Vijayapura; ಗುಮ್ಮಟನಗರಿಯಲ್ಲಿ 7 ರಿಂದ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ‌


Team Udayavani, Feb 5, 2024, 11:43 AM IST

Vijayapura; ಗುಮ್ಮಟನಗರಿಯಲ್ಲಿ 7 ರಿಂದ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ‌

ವಿಜಯಪುರ: ವಿಜಯಪುರ ನಗರದಲ್ಲಿ ವಕೀಲರ ಸಂಘದಿಂದ ಫೆ.7 ರಿಂದ 11 ರ ವರೆಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿಜಯಪುರ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಈರಣ್ಣ ಚಾಗಶಟ್ಟಿ ಹೇಳಿದರು.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕ್ರಿಕೆಟ್ ಪಂದ್ಯಾವಳಿಯ ವಿವರ ನೀಡಿದ ಅವರು, ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದರು.

ಕೇರಳ ಮೂಲದ ತಜ್ಞರಿಂದ ಪಿಚ್ ರೂಪಿಸಲಾಗಿದ್ದು, ಹೊನಲು, ಬೆಳಕಿನ ಪಂದ್ಯಾವಳಿ ಆಗಿರುವ ಕಾರಣ ಎಲ್.ಇ.ಡಿ. ಬಲ್ಬ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಪ್ರತಿ ತಂಡಗಳಿಗೆ 15 ಸಾವಿರ ರೂ. ಪ್ರವೇಶ ಶುಲ್ಕವಿದ್ದು, ನಗರಕ್ಕೆ ಆಗಮಿಸುವ ಸ್ಪರ್ಧಿಗಳಿಗೆ ಇತರರಿಗೆ ಸೂಕ್ತ ವಸತಿ, ಊಟದ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

ಲೀಗ ಹಂತದಲ್ಲಿ 10 ಓವರ್ ನ ಪಂದ್ಯ ನಡೆದರೆ, ನಾಕೌಟ್ ಹಂತದಲ್ಲಿ 12 ಓವರ್ ಪಂದ್ಯ ಇರಲಿದೆ. ಅಂತಿಮ ಪಂದ್ಯ 15 ಓವರ್ ಗಳಿಂದ ಕೂಡಿರಲಿದೆ. ಪ್ರಥಮ ಬಹುಮಾನ ಎಸ್.ಎಸ್. ಮೂಡಲಗಿ ಪ್ರಾಯೋಜಿತ 1 ಲಕ್ಷ ರೂ., ಎರಡನೇ ಬಹುಮಾನ ಎಂ.ಎಚ್. ಖಾಸನೀಸ ಪ್ರಾಯೋಜಿತ 50 ಸಾವಿರ ರೂ. ಮೂರನೇ ಬಹುಮಾನ ಎಸ್.ಪಿ.ಮಾನೆ ಪ್ರಾಯೋಜಿತ 25 ಸಾವಿರ ರೂ. ಇದೆ ಎಂದು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ 30 ತಂಡಗಳು ಪಾಲ್ಗೊಳ್ಳುತ್ತಿದ್ದು, ಬಿಎಲ್.ಡಿ.ಇ. ಕ್ಯಾಂಪಸ್ ಮೈದಾನದಲ್ಲಿ ನಿತ್ಯವೂ 10 ಪಂದ್ಯಗಳ ಆಯೋಜಿಸಲಾಗುತ್ತದೆ ಎಂದರು.

ಜಿಲ್ಲಾ‌ ನ್ಯಾಯಾಧೀಶರಾದ ಸಂಜೀವ ನಲವಡೆ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದು, ಶಾಸಕ ಸುನಿಲಗೌಡ ಪಾಟೀಲ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಈರಣ್ಣ ಚಾಗಶೆಟ್ಟಿ, ಸಂಜೀವ ಜಹಗೀರದಾರ, ಎಸ್.ಎಸ್. ಮೂಡಲಗಿ, ವಿ.ಎನ್.ಪಾಟೀಲ, ಸಂಗಮೇಶ ಡೊಂಗರಗಾಂವಿ, ಬಸವರಾಜ ಸೋರಗಾಂವ, ಡಿ.ಜಿ.ಬಿರಾದಾರ, ರಾಜಶೇಖರ, ಕುಮಾರ ನಿಡೋಣಿ, ಕ್ರಿಕೆಟ್ ಪಂದ್ಯಾವಳಿ ಸಂಘಟಕ ಜಾಫರ ಅಂಗಡಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.