ದೇಶದ್ರೋಹಿ ಅಮೂಲ್ಯ ಪ್ರತಿಕೃತಿ ದಹನ

ಕಠಿಣ ಶಿಕ್ಷೆಗೆ ಆಗ್ರಹಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಬೊಬ್ಬೆ ಪ್ರತಿಭಟನೆ

Team Udayavani, Feb 23, 2020, 11:54 AM IST

23-February-05g

ವಿಜಯಪುರ: ಪಾಕ್‌ ಪರ ಘೋಷಣೆ ಕೂಗಿದ ಅಮೂಲ್ಯಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ, ದೇಶ ರಕ್ಷಕರ ಪಡೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಮೂಲ್ಯಳ ಪ್ರತಿಕೃತಿ ದಹಿಸಿ ಬೊಬ್ಬೆ ಹೊಡೆದು ಆಕ್ರೋಶ ಹೊರಹಾಕಿದರು.

ಸಂಘಟನೆ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಹೋರಾಟ ಮಾಡುವ ಸಂದರ್ಭದಲ್ಲಿ ವೇದಿಕೆಯಲ್ಲಿ ಅಮೂಲ್ಯ ಪಾಕ್‌ ಪರ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯವೆಸಗಿದ್ದಾಳೆ. ಭಾರತ ಮಾತೆ ಮಡಿಲಲ್ಲಿ ಜನಿಸಿ ಪಾಕ್‌ ಪರ ಜಯಘೋಷಣೆ ಹೇಳಿರುವುದು ವಿಷಾದನೀಯ. ದೇಶದ್ರೋಹಿ ಹೇಳಿಕೆಗಳ ಮೂಲಕ ಉದ್ಧಟತನ ಪ್ರದರ್ಶನ ಮಾಡಿದ್ದಾಳೆ. ಆದ ಕಾರಣ ಆಕೆಯನ್ನು ಈಗಾಗಲೇ ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದು ಆಕೆಯ ಮೇಲೆ ಅತಿ ಉಗ್ರ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಆಕೆಯನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆ ಉಪಾಧ್ಯಕ್ಷ ಬಸವರಾಜ ಗಳವೆ ಮಾತನಾಡಿದರು. ಕಾನೂನು ಸಲಹೆಗಾರ ಉತ್ತಮ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ರಾಜು ಬಿಸೆ, ಜಿಲ್ಲಾ ಕಾರ್ಯದರ್ಶಿ ಉಮೇಶ ರುದ್ರಮುನಿ, ರಾಜು ಕೋಟ್ಯಾಳ, ಕುಮಾರ ಮದಭಾವಿ, ಕುಮಾರ ಉಕ್ಕಲಿ, ರಾಜು ದಿಗಿನಾಳ, ಅಪ್ಪು ಅಂಬಿಗೇರ, ಮಲ್ಲು ಹೊಸಗೌಡರ, ಆಕಾಶ ಉಪ್ಪಾರ, ಜಿಶ್ಯಾದ ಬ್ಯಾಕೋಡ, ಕೃಷ್ಣಾ ಉಪ್ಪಾರ, ಕಾಶೀನಾಥ ಹಿಪಳೆ ಇದ್ದರು.

ದೇಶ ರಕ್ಷಕರ ಪಡೆ: ದೇಶ ವಿರೋಧಿ  ಚಟುವಟಿಕೆ ಮತ್ತು ದೇಶ ವಿರೋಧಿ  ಘೋಷಣೆ ಕೂಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ದೇಶ ರಕ್ಷಕರ ಪಡೆ, ಛತ್ರಪತಿ ಶಿವಾಜಿ ಫೌಂಡೇಶನ್‌, ಕರುನಾಡ ಯುವ ಪಡೆ, ಹಿಂದುಸ್ತಾನವಾಗಲಿ ಭಾರತ, ಚಂದ್ರಲಾಂಬಾ ಭಜನಾ ಮಂಡಳಿ, ಕರ್ನಾಟಕ ಯುವ ಜನ ಸೇನೆ ವತಿಯಿಂದ ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ದೇಶ ರಕ್ಷಕರ ಪಡೆಯ ರೋಹನ್‌ ಆಪ್ಟೆ ಮಾತನಾಡಿ, ಪಾಕಿಸ್ತಾನ ಪರ ಒಲವು ಹೊಂದಿದ ದೇಶದ್ರೋಹಿಗಳು ಯಾರೇ ಆಗಿರಲಿ, ನಮ್ಮ ಭಾರತ ಬಿಟ್ಟು ತೊಲಗಲು ಎಲ್ಲ ವ್ಯವಸ್ಥೆ ನಮ್ಮ ದೇಶ ರಕ್ಷಕರ ಪಡೆ ವತಿಯಿಂದ ಮಾಡಿಕೊಡಲಾಗುವುದು. ದೇಶದ್ರೋಹಿಗಳು ನಮ್ಮ ಭಾರತದಲ್ಲಿ ಇರಲು ಯೋಗ್ಯರಲ್ಲ. ಶತ್ರು ದೇಶದ ಪರ ಹೊಗಳುವವರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಅವರಿಗೆ ಶೀಘ್ರವಾಗಿ ಪಾಕಿಸ್ತಾನಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಪುನೀತ್‌ ಕಾಂಬಳೆ, ಕರುನಾಡ ಯುವ ಪಡೆಯ ಸಿದ್ದು ಭಾವಿಕಟ್ಟಿ, ಛತ್ರಪತಿ ಶಿವಾಜಿ ಫೌಂಡೇಶನ್‌ ಕಿರಣ ಕಾಳೆ, ಆನಂದ ಕುಲಕರ್ಣಿ, ಚಂದ್ರಲಾಂಬಾ ಭಜನ ಮಂಡಳಿಯ ಜಯಶ್ರೀ ಕನ್ನೂರ, ಕವಿತಾ ಹಿರೇಮಠ, ಆದಿತ್ಯ ತಾವರಗೇರಿ, ರೋಹಿತ ಕೊಪ್ಪದ, ಪ್ರೇಮ ಕಲಕುಟಗಿ, ಕೃಷ್ಣಾ ಗುನ್ಹಾಳಕರ, ಅಮೀತ್‌ ದೇಸಾಯಿ, ರಮೇಶ ದರಸಂಗ, ಮಲ್ಲಿಕಾರ್ಜುನ ಕಾರಜೋಳ, ಶಿವರಾಜ್‌ ಬಿರಾದಾರ, ಹನುಮಂತ ತೇಲಿ, ಕಲ್ಪೇಶ ಅಳ್ಳಿ, ರಾಹುಲ್‌ ಪಾಟೀಲ, ಪವನ ಮಲಗೆ, ಸಿದ್ರಾಮ ತಾಂಬೆ, ಸಮೀರ ಕುಲಕರ್ಣಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.