Vijayapura; ಫೇಸ್ಬುಕ್ ನಲ್ಲಿ ಧರ್ಮ-ಪಕ್ಷದ ವಿರುದ್ಧ ಪೋಸ್ಟ್: ಅತಿಥಿ ಶಿಕ್ಷಕನಿಗೆ ನೋಟಿಸ್
Team Udayavani, Mar 22, 2024, 4:28 PM IST
ವಿಜಯಪುರ: ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವಾಗ ಅತಿಥಿ ಶಿಕ್ಷಕರೊಬ್ಬರು ಒಂದು ಧರ್ಮದ ಹಾಗೂ ಪಕ್ಷದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಕಾರಣಕ್ಕೆ ಬಿಇಒ ನೋಟೀಸ್ ಜಾರಿ ಮಾಡಿರುವ ಘಟನೆ ಜರುಗಿದೆ.
ಶಾಲಾ ಶಿಕ್ಷಣ ಇಲಾಖೆಯ ವಿಜಯಪುರ ಗ್ರಾಮೀಣ ವಲಯದ ಬಿಇಒ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕ ಚಂದ್ರು ಮಾಳಿ ಎಂಬಾತನಿಗೆ ನೋಟೀಸ್ ಜಾರಿ ಮಾಡಿದ್ದಾರೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ನೀತಿಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಮಾಡಿದ್ದಾಗಿ ನೋಟೀಸ್ ದೂರಲಾಗಿದೆ.
ಆರೋಪಿ ಅತಿಥಿ ಶಿಕ್ಷಕ ತನ್ನ ಫೇಸ್ಬುಕ್ ಖಾತೆಯಲ್ಲಿ ಒಂದು ಧರ್ಮ ಹಾಗೂ ಪಕ್ಷದ ವಿರುದ್ಧ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೋಟೀಸ್ ಜಾರಿ ಮಾಡಲಾಗಿದೆ.
ಸದರಿ ನೋಟೀಸ್ ಗೆ ಮೂರು ದಿನಗಳಲ್ಲಿ ಲಿಖಿತ ಉತ್ತರ ನೀಡುವಂತೆ ಸೂಚಿಸಿದ್ದು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ