ದರೋಡೆ ಆರೋಪಿಗಳಿಗೆ ಸೋಂಕು- ಪೊಲೀಸರಿಗೆ ಕ್ವಾರಂಟೈನ್
Team Udayavani, Jun 21, 2020, 10:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಂಧಿತ ಮೂವರಲ್ಲಿ ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಪರಿಣಾಮ ಆರೋಪಿಗಳ ಸಂಪರ್ಕದಲ್ಲಿದ್ದ ಇಬ್ಬರು ಎಸ್ಐ ಹಾಗೂ 14 ಜನ ಪೊಲೀಸರನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಹೈದ್ರಾಬಾದ್ ನಿವಾಸಿ ದಂಪತಿಗೆ ಅಗ್ಗದ ದರಕ್ಕೆ ಚಿನ್ನ ಮಾರಾಟ ಮಾಡುವ ವಂಚನೆ ಪ್ರಕರಣದಲ್ಲಿ ಪೊಲೀಸರು ಜೂ. 17ರಂದು ಮೂವರನ್ನು ಬಂಧಿಸಿದ್ದು ಎಲ್ಲರನ್ನೂ ಸಿಂದಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ನಡೆಸಿ ಕೋವಿಡ್ ಸೋಂಕು ಪತ್ತೆಗಾಗಿ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಬಳಿಕ ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗ್ರಹಕ್ಕೆ ಕಳಿಸಲಾಗಿತ್ತು. ಇದರಲ್ಲಿ ಇಬ್ಬರು ಆರೋಪಿಗಳಲ್ಲಿ ಕೋವಿಡ್ ಸೋಂಕು ಇರುವುದು ಜೂ. 19ರಂದು ಪ್ರಕಟಗೊಂಡಿರುವ ಕೋವಿಡ್ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಜೈಲಿನಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದ್ದ ಬಂಧಿತ ಆರೋಪಿಗಳನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಮಧ್ಯೆ ಸದರಿ ಆರೋಪಿಗಳನ್ನು ಬಂಧಿಸುವುದು, ವಿಚಾರಣೆ ನಡೆಸುವುದು ಸೇರಿದಂತೆ ಸೋಂಕಿತ ಆರೋಪಿಗಳ ಸಂಪರ್ಕದಲ್ಲಿದ್ದ ಕಾರಣಕ್ಕೆ ಜಿಲ್ಲೆಯ ಇಬ್ಬರು ಪಿಎಸ್ಐ ಹಾಗೂ 14 ಸಿಬ್ಬಂದಿಗಳನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ 37 ಪೊಲೀಸರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ