ಶಾಸಕ ಎಂ.ಬಿ.ಪಾಟೀಲ ಮಾಡಿದ ನೀರಾವರಿ ಯೋಜನೆಯಿಂದ ನೀರಿನ ಸಮಸ್ಯೆ ಉದ್ಬವಿಸಲಿಲ್ಲ. ಆದರೆ ಈ ಬಾರಿ ಮಳೆಯೂ ಆಗಿಲ್ಲ, ಪ್ರಸಕ್ತ ವರ್ಷ ಕೃಷ್ಣಾ ನದಿಗೆ ನೀರು ಹರಿಯದೇ ಕಾಲುವೆಗಳಿಗೂ ನೀರು ಇಲ್ಲವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಇದರಿಂದಾಗಿ ದೇವರಲ್ಲಿ ಮಳೆಗಾಗಿ ಸಾಂಪ್ರದಾಯಿಕ ಆಚರಣೆಯಂತೆ ಕತ್ತೆಗಳ ಮದುವೆ ಮಾಡಿದ್ದೇವೆ. ಸಾಂಪ್ರದಾಯಿಕ ಈ ಆಚರಣೆಯಿಂದ ಮಳೆ ಬರುವ ನಂಬಿಕೆ ಇದೆ. ಹೀಗಾಗಿ ಕತ್ತೆಗಳ ಮದುವೆ ಮಾಡಿದ್ದೇವೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ