ಕೋವಿಡ್ ತಡೆಗೆ ಕ್ರಮ ಕೈಗೊಳ್ಳಿ

ಕೃಷಿ -ತೋಟಗಾರಿಕಾ ಬೆಳೆ ಹಾನಿ ಸಮೀಕ್ಷೆ ನಡೆಸಲು ಎಂ. ಬಿ. ಪಾಟೀಲ ಸೂಚನೆ

Team Udayavani, Apr 18, 2020, 1:04 PM IST

18-April-15

ವಿಜಯಪುರ: ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಕನಮಡಿ ಗ್ರಾಮದ ಚೆಕ್‌ ಪೋಸ್ಟ್‌ಗೆ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು

ವಿಜಯಪುರ: ಕೋವಿಡ್‌ 19  ವಿರುದ್ಧದ ಹೋರಾಟದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಆತ್ಮಸ್ಥೈರ್ಯ ತುಂಬಲು ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಡಾ| ಎಂ.ಬಿ. ಪಾಟೀಲ ಅಧಿ ಕಾರಿಗಳೊಂದಿಗೆ ಕ್ಷೇತ್ರದಲ್ಲಿ ಸಂಚಾರ ಆರಂಭಿಸಿದ್ದು ಬೆಳೆ ಹಾನಿ ಸಂಭವಿಸಿದ ರೈತರ ಬೆಳೆ ನಷ್ಟ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮಹಾರಾಷ್ಟ್ರದ ಗಡಿಯಲ್ಲಿರುವ ತಿಕೋಟಾ ತಾಲೂಕಿನ ಗಡಿ ಗ್ರಾಮಗಳಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಯಾರಿಗೂ ಆಹಾರ, ಧಾನ್ಯಗಳ ಕೊರತೆ ಆಗಬಾರದು. ಕ್ಷೇತ್ರದಲ್ಲಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆದರು. ಸ್ಥಳೀಯ ಅಧಿಕಾರಿಗಳು, ಜನರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಮೇಲಧಿಕಾರಿಗಳೊಂದಿಗೆ ಸ್ಥಳದಲ್ಲೇ ಮಾತನಾಡಿದರು. ಮಹಾರಾಷ್ಟ್ರ ಗಡಿಯಲ್ಲಿರುವ ತಿಕೋಟಾ ತಾಲೂಕಿನ ಕನಮಡಿ ಬಳಿಯ ಅಂತಾರಾಜ್ಯ ಗಡಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಅವರು, ಚೆಕ್‌ಪೋಸ್ಟ್‌ನಲ್ಲಿ ಥರ್ಮಲ್‌ ಸ್ಕ್ಯಾನರ್‌ ಸೌಲಭ್ಯ ಇಲ್ಲದ ಕಾರಣ ಕೂಡಲೇ ಥರ್ಮಲ್‌ ಸ್ಕ್ಯಾನರ್‌ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರಿಗೆ ಸೂಚಿಸಿದರು.

ನಂತರ ನಡೆದ ಸಭೆಯಲ್ಲಿ ತಿಕೋಟಾ ತಾಲೂಕಿನಲ್ಲಿ 600ಕ್ಕೂ ಮಿಕ್ಕಿ ಕುಟುಂಬಗಳಿಗೆ ರೇಷನ್‌ ಕಾರ್ಡ್‌ ರದ್ದಾಗಿ ಪಡಿತರ ಸಿಗುತ್ತಿಲ್ಲ
ಎಂಬ ಮಾಹಿತಿ ಸಿಗುತ್ತಲೇ ಗ್ರಾಮವಾರು ಪ್ರತಿ ಕುಟುಂಬದ ಮಾಹಿತಿ ಸಂಗ್ರಹಿಸಿ, ಪ್ರತಿ ಮನೆಗೆ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ಗೆ ಸೂಚಿಸಿದರು.

ಲಾಕ್‌ಡೌನ್‌ನಿಂದಾಗಿ ಕ್ಷೇತ್ರದಲ್ಲಿ ಕೃಷಿ, ತೋಟಗಾರಿಕಾ ಉತ್ಪನ್ನಗಳು ಹಾಳಾಗಿದ್ದು ಈ ಕುರಿತು ತೋಟಗಾರಿಕೆ ಅಧಿಕಾರಿಗಳು ಸಮೀಕ್ಷೆ ನಡೆಸಿ, ವಾಸ್ತವಿಕ ವರದಿ ದಾಖಲಿಸಬೇಕು. ಕೊರೊನಾ ಹಿನ್ನಲೆಯಲ್ಲಿ ರೈತರಿಗೆ ರಾತ್ರಿಗೆ ಬದಲಾಗಿ ಹಗಲು ವೇಳೆಯಲ್ಲಿ ವಿದ್ಯುತ್‌ ಸರಬರಾಜು ಮಾಡಬೇಕು. ಇದರಿಂದ ರೈತರು ಹಗಲಿನಲ್ಲೇ ಕೃಷಿ ಚಟುವಟಿಕೆ ಮಾಡಲು ವ್ಯವಸ್ಥೆ ಕಲ್ಪಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ತಿಕೋಟಾ ತಾಲೂಕು ಹೆಚ್ಚಿನ ಪ್ರದೇಶ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದು ಕರ್ನಾಟಕದ ಜನ ದುಡಿಯಲು ಮಹಾರಾಷ್ಟ್ರಕ್ಕೆ ಹೋಗಿದ್ದು, ಅವರು ಇದೇ ಪ್ರದೇಶಗಳಿಂದ ಮರಳಿ ಬರುವ ಸಾಧ್ಯತೆ ಹೆಚ್ಚಿದೆ. ಈ ಕಾರಣಕ್ಕೆ ಮುಖ್ಯ ರಸ್ತೆಗಳ್ಳಲ್ಲದೇ ಇತರೆ ಸಣ್ಣ-ಪುಟ್ಟ ರಸ್ತೆಗಳ ಮೇಲೂ ನಿಗಾ ವಹಿಸಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ತಿಕೋಟಾದಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಎಂ.ಬಿ. ಪಾಟೀಲ ಅವರು ದಿನವಿಡಿ ತಿಕೋಟಾ ತಾಲೂಕಿನಲ್ಲಿ ಸಂಚಾರ ಕೈಗೊಂಡು ಬಾಬಾನಗರ, ಬಿಜ್ಜರಗಿ, ಕನಮಡಿ, ಘೋಣಸಗಿ, ಕೆ.ಸಿದ್ದಾಪುರ, ಟಕ್ಕಳಕಿ, ಲೋಹಗಾಂವ, ಜಾಲಗೇರಿ, ಅರಕೇರಿ ಗ್ರಾಪಂಗಳಿಗೆ ಭೇಟಿ ನೀಡಿ ಸ್ಥಳೀಯ ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿನ ಸವಿವರ ಮಾಹಿತಿ ಪಡೆದರು. ಲಾಕ್‌ಡೌನ್‌ ನಿಯಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುಬೇಕು. ಕೃಷಿ ಉತ್ಪನ್ನ ಸೇರಿದಂತೆ ಯಾವುದೇ ಗೂಡ್ಸ್‌ ವಾಹನಗಳಿಗೆ ಸಂಚರಿಸಲು ಅಡಚಣೆ ಇಲ್ಲ. ಈ ಕುರಿತು ಮುಂಜಾಗ್ರತಾ ಕ್ರಮ ವಹಿಸಿ ಗೂಡ್ಸ್‌ ವಾಹನಗಳನ್ನು ಸಂಚರಿಸಬಹುದು. ಆದರೆ ಗ್ರಾಮಗಳಲ್ಲಿ ಅನವಶ್ಯಕವಾಗಿ ತಿರುಗಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.