ವಿಶ್ವಕ್ಕೆ ಜ್ಞಾನದ ಬೆಳಕು ನೀಡಿದ ಸರ್ವಜ್ಞ

ತ್ರಿಪದಿ ಮೂಲಕ ವಿಶ್ವಜ್ಞಾನದ ಸಂದೇಶ ಸಾರಿದ ಸಂತ3 ಸಾಲುಗಳಲ್ಲಿ ವಿಶಾಲ ಅರ್ಥ ನೀಡುವ ವಚನ ರಚನೆ

Team Udayavani, Feb 21, 2020, 11:54 AM IST

21-February-6

ವಿಜಯಪುರ: ಅಕ್ಷರ ಬಲ್ಲವ ಮಾತ್ರ ಬ್ರಹ್ಮನಲ್ಲ, ಅಕ್ಷರ ಲೋಕದ ಪರಿಚಯ ಇಲ್ಲದ ಜೀವನಾನುಭವ ಇರುವ ಅಂತಜ್ಞಾನಿ ಕೂಡ ಸರ್ವಜ್ಞನಾಗಬಲ್ಲ. ತ್ರಿಪದಿ ಬ್ರಹ್ಮ ಸರ್ವಜ್ಞನಾಗಿದ್ದು ಕೂಡ ಜೀವನಾನುಭವದಿಂದಲೇ ಎಂಬುದು ಗಮನೀಯ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಹೇಳಿದರು.

ನಗರದ ಕಂದಗಲ್ಲ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾತಿ-ಮತ ಮೀರಿದ ಜೀವನಾನುಭವದ ಮೂಲಕ ಸರ್ವಜ್ಞ ಎಂಬ ಮಹಾನ್‌ ವಚನಕಾರ, ತಮ್ಮ ತ್ರಿಪದಿಗಳ ಮೂಲಕ ವಿಶ್ವಜ್ಞಾನದ ಸಂದೇಶ ನೀಡಿದ್ದಾರೆ ಎಂದು ಬಣ್ಣಿಸಿದರು.

ಸರ್ವರೊಳಗೊಂದು ನುಡಿ ಕಲಿತು ಸರ್ವಜ್ಞನಾದೆ ಎಂದು ವಿನೀತವಾಗಿ ಹೇಳವು ಸರ್ವಜ್ಞ, ಜ್ಞಾನ ಸಿಗುವಲ್ಲಿ ಹಾಗೂ ಸದ್ವಿಚಾರಗಳು ಪಸರಿಸುವಲ್ಲಿ ಸಂಪರ್ಕ ಮಾಡಿ ಜ್ಞಾನ ಸಂಪಾದಿಸಬೇಕು. ಸರ್ವಜ್ಞರಂಥ ಶರಣರ ವಚನಗಳಲ್ಲಿ ಇರುವ ಬದುಕಿಗೆ ಸನ್ಮಾರ್ಗ ತೋರಬಲ್ಲ ಜ್ಞಾನವನ್ನು ಪಡೆದು, ನಮ್ಮ ಬದುಕಿನಲ್ಲೂ ಅಳವಡಿಸಿಕೊಳ್ಳುವ ಮೂಲಕ ಇಂದಿನ ಮಕ್ಕಳು ಸಾಧನೆ ಮೇರೆ ಏರುವಂತೆ ಸಲಹೆ ನೀಡಿದರು.

ಜೀವನಾನುಭವ ಇರುವ ಹಿರಿಯಲ್ಲಿ ಜ್ಞಾನದ ಅಮೃತ ಹೊಂದಿರುತ್ತಾರೆ. ಹೀಗಾಗಿ ಇಂದಿನ ಮಕ್ಕಳು ಹಿರಿಯರ ಅನುಭವದ ಜೀವನದ ಪಾಠ ಕಲಿಯುವುದು ಅಗತ್ಯವಾಗಿದೆ. ಇಂಥ ಮೌಲಿಕ ಸಂದೇಶಗಳನ್ನು ಜನ ಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ಮಾದರಿಯಲ್ಲಿ ಕೇವಲ ಮೂರು ಸಾಲುಗಳಲ್ಲಿ ವಿಶಾಲ ಅರ್ಥ ನೀಡುವ ವಚನಗಳನ್ನು ರಚಿಸುವ ಮೂಲಕ ಸರ್ವಜ್ಞ ಸಮಾಜಕ್ಕೆ ಮಹದುಪಕಾರ ಮಾಡಿದ್ದಾರೆ ಎಂದರು.

ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕ ರಾಜೇಂದ್ರಕುಮಾರ ಬಿರಾದಾರ, ವೇಮನ, ತಿರುವಳ್ಳುವರ, ಕಬೀರರ ಸಾಲಿನಲ್ಲಿ ನಿಲ್ಲುವ ಸಂತಕವಿ ಸರ್ವಜ್ಞ ಅವರ ಪ್ರತಿ ವಚನವೂ ಸಮಾಜಕ್ಕೆ ಚುಚ್ಚುಮದ್ದಿನಂತೆ ಮಾರ್ಗದರ್ಶನ ಮಾಡುತ್ತವೆ. ಇಂಥ ವಿಶಿಷ್ಟ ಜ್ಞಾನಿಯ ವಚನಗಳನ್ನು ಮೊಟ್ಟ ಮೊದಲು ಸಂಗ್ರಹಿಸಿ, ಸಂರಕ್ಷಿಸಿ ಕೊಟ್ಟ ಮೊದಲಿಗರು ಉತ್ತರ ಕರ್ನಾಟಕದ ಉತ್ತಂಗಿ ಚನ್ನಪ್ಪ ಎಂದು ಬಣ್ಣಿಸಿದರು.

ಇದೇ ವೇಳೆ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಕುಂಬಾರ,ಕೆಎಎಸ್‌ ಅಧಿಕಾರಿ ಎಸ್‌.ಕೆ.ಭಾಗ್ಯಶ್ರೀ ಇವರನ್ನು ಸನ್ಮಾನಿಸಲಾಯಿತು. ಸರ್ವಜ್ಞರ ವಚನಗಳಿಗೆ ಲಕ್ಷ್ಮೀ
ತೇರದಾಳಮಠ ಭರತನಾಟ್ಯ ಮಾಡಿ ಪ್ರೇಕ್ಷಕರ ಮನ ತಣಿಸಿದರು. ಡಿಎಸ್ಪಿ ಕೆ.ಸಿ.ಲಕ್ಷ್ಮೀ ನಾರಾಯಣ, ಸಿಪಿಐ ಬಸವರಾಜ ಮೂಕರ್ತಿಹಾಳ, ದೈಹಿಕ ಶಿಕ್ಷಣಾಧಿಕಾರಿ ಗಂಗಶೆಟ್ಟಿ, ಸಿ.ಬಿ. ಕುಂಬಾರ, ಶ್ರೀಶೈಲ ಕುಂಬಾರ, ಎಂ.ಎಂ. ಬಾನ್ಸಿ, ಸಿದ್ದಮ್ಮ ಕುಂಬಾರ, ಸುನಂದಾ ಕುಂಬಾರ, ಎಸ್‌.ಎಸ್‌. ಕುಂಬಾರ ಇದ್ದರು. ಪುಷ್ಪಾ ಕುಲಕರ್ಣಿ ನಾಡಗೀತೆ ಹಾಡಿ ಸುಗಮ ಸಂಗೀತ ನಡೆಸಿಕೊಟ್ಟರು. ಮಹೇಶ ಪೋತದಾರ ಸ್ವಾಗತಿಸಿದರು. ಎಚ್‌.ಎ ಮಮದಾಪುರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.