ಕತಕನಹಳ್ಳಿ ಸದಾಶಿವ ಮುತ್ಯಾ ಜಾತ್ರೆ ರದ್ದು -ಸಹಕರಿಸಲು ಮನವಿ

ಭಕ್ತರು ಜಾತ್ರೆಗೆ ಬರದೇ ಮನೆಯಲ್ಲೇ ಇದ್ದು ಭಕ್ತಿ ಸಮರ್ಪಿಸಿ ಸರ್ಕಾರದ ಆದೇಶ ಪಾಲಿಸುವುದು ಮುತ್ಯಾನ ಭಕ್ತರ ಕರ್ತವ್ಯ

Team Udayavani, Mar 22, 2020, 12:56 PM IST

22-March-6

ವಿಜಯಪುರ: ಮಾ.24ರಿಂದ ಐದು ದಿನಗಳ ಕಾಲ ಕತಕನಹಳ್ಳಿ ಗ್ರಾಮದಲ್ಲಿ ನಡೆಯಬೇಕಿದ್ದ ಗುರು ಚಕ್ರವರ್ತಿ ಸದಾಶಿವ ಮುತ್ಯಾನ ಜಾತ್ರೆಯನ್ನು ಕೊರೊನಾ ರೋಗ ನಿಯಂತ್ರಣ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ. ಜಾತ್ರೆಗೆ ದೇಶ-ವಿದೇಶದಿಂದ ಲಕ್ಷಾಂತರ ಜನರು ಆಗಮಿಸುವ ಕಾರಣ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿದ್ದು, ಭಕ್ತರು ಸಹಕರಿಸಬೇಕೆಂದು ಮಠದ ಶಿವಯ್ಯ ಶ್ರೀಗಳು ಕೋರಿದರು.

ಶನಿವಾರ ಕತಕನಹಳ್ಳಿಯ ಶ್ರೀಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶ ಪಾಲಿಸುವುದು ಸದಾಶಿವ ಮುತ್ಯಾನ ಭಕ್ತರ ಆದ್ಯ ಕರ್ತವ್ಯ. ಜನಹಿತಕ್ಕಿಂತ ಮತ್ತೇನೂ ದೊಡ್ಡದಲ್ಲ. ಹೀಗಾಗಿ ಅದ್ಧೂರಿ ಜಾತ್ರೆಯನ್ನು ರದ್ದು ಮಾಡಲಾಗಿದ್ದು, ಭಕ್ತರು ಜಾತ್ರೆಗೆ ಬರದೇ ಮನೆಯಲ್ಲೇ ಇದ್ದು ಭಕ್ತಿ ಸಮರ್ಪಿಸಬೇಕೆಂದು ಹೇಳಿದರು.

ಸರ್ಕಾರದ ಆದೇಶದಂತೆ ಶ್ರೀ ಮಠದಲ್ಲಿ ಶುಕ್ರವಾರ ಸೇರಿದ್ದ ಭಕ್ತರ ಸಭೆಯಲ್ಲಿ ಜಾತ್ರೆ ರದ್ದು ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು,ಬೆರಳೆಣಿಕೆ ಜನರು ಸೇರಿ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಭಕ್ತರು ಸರ್ಕಾರದ ಆದೇಶ ಮೀರಿ ಜಾತ್ರೆಗೆ ಆಗಮಿಸದಂತೆ ಶ್ರೀಗಳು ಕೋರಿದರು.

ಜಾತ್ರೆಯಲ್ಲಿ ಸಾಮೂಹಿಕ ವಿವಾಹ ಸೇರಿದಂತೆ ಐದು ದಿನಗಳ ಜಾತ್ರೆಗೆ ಬೇಕಾದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. 42 ಜೋಡಿ ಮದುವೆಯಾಗಲು ಹೆಸರು ನೋಂದಣಿ ಮಾಡಿಸಿದ್ದವು. ಆದರೆ ಜಾತ್ರೆ ರದ್ದು ಮಾಡಿರುವ ಕಾರಣ ಸದರಿ ವಿವಾಹ ನೋಂದಣಿ ಮಾಡಿಸಿದ ಜೋಡಿಗೆ ಮಾಂಗಲ್ಯ ಹಾಗೂ ಇತರೆ ವಸ್ತುಗಳನ್ನು ನೇರವಾಗಿ ಸಲ್ಲಿಸಲಾಗುತ್ತದೆ. ವಧು-ವರರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹ ಮಾಡಿಕೊಳ್ಳಲು ಕೋರಲಾಗಿದೆ ಎಂದರು.

ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಭಾರ ಎತ್ತುವ ಸ್ಪರ್ಧೆ, ಕುಸ್ತಿ, ಸಂಗೀತ, ಹಾಸ್ಯ ಕಾರ್ಯಕ್ರಮ ಸೇರಿದಂತೆ ಒಟ್ಟು 16 ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದರು. ಮೇಲ್ಮನೆ ಸದಸ್ಯ ಸುನೀಲಗೌಡ ಪಾಟೀಲ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜಯ ಜೋಶಿ ಇದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.