Vijayapura; ಸಾಹಿಲ್ ಭಾಂಗಿ ಹತ್ಯೆ ಕೇಸ್: ನಾಲ್ವರು ಆರೋಪಿಗಳ ಬಂಧನ

ಪೊಲೀಸ್ ತಂಡಕ್ಕೆ ಬಹುಮಾನ ಘೋಷಣೆ

Team Udayavani, Dec 15, 2023, 10:48 PM IST

police crime

ವಿಜಯಪುರ: ನಗರದ ಝಂಡಾ ಕಟ್ಟಿ ಪರಿಸರದಲ್ಲಿ ಡಿ.10 ರಂದು ನಡೆದಿದ್ದ ಸಾಹಿಲ್ ಭಾಂಗಿ ಹತ್ಯಾ ಪ್ರಕರಣ ಬೇಧಿಸಿರುವ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಗೋಲಗುಂಬಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ10 ರಂದು ಸಾಹಿಲ್ ಭಾಂಗಿ ಎಂಬ ಯುವಕನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ, ಖಾರದ ಪುಡಿ ಎರಚಿ, ಚಾಕುವಿನಿಂದ ಇರಿದು ಹತ್ಯೆ ಮಾಡಿ, ಆರೋಪಿಗಳು ತಲೆ  ಮರೆಸಿಕೊಂಡಿದ್ದರು. ಮೃತ ಸಾಹಿಲ್ ನ ಮಾವ ತನ್ವೀರ ಇನಾಮದಾರ ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಇಳಿದಿದ್ದರು. ತಲೆ ಮರೆಸಿಕೊಂಡ ಆರೋಪಿಗಳ ಬಂಧನ ಸೇರಿದಂತೆ ಪ್ರಕರಣದ ಸಮಗ್ರ ತನಿಖೆಗೆ ಎಸ್ಪಿ ಋಷಿಕೇಶ ಭಗವಾನ್ ಸಿಪಿಐ ಪ್ರದೀಪ ತಳಕೇರಿ, ಎಸೈಗಳಾದ ರಾಜು ಪೂಜಾರಿ ಹಾಗೂ ಬಿ.ಎನ್. ಸುಷ್ಮಾ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.

ತನಿಖೆಯ ಜೊತೆಗೆ ಆರೋಪಿಗಳ ಬಂಧನಕ್ಕೆ ಮುಂದಾದ ಪೊಲೀಸರು ನಗರದ ಜಾಮಿಯಾ‌ ಮಸೀದಿ ಪ್ರದೇಶದ ನಿವಾಸಿಗಳಾದ ಸಮೀರ ಇನಾಮದಾರ (20), ಮೊಹಮದ್ ಖೈಫ್ ಮುಲ್ಲಾ (18.06), ಬಿಲಾಲ್ ಇನಾಮದಾರ(23) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಓರ್ವ ಸೇರಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದಲ್ಲಿ ತಲೆಮರೆಸಿಕೊಂಡ ಮತ್ತೋರ್ವ ಆರೋಪಿ ತೌಫಿಕ್ ಇನಾಮದಾರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಸಾಹಿಲ್ ಹತ್ಯೆಗೆ ಪ್ರಮುಖವಾಗಿ ಬಂಧಿತ ಮೂವರು ಆರೋಪಿಗಳ ಜತೆ ಹೊಂದಿದ್ದ ಬೇರೆ ಬೇರೆ ಕಾರಣಗಳನ್ನು ಪೊಲೀಸರ ತನಿಖೆಯ ಸಂದರ್ಭದಲ್ಲಿ ಆರೋಪಗಳು ಬಾಯಿ ಬಿಟ್ಟಿದ್ದಾರೆ.

ಸಾಹಿಲ್ ಹಾಗೂ ಸಮೀರ ಇಬ್ಬರೂ ಜತೆಯಾಗಿ ಮನೆಗಳನ್ನು ಕಳ್ಳತನ ಮಾಡಿದಾಗ ಹಣ ಹಂಚಿಕೊಳ್ಳುವಲ್ಲಿ ವೈಮನಸ್ಸು ಉಂಟಾಗಿತ್ತು.ಮತ್ತೊಂದೆಡೆ ಸಾಹಿಲ್ ತನ್ನ ತಂಗಿಗೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಮೊಹಮದ್ ಖೈಫ್ ಕೂಡ ಹಗೆ ಸಾಧಿಸುತ್ತಿದ್ದ.

ಇದಲ್ಲದೇ ಸಾಹಿಲ್ ಮನೆ ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಸೆರೆ ಸಿಕ್ಕಾಗ ಪ್ರಕರಣಗಳಲ್ಲಿ ಸಂಬಂಧವೇ ಇಲ್ಲದ ಬಿಲಾಲ್ ಕೂಡ ತನ್ನೊಂದಿಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಸುಳ್ಳು ಹೇಳಿದ್ದ.ಹೀಗೆ ಮೂವರೊಂದಿಗೆ ಬೇರೆಬೇರೆ ಕಾರಣಕ್ಕೆ ಹೊಂದಿದ್ದ ಧ್ವೇಷದಿಂದ ಮೂವರೂ ಆರೋಪಿಗಳು ಸಂಘಟಿತರಾಗಿ, ಮತ್ತಿಬ್ಬರ ಸಹಕಾರದಿಂದ ಸಾಹಿಲ್ ಇನಾಮದಾರ ವಿರುದ್ಧ ಸಂಚು ರೂಪಿಸಿ, ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

ಪ್ರಕರಣವನ್ನು ಬೇಧಿಸಿದ್ದಲ್ಲದೇ ತಲೆ ಕರೆಸಿಕೊಂಡಿದ್ದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸ್ ತನಿಖಾ ತಂಡಕ್ಕೆ ಎಸ್ಪಿ ಋಷಿಕೇಶ ಭಗವಾನ್ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.