ತವರು ಸೇರಿದ 33 ಕಾರ್ಮಿಕರು
Team Udayavani, Apr 26, 2020, 4:47 PM IST
ವಿಜಯಪುರ: ಲಾಕ್ಡೌನ್ ಬಳಿಕ ನಗರದಲ್ಲಿ ಜಿಲ್ಲಾಡಳಿತದ ಪುನರ್ವಸತಿಯಲ್ಲಿದ್ದ ವಿವಿಧ ಜಿಲ್ಲೆಗಳ ಕಾರ್ಮಿಕರನ್ನು ಜಿಲ್ಲಾಡಳಿತ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ತವರಿಗೆ ಬೀಳ್ಕೊಟ್ಟಿತು.
ವಿಜಯಪುರ: ಲಾಕ್ಡೌನ್ ಬಳಿಕ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ಉಡುಪಿ ಸೇರಿ ರಾಜ್ಯ ವಿವಿಧ ಜಿಲ್ಲೆಗಳ ಕಾರ್ಮಿಕರನ್ನು ಶನಿವಾರ ರಾತ್ರಿ ಜಿಲ್ಲಾಡಳಿತ ತವರಿಗೆ ಬೀಳ್ಕೊಟ್ಟಿದೆ.
ಬೇರೆ ಪ್ರದೇಶಗಳಿಂದ ಬಂದು ಲಾಕ್ ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಿಲುಕಿದ್ದ ರಾಜ್ಯದ ಉಡುಪಿ, ಮಂಗಳೂರು, ಬೆಂಗಳೂರು, ಬೆಳಗಾವಿ ಸೇರಿದಂತೆ 9 ಜಿಲ್ಲೆಗಳ 33 ಕಾರ್ಮಿಕರಿಗೆ ಜಿಲ್ಲಾಡಳಿತ ನಗರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿತ್ತು. ಇದೀಗ ಸರ್ಕಾರ ತಾತ್ಕಾಲಿಕ ಪುನರ್ವಸತಿಯಲ್ಲಿರುವ ರಾಜ್ಯದ ಒಳಗಡೆಯ ಅಂತರ ಜಿಲ್ಲಾ ಕಾರ್ಮಿಕರನ್ನು ತವರಿಗೆ ಕಳಿಸಲು ನಿರ್ಧರಿಸಿದೆ.
ಸರ್ಕಾರದ ಸೂಚನೆ ಮೇರೆಗೆ ಬೇರೆ ಬೇರೆ ಸ್ಥಳಗಳಿಗೆ ಸೇರಿದ ಕಾರ್ಮಿಕರಾಗಿದ್ದರಿಂದ ಕೆಲವರು ಸ್ವಂತ ವಾಹನದಲ್ಲಿ, ಮತ್ತೆ ಕೆಲವರು ಬಾಡಿಗೆ ವಾಹನದಲ್ಲಿ ತವರಿಗೆ ಮರಳಿದ್ದಾರೆ. 9 ಜಿಲ್ಲೆಗಳ ಎಲ್ಲ ಕಾರ್ಮಿಕರನ್ನು ಅವರ ತವರಿಗೆ ಕಳಿಸುವ ಮುನ್ನ ವೈದ್ಯಕೀಯ ಪರೀಕ್ಷೆ ನಡೆಸಿ, ಕೋವಿಡ್ ಸೋಂಕು ಇಲ್ಲ ಎಂಬುದನ್ನು ದೃಢಪಡಿಸಿಕೊಂಡು ಅವರ ಊರಿಗೆ ಕಳಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ