ಸಾಮಾಜಿಕ ಅಂತರ ಪಾಲನೆ ಮರೆತ ಜನತೆ

ಮಾರುಕಟ್ಟೆಯಲ್ಲಿ ಕೊರೊನಾ ಭಯವಿಲ್ಲದೆ ಓಡಾಟ ಪೂರ್ಣ ಪ್ರಮಾಣದಲ್ಲಿ ತೆರೆಯದ ಹೇರ್‌ ಕಟಿಂಗ್‌ ಶಾಪ್‌

Team Udayavani, May 21, 2020, 4:21 PM IST

21-May-20

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್‌-19 ನಾಲ್ಕನೇ ಹಂತದ ಲಾಕ್‌ಡೌನ್‌ ಹಂತದಲ್ಲಿ ನಿರ್ಬಂಧದಲ್ಲಿ ಕೆಲಸ ಸಡಿಲಿಕೆ ಮಾಡಿದ್ದರೂ ಸರ್ಕಾರಗಳು ಹಲವು ನಿಯಮ ಪಾಲನೆ ಕಡ್ಡಾಯ ಮಾಡಿದೆ. ಆದರೆ, ನಗರದ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುನ್ನೆಚರಿಕೆ ಕ್ರಮಗಳನ್ನು ಪಾಲಿಸದೇ ಸಾಮಾನ್ಯವಾಗಿ ಓಡಾಡುವುದು ಕಂಡು ಬರುತ್ತಿದೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರ ಸ್ಥಳ ಎನಿಸಿರುವ ಮಹಾತ್ಮಾ ಗಾಂಧೀಜಿ ವೃತ್ತ, ಸಿದ್ಧೇಶ್ವರ ರಸ್ತೆ, ಕಿತ್ತೂರ ಚನ್ನಮ್ಮ ಮಾರುಕಟ್ಟೆ ಪ್ರದೇಶ, ಲಾಲ್‌ ಬಹದ್ದೂರ ಶಾಸ್ತ್ರಿ ಮಾರುಕಟ್ಟೆಯಲ್ಲಿ ಅಲ್ಲಲ್ಲಿ ತೆರೆದಿದ್ದ ಅಂಗಡಿಗಳು ಸೇರಿದಂತೆ ಎಲ್ಲಿಯೂ ಸಾಮಾಜಿಕ ಅಂತರವಾಗಲಿ, ಸ್ಯಾನಿಟೈಸರ್‌ ಬಳಕೆಯಾಗಲಿ ಕಂಡು ಬರಲಿಲ್ಲ. ಪ್ರಮುಖ ರಸ್ತೆಗಳಲ್ಲಿ ಗುಂಪಾಗಿ ಓಡಾಡುವುದು, ಮಾಸ್ಕ್ ಧರಿಸುವ ನಿಯಮವನ್ನೂ ಪಾಲಿಸದಿರುವುದು ಕಂಡು ಬಂತು. ಕೆಲವರು ಮಾಸ್ಕ್ ಇದ್ದರೂ ಧರಿಸದೇ ಕೊರಳಿಗೆ ನೇತು ಹಾಕಿಕೊಂಡು ಓಡಾಡುವ ದೃಶ್ಯಗಳು ಸಾಮಾನ್ಯವಾಗಿದ್ದವು. ಇದರೊಂದಿಗೆ ನಾಲ್ಕನೇ ಲಾಕ್‌ ಡೌನ್‌ ಜಾರಿಯಲ್ಲಿ ಸಡಿಲಿಕೆ ಮೂಲಕ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಸೂಚನೆಗೆ ಬೆಲೆ ಇಲ್ಲದಂತಾಗಿತ್ತು.

ಸುಮಾರು ಎರಡು ತಿಂಗಳ ಹಿಂದೆ ಜಾರಿಗೆ ತರಲಾಗಿದ್ದ ಮೊದಲ ಲಾಕ್‌ಡೌನ್‌ ಸಂದರ್ಭದಲ್ಲಿ ಸಂಪೂರ್ಣ ನಿರ್ಬಂಧ ಹೇರಲಾಗಿದ್ದ ಕಟಿಂಗ್‌ ಶಾಪ್‌ ಗಳನ್ನು ತೆರತೆಯಲು ಷರತ್ತಿನೊಂದಿಗೆ ಅನುಮತಿಸಲಾಗಿದೆ. ಆದರೆ, ಸಾಮಾಜಿಕ ಅಂತರ, ಸ್ಯಾನಿಟೈಸರ್‌, ಮಾಸ್ಕ್, ಗ್ಲೌಸ್‌ಗಳಂಥ ಸುರಕ್ಷತಾ ಕ್ರಮ ಕಡ್ಡಾಯವಾಗಿ ಪಾಲಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳುವಲ್ಲಿ ಪೂರ್ವ ಸಿದ್ಧತೆ ಇಲ್ಲದ ಕಾರಣ ಬಹುತೇಕ ಕಟಿಂಗ್‌ ಶಾಪ್‌ಗ್ಳು ತೆರೆದಿರಲಿಲ್ಲ. ಲಾಕ್‌ ಡೌನ್‌ ಬಳಿಕ ಎರಡು ತಿಂಗಳಿಂದ ತಲೆಗೂದಲು ಹಾಗೂ ಗಡ್ಡ-ಮೀಸೆ ಕತ್ತರಿಸಿಕೊಳ್ಳಲಾಗದ ಜನರು ಅಲ್ಲಲ್ಲಿ ತೆರೆದಿದ್ದ ಕೆಲವೇ ಕಟಿಂಗ್‌ ಶಾಪ್‌ಗ್ಳಲ್ಲಿ ಮುಗಿಬಿದ್ದೂ ಕಂಡುಬಂತು. ನಗರದಲ್ಲಿ ಮಂಗಳವಾರ ಸಂಚಾರ ಜೋರಾಗಿತ್ತು, ಅಲ್ಲಲ್ಲಿ ಆಟೋಗಳು ಓಡಾಡಿದರೂ ಪೊಲೀಸರ ಆಕ್ಷೇಪದಿಂದಾಗಿ ಬಡಾವಣೆಗಳನ್ನು ಬಳಸಿ ಓಡಾಡ ಆರಂಭಿಸಿದ್ದವು. ಸಾರಿಗೆ ಸಂಸ್ಥೆ ನಗರ ಸಾರಿಗೆ ಪುನರಾರಂಭ ಮಾಡಿದ್ದರೂ ಸಾರ್ವಜನಿಕರ ಓಡಾಟ ನಿರೀಕ್ಷಿತ ಪ್ರಮಾಣದಲ್ಲಿ ಕಂಡು ಬರಲಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.