ಪ್ರತಿ ಕುಟುಂಬ ತಪ್ಪದೇ ಶೌಚಾಲಯ ಕಟ್ಟಿಸಿಕೊಳ್ಳಿ : ಸಿಇಒ ಗೋವಿಂದರಡ್ಡಿ


Team Udayavani, Mar 8, 2020, 1:30 PM IST

8-March-14

ವಿಜಯಪುರ: ಪ್ರತಿ ಕುಟುಂಬ ಶೌಚಾಲಯ ಕಟ್ಟಿಸಿಕೊಂಡು ನಿರಂತರ ಬಳಕೆ ಹಾಗೂ ನಿರ್ವಹಣೆ ಮೂಲಕ ಗಾಂಧೀಜಿ ಕನಸಿನ ಆರೋಗ್ಯ, ನೈರ್ಮಲ್ಯ ಹಾಗೂ ಮಹಿಳಾ ಸುರಕ್ಷತೆಯ ಸಮಾಜ ನಿರ್ಮಿಸಿ ಎಂದು ಜಿಪಂ ಸಿಇಒ ಗೋವಿಂದರಡ್ಡಿ ಮನವಿ ಮಾಡಿದರು.

ನಗರದ ಆಕಾಶವಾಣಿ ಕೇಂದ್ರದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆ ಅಡಿಯಲ್ಲಿ (ಗ್ರಾಮೀಣ) ಯಾವುದೇ ಫಲಾನುಭವಿಗಳು ಶೌಚಾಲಯ ನಿರ್ಮಾಣದಿಂದ ಹೊರಗೆ ಉಳಿಯಬಾರದು ಎಂಬ ವಿಷಯ ಕುರಿತು ವಿಜಯಪುರ ಆಕಾಶವಾಣಿಯಲ್ಲಿ ಜರುಗಿದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಜಿಲ್ಲೆಯ ಶ್ರೋತೃಗಳೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯ 2018-19ರಲ್ಲಿ ಎಲ್‌ಒಬಿ ಯೋಜನೆ ಅಡಿಯಲ್ಲಿ 13,414 ಶೌಚಾಲಯ ನಿರ್ಮಿಸಲಾಗಿದೆ. 2019-20ರಲ್ಲಿ 25,813 ಗುರಿಯಲ್ಲಿ ಫೆಬ್ರವರಿ 29ರವೆರೆಗೆ 1023 ಶೌಚಾಲಯ ನಿರ್ಮಿಸಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿನ 2012ರ ಬೇಸ್‌ಲೈನ್‌ ಸರ್ವೇ ಪ್ರಕಾರ 2.59 ಲಕ್ಷ ಕುಟುಂಬಗಳ ಮನೆಗಳಿಗೆ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಶೌಚಾಲಯ ಈಗಾಗಲೇ ನಿರ್ಮಿಸುವ ಗುರಿ ಹೊಂದಲಾಗಿತ್ತು. ಅದು ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿವರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶೇ. 85 ಜನರು ಶೌಚಾಲಯ ನಿರ್ಮಿಸಿಕೊಂಡಿದ್ದರೂ ಬಳಕೆ ಮಾತ್ರ ಶೇ. 60 ಮೀರಿಲ್ಲ. ಬಯಲು ಬಹಿರ್ದೆಸೆ ರೂಢಿಯಿಂದ ಜನರನ್ನು ಸ್ವಯಂ ಪ್ರೇರಣೆಯಿಂದ ಶೌಚಾಲಯ ಬಳಕೆಯ ಮಹತ್ವದ ಕುರಿತು ಮನವರಿಕೆ ಮಾಡಿಕೊಡಬೇಕಿದೆ. ಇದಕ್ಕಾಗಿ ಸ್ವಚ್ಛ  ಭಾರತ ಯೋಜನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಕುರಿರು ಕುರಿತು ಜಿಲ್ಲೆಯ ಜನರಲ್ಲಿ ಫೋನ್‌ ಇನ್‌ ಕಾರ್ಯಕ್ರಮದ ಮೂಲಕ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ ಎಂದರು.

ವೈಯಕ್ತಿಯ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ-ಪಂಗಡದವರಿಗೆ 15 ಸಾವಿರ ರೂ. ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದವರಿಗೆ 12 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಜಿಲ್ಲೆಯ ಫಲಾನುಭವಿಗಳು ಸದುಪಯೋಗ ಪಡೆಯಬೇಕು. ಅದರೊಂದಿಗೆ ಪರಿಸರ ಸ್ವತ್ಛತೆ, ನೈರ್ಮಲ್ಯ, ಆರೋಗ್ಯ, ಮಹಿಳಾ ಸುರಕ್ಷತೆ ಮತ್ತು ರೋಗ ರುಜಿನಗಳ ನಿಯಂತ್ರಣಕ್ಕಾಗಿ ಅರ್ಹ ಫಲಾನುಭವಿಗಳು ತಪ್ಪದೆ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದರು.

ಶೀಘ್ರದಲ್ಲಿಯೇ ಜನಗಣತಿ ಆರಂಭವಾಗಲಿದ್ದು ಅದರಡಿ ಶೌಚಾಲಯ ಹೊಂದಿರುವ ಬಗ್ಗೆಯೂ ಮಾಹಿತಿ ಕಲೆಹಾಕುವ ಉದ್ದೇಶ ಹೊಂದಲಾಗಿದೆ. ಕಾರಣ ಯೋಜನೆ ಅಡಿ ಪ್ರೋತ್ಸಾಹಧನ ಸೌಲಭ್ಯ ಪಡೆದಿರುವ ಅರ್ಹ ಫಲಾನುಭವಿಗಳು ಇದೇ ಮಾರ್ಚ್‌ ಒಳಗೆ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಸಿಂದಗಿ ತಾಲೂಕಿನ ಭತ್ತಯ್ಯ ಹಿರೇಮಠ, ವಿಜಯಪುರದ ಗುರುರಾಜ್‌ ಪತ್ತಾರ, ನಿಡೋಣಿಯ ರೇವಣಸಿದ್ಧ ಕುಮಠೆ, ಇಂಡಿ ತಾಲೂಕಿನ ಸುನೀಲ, ರಮೇಶ, ಚೆನ್ನಬಸಯ್ಯ, ಖತಿಜಾಪುರದ ವಿಶಾಲ ಪಾಟೀಲ, ತಾಳಿಕೋಟಿಯ ರಾಜು ಹಿರೇಮಠ, ಬಸವರಾಜ ಹಳ್ಳಿ, ಸಾಗರ ಕುಮಠೆ, ಈರಪ್ಪ ಲಂಗೋಟಿ, ರಮೇಶ ಶರಣರ ಇತರರ ಕರೆಗೆ ಸ್ಪಂದಿಸಿದ ಸಿಇಒ ಗೋವಿಂದರಡ್ಡಿ, ಗ್ರಾಮೀಣ ಸ್ವಚ್ಛ ಭಾರತ ಮಿಶನ್‌ ಯೋಜನೆ ಅಡಿಯಲ್ಲಿ ಸಮಸ್ಯೆಗಳಿಗೆ ಆಯಾ ಗ್ರಾಪಂ ಪಿಡಿಒ ಮೂಲಕ ಪರಿಹಾರ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಮುಖ್ಯಸ್ಥ ಬಿ.ಡಿ. ಕಾಂಬಳೆ, ಜಿಪಂ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಎಂಜಿನಿಯರಿಂಗ್‌ ವಿಭಾಗದ ಕಬೀರ್‌ ಲಮಾಣಿ, ಬಸವರಾಜ ಒಂಟಗೋಡಿ ಕುಲಕರ್ಣಿ ಸೇರಿದಂತೆ ಇತರರು ಇದ್ದರು. ಆಕಾಶವಾಣಿ ವರದಿಗಾರ ನೀಲೇಶ ಬೇನಾಳ ನೇರ ಫೋನ್‌ ಇನ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.