Vijayapura; ನನ್ನ ಮುಖನೋಡಿ ಯಾರೂ ವೋಟ್ ಹಾಕಲ್ಲ, ಮೋದಿ ಮುಖ ನೋಡಿ ಹಾಕ್ತಾರೆ: ಜಿಗಜಿಣಗಿ
Team Udayavani, Apr 2, 2024, 3:38 PM IST
ವಿಜಯಪುರ: ನನ್ನ ಮುಖ ನೋಡಿ ಯಾರೂ ವೋಟ್ ಹಾಕುದಿಲ್ಲ, ಮೋದಿ ಅವರ ಮುಖ ನೋಡಿ ವೋಟ್ ಹಾಕುತ್ತಾರೆ ಎಂದು ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ನಗರದಲ್ಲಿ ಬಿಜೆಪಿ, ಜೆಡಿಎಸ್ ಜಿಲ್ಲಾಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಹಣದಲ್ಲಿ ವಿಜಯಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಹೀಗಾಗಿ ಮೋದಿ ಮುಖ ನೋಡಿ ವೋಟು ಹಾಕುತ್ತಾರೆ ಎಂದು ಮೋದಿ ಪ್ರಭಾವ ಬೀರುವಿಕೆಯನ್ನು ಸಮರ್ಥಿಸಿದರು.
ರಾಜ್ಯದಲ್ಲಿ ಪಾಪಿಸ್ಟ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಿದ್ದರೆ ಕುಡಿಯುವ ನೀರಿಗೂ ತತ್ವಾರ. ಎರಡು ಮಳೆಗಳೂ ದೂರಾದವು ಎಂದು ವಾಗ್ದಾಳಿ ನಡೆಸಿದರು.
ನಾನು ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ ಗರಡಿಯಲ್ಲಿ ಪಳಗಿದವ. ಜನತಾ ಪರಿವಾರದಲ್ಲಿ ನಾನು ರಾಜಕೀಯ ನೆಲೆ ಕಂಡುಕೊಂಡಿದ್ದೇನೆ. ಹೀಗಾಗಿ ಹೊಸ ಮನೆಯಿಂದ ಹಳೆ ಮನೆಗೆ ಬಂದಿದ್ದೇನೆ. ಇದೀಗ ಜೆಡಿಎಸ್ ಮೈತ್ರಿಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು.
ದೂರದೃಷ್ಟಿಯ ನಾಯಕ ಹೆಗಡೆ ಅವರು ತಮ್ಮ ಅಂತಿಮ ದಿನಗಳಲ್ಲಿ ಜನತಾ ಪರಿವಾರದ ನಾನು (ಹೆಗಡೆ) ಹಾಗೂ ದೇವೇಗೌಡ ಮಧ್ಯೆ ಹೊಂದಾಣಿಕೆ ಅಸಾಧ್ಯ. ಆದರೆ ಭವಿಷ್ಯದಲ್ಲಿ ಬಿಜೆಪಿ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಭವಿಷ್ಯ ಇದೆ ಎಂದಿದ್ದರು. ಆದರೆ ಅವರು ಎಂದೂ ಬಿಜೆಪಿ ಸೇರುವಂತೆ ಹೇಳಲಿಲ್ಲ. ಆದರೆ ಹೆಗಡೆ ಅವರ ಕಾಲಾನಂತರ ನಾನೇ ಸ್ವಯಂ ಪ್ರೇರಿತವಾಗಿ ಜನತಾ ಪರಿವಾರ ತೊರೆದು ಬಿಜೆಪಿ ಸೇರಿದೆ. ರಾಜಕೀಯ ದೂರದೃಷ್ಟಿಯ ನಾಯಕ ಹೆಗಡೆ ಅವರ ಭವಿಷ್ಯ ಈಗ ನಿಜವಾಗಿದೆ ಎಂದು ವಿವರಿಸಿದರು
ವಿಜಯಪುರ ಕ್ಷೇತ್ರದ ಅಭಿವೃದ್ಧಿ ವಿಷಯವಾಗಿ ನಾನು ಬರೆದ ಪತ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸಚಿವರ ಸಂಪೂರ್ಣ ಸ್ಪಂದಸಿದ್ದಾರೆ. ಕಾರಣ ವಿಜಯಪುರ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಮಾಡಿದ್ದೇನೆ. ಇದರಿಂದಾಗಿ ಸಂಸತ್ ನಲ್ಲಿ ಪ್ರಶ್ನೆ ಕೇಳುವ ಪ್ರಮೇಯ ಬಂದಿಲ್ಲ ಎಂದು ತಮ್ಮನ್ನು ಸಮರ್ಥಸಿಕೊಂಡರು.
ಜನತಾ ಪರಿವಾರದ ಹಿನ್ನೆಲೆಯಿಂದ ಬಂದಿರುವ ನಾನು ಬಿಜೆಪಿ ಸೇರಿದ್ದರೂ ಎಲ್ಲ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು ಸಮಾನವಾಗಿ ಕಂಡಿದ್ದೇನೆ. ಭವಿಷ್ಯದಲ್ಲೂ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾನವಾಗಿ ಒಗ್ಗೂಡಿಸಿಕೊಂಡು ಹೋಗುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕ ಅರುಣ ಶಹಪುರ ಇತರರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ