Vijayapura; ಕಿರುಕುಳ ತಾಳಲಾರದೆ ಮದ್ಯ ವ್ಯಸನಿ ಮಗನನ್ನು ಹತ್ಯೆಗೈದ ತಂದೆ
Team Udayavani, Jul 10, 2023, 3:30 PM IST
ವಿಜಯಪುರ: ದಿನನಿತ್ಯ ನೀಡುತ್ತಿದ್ದ ಕಿರುಕುಳದಿಂದ ರೋಸಿಹೋದ ತಂದೆಯೊಬ್ಬ ಮದ್ಯ ವ್ಯಸನಿ ಮಗನನ್ನು ಹತ್ಯೆ ಮಾಡಿರುವ ಘಟನೆ ನಾಗಠಾಣ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮದ್ಯ ವ್ಯಸನಿ ಮುತ್ತಪ್ಪ ಮಸಳಿ (38) ಎಂದು ಗುರುತಿಸಲಾಗಿದೆ. ಮಗನನ್ನೇ ಹತ್ಯೆ ಮಾಡಿದ ಆರೋಪದಲ್ಲಿ ಪೊಲೀಸರು ಮೃತನ ತಂದೆ ಬಸಪ್ಪ ಮಸಳಿ ಯನ್ನು ವಶಕ್ಕೆ ಪಡೆದಿದ್ದಾರೆ.
ವಿಪರೀತ ಮದ್ಯ ವ್ಯಸನಿಯಾಗಿದ್ದ ಮುತ್ತಪ್ಪ ಮದ್ಯ ಸೇವನೆಗಾಗಿ ಮನೆಯಲ್ಲಿದ್ದ ಸಾಮಾನು, ಜಮೀನಿನಲ್ಲಿನ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಇದರಿಂದಾಗಿ ಕಂಗಾಲಾಗಿದ್ದ ತಂದೆ ಬಸಪ್ಪ ತನ್ನ ಮಗನಿಗೆ ಮದ್ಯ ಸೇವನೆ ಬಿಡುವಂತೆ ಬುದ್ದಿ ಮಾತು ಹೇಳುತ್ತಲೇ ಇದ್ದರು. ಆದರೂ ಮುತ್ತಪ್ಪ ಕುಡಿತದ ಚಟ ಬಿಟ್ಟಿರಲಿಲ್ಲ. ಸೋಮವಾರ ಕೂಡ ಮದ್ಯ ಸೇವಿಸಿ ಬಂದಿದ್ದ ಮಗ ಮುತ್ತಪ್ಪನ ವರ್ತನೆಯಿಂದ ರೋಷಿಹೋದ ತಂದೆ ಬಸಪ್ಪ ಬಲಬಾದ ವಸ್ತುವಿನಿಂದ ತಲೆಗೆ ಹೊಡೆದ ಪರಿಣಾಮ ಮುತ್ತಪ್ಪ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಸುದ್ದಿ ತಿಳಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!