ಹಣ್ಣು -ತರಕಾರಿ ತಿಪ್ಪೆ ಪಾಲು!

ಹಂದಿ-ಬಿಡಾಡಿ ದನಗಳಿಗೆ ಆಹಾರವಾದ ತರಕಾರಿ

Team Udayavani, Apr 9, 2020, 7:27 PM IST

09-April-40

ವಿಜಯಪುರ: ಎಪಿಎಂಸಿ ಹಣ್ಣು-ತರಕಾರಿ ಮಾರುಕಟ್ಟೆಯಲ್ಲಿ ಮಾರಾಟವಾಗದ ದಾಳಿಂಬೆ ತಿಪ್ಪೆಗೆ ಸುರಿದ ರೈತರು.

ವಿಜಯಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶವೇ ಸ್ತಬ್ಧಗೊಂಡಿದ್ದು, ಕಳೆದ ಎರಡು ವಾರಗಳಿಂದ ಅನ್ನದಾತ ಕಂಗಾಲಾಗಿದ್ದಾನೆ. ಅದರಲ್ಲೂ ಕೊಯ್ಲಿಗೆ ಬಂದ ಮೇಲೆ ಬೇಗ ಕೆಟ್ಟುಹೋಗುವ ಹಣ್ಣು-ತರಕಾರಿ ಬೆಳೆಗಾರರು ಮುಕ್ತ ಮಾರುಕಟ್ಟೆ ಇಲ್ಲದೆ, ಅರೆ ಮಾರುಕಟ್ಟೆಯಲ್ಲಿ ಬೆಲೆಯೂ ಸಿಗದೇ ತಮ್ಮ ಬೆಳೆ ತಿಪ್ಪೆಗೆ ಎಸೆಯುವ ದುಸ್ಥಿತಿ ಬಂದೊದಗಿದೆ.

ವಿಜಯಪುರ ಜಿಲ್ಲಾ ಕೇಂದ್ರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿರುವ ಹಣ್ಣು-ತರಕಾರಿ ಪ್ರತ್ಯೇಕ ಮಾರುಕಟ್ಟೆಯಲ್ಲಿ 3-4 ದಿನಗಳಿಂದ ಹಣ್ಣು-ತರಕಾರಿ ಆವಕ ಆಗುತ್ತಿದೆ. ಆದರೆ, ತರಕಾರಿ, ಹಣ್ಣುಗಳ ಮೂಲ ಬಳಕೆ ಕೇಂದ್ರಗಳಾದ ಹೊಟೇಲ್‌, ಹಣ್ಣಿನ ಅಂಗಡಿ, ಜ್ಯೂಸ್‌ ಅಂಗಡಿಗಳು ಮದುವೆ, ಉತ್ಸವಗಳಂಥ ಎಲ್ಲ ವ್ಯವಸ್ಥೆಯೂ ಸ್ತಬ್ಧಗೊಂಡಿವೆ. ಹಣ್ಣು-ತರಕಾರಿ ಬೆಳೆ ಮಾರಾಟಕ್ಕೆ ಸಾಧ್ಯವಾಗದೆ ಅನ್ನದಾತ ಆರ್ಥಿಕ ನಷ್ಟಕ್ಕೆ ಸಿಲುಕಿದ್ದಾರೆ.

ವಿಜಯಪುರ ಜಿಲ್ಲಾಡಳಿತ ತರಕಾರಿ ಹಾಗೂ ಹಣ್ಣು ಮಾರುಕಟ್ಟೆಗೆ ಅವಕಾಶ ನೀಡಿದ್ದರೂ, ಮಾರುಕಟ್ಟೆಯಲ್ಲಿ ವಿಚಿತ್ರ ಸನ್ನಿವೇಶ ನಿರ್ಮಾಣವಾಗಿದೆ. ತೋಟಗಾರಿಕೆ ಕೆಲವು ಬೆಳೆಯನ್ನು ಕೊಳ್ಳುವವರಿಲ್ಲದೇ ಅನ್ನದಾತರು ತಮ್ಮ ಬೆಳೆಯನ್ನು ತಿಪ್ಪೆಗೆ ಚೆಲ್ಲಿ ಕಣ್ಣೀರು ಸುರಿಸುತ್ತ ಕುಳಿತಿದ್ದಾರೆ. ಮತ್ತೆ ಕೆಲ ನಿರ್ದಿಷ್ಟ ಹಣ್ಣು ಖರೀದಿಗೆ ಬೆಂಗಳೂರಿನಿಂದ ಬರಬೇಕಿದ್ದ ಖರೀದಿದಾರರಿಗೆ ಸಾರಿಗೆ ವ್ಯವಸ್ಥೆ ಇಲ್ಲವಾಗಿದೆ.

ಇನ್ನು ಸೇಬು, ಅಂಜೂರದಂಥ ಕೆಲವು ಹಣ್ಣು ಬರಬೇಕಿರುವ ಮುಂಬೈ ಮಾರುಕಟ್ಟೆ ಮುಚ್ಚಿರುವ ಕಾರಣ ಅಲ್ಲಿಂದಲೂ ಹಣ್ಣುಗಳು ಬರುತ್ತಿಲ್ಲ. ಹಣ್ಣು-ತರಕಾರಿಯಂಥ ಅಗತ್ಯ ವಸ್ತುಗಳ ಸಾಗಾಟದ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ ಸರಕು ಸಾಗಾಣಿಕೆ ವಾಹನ ಸಂಚಾರ ವಾಸ್ತವಾಗಿ ಬಂದ್‌ ಆಗಿರುವ ಪರಿಣಾಮ ಮಾರುಕಟ್ಟೆಗೆ ನಿರೀಕ್ಷಿತ ಬೆಳೆ ಬಾರದೆ, ಖರೀದಿದಾರರೂ ಸಿಗದೇ ಸಗಟು ವ್ಯಾಪಾರಿಗಳೂ ಕಂಗಲಾಗಿದ್ದಾರೆ.

ಬೇಸಿಗೆ ಸಂದರ್ಭದಲ್ಲಿ ಜ್ಯೂಸ್‌ ಅಂಗಡಿ ಹಾಗೂ ಹೋಟೆಲ್‌ಗ‌ಳಲ್ಲಿ ಹಣ್ಣು ಖರೀದಿಯಾದರು ಇತ್ತು. ಲಾಕ್‌ಡೌನ್‌ ಪರಿಣಾಮ ಅವೆಲ್ಲ ಮುಚ್ಚಿದ್ದು, ಹಣ್ಣು ಮಾರಲು ಕಿರು ಮಾರುಕಟ್ಟೆಯೂ ಇಲ್ಲದಂತಾಗಿದೆ. ಪರಿಣಾಮ ತಂದ ಬೆಳೆಯನ್ನು ಮರಳಿ ಒಯ್ಯುವ ಮಾತಿರಲಿ, ತಂದಿರುವ ವಾಹನದ ಬಾಡಿಗೆಯನ್ನೂ ಕೊಡಲೂ ಹಣವಿಲ್ಲದೇ ತಿಪ್ಪೆಗೆ ಚೆಲ್ಲಿ ರೈತರು ಕಣ್ಣೀರು ಹಾಕುತಿದ್ದಾರೆ.

ಇನ್ನು ತರಕಾರಿಗಳ ಮಾರುಕಟ್ಟೆ ಕಥೆಯೂ ಹೊರತಾಗಿಲ್ಲ. ಲಾಕ್‌ಡೌನ್‌ನಿಂದ ಮದುವೆ, ಜಾತ್ರೆ, ಉತ್ಸವ, ದಿಬ್ಬಣಗಳಂಥ ಎಲ್ಲ ಕಾರ್ಯಕ್ರಮಗಳಿಗೂ ಸರ್ಕಾರ ನಿರ್ಬಂಧ ಹೆರಿದ್ದು, ಹಸಿ ಮೆಣಸಿನಕಾಯಿ, ಕ್ಯಾಪ್ಸಿಕಮ್‌, ಟೋಮ್ಯಾಟೋ, ಬದನೆಕಾಯಿ, ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕಿಡಾಗಿದ್ದಾರೆ. ಮಾರಾಟಕ್ಕೆ ಅವಕಾಶ ಇದೆ ಎಂದು ಮಾರುಕಟ್ಟೆಗೆ ತಂದರೂ ಕೊಳ್ಳುವವರಿಲ್ಲದೇ ತರಕಾರಿಯನ್ನು ತಿಪ್ಪೆಗೆ ಸುರಿದು ಹೋಗುತ್ತಿರುವ ದೃಶ್ಯ ಮನ ಕಲುಕುವಂತಿದೆ. ಊರಿಗೆ ಮರಳಲೂ ಹಣ ಇಲ್ಲದ ರೈತರಿಗೆ ಮಧ್ಯವರ್ತಿ ವ್ಯಾಪಾರಿಗಳೇ ಹಣ ನೀಡಿ ಮನೆಗೆ ಕಳಿಸುತ್ತಿದ್ದಾರೆ. ಮತ್ತೆ ಕೆಲವು ರೈತರು ತಮ್ಮ ಹಣ್ಣು-ತರಕಾರಿಗೆ ನಾಳೆ, ನಾಡಿದ್ದು ಬೆಲೆ ಸಿಗುವ ವಿಶ್ವಾಸದಲ್ಲಿ ಮಧ್ಯವರ್ತಿಗಳ ಬಳಿಯೇ ಇರಿಸಿದ್ದ ಹಣ್ಣು-ತರಕಾರಿ ಕೊಳೆಯಲು ಆರಂಭಿಸಿದೆ.

ದುರ್ವಾಸನೆ ಹರಡಿಕೊಂಡಿದ್ದರಿಂದ ರೈತರ ಒಪ್ಪಿಗೆ ಪಡೆದು ತಿಪ್ಪೆಗೆ ಸುರಿಯುತ್ತಿದ್ದು, ಹಂದಿ, ಬಿಡಾಡಿ ದನಗಳ ಪಾಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಪ್ರಕೃತಿ ನಿರ್ಮಿತ ಅನಿರೀಕ್ಷಿತ ಈ ವಿಚಿತ್ರ ಸಂದರ್ಭದಲ್ಲಿ ಸರ್ಕಾರವನ್ನೂ ಹಳಿಯುವಂತಿಲ್ಲ, ಆಡಳಿತಗಾರರನ್ನು ದೂರುವಂತಿಲ್ಲ ಎನ್ನುವಂಥ ಸಂದಿಗ್ಧ ಸ್ಥಿತಿ ನಿರ್ಮಾವಾಗಿದೆ.

ಜಿ.ಎಸ್‌.ಕಮತರ

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

court

Vijayapura: ಪೋಕ್ಸೋ ಆರೋಪಿಗೆ 5 ವರ್ಷ, ಗಾಂಜಾ ಬೆಳದವನಿಗೆ 3 ವರ್ಷ ಜೈಲು ಶಿಕ್ಷೆ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.