ದೇಶದ ಅಭಿವೃದ್ಧಿಗೆ ಜನಸಂಖ್ಯೆ ಹೆಚ್ಚಳವೇ ಮಾರಕ: ಬಾಗವಾನ


Team Udayavani, Jan 19, 2020, 5:25 PM IST

19-January-25

ವಿಜಯಪುರ: ಮಿತಿ ಮೀರಿದ ಜನಸಂಖ್ಯೆಯಿಂದ ಮೊದಲು ಕುಟುಂಬದೊಂದಿಗೆ ಆರಂಭವಾಗುವ ಸಮಸ್ಯೆ ಇಡಿ ದೇಶಕ್ಕೆ ಮಾರಕವಾಗಿ ಅಭಿವೃದ್ಧಿ ಕುಂಠಿತವಾಗುತ್ತದೆ. ಹೀಗಾಗಿ ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಪ್ರತಿ ಕುಟುಂಬದ ಬದ್ಧತೆ ತೋರಬೇಕಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್‌.ಆರ್‌. ಬಾಗವಾನ ಹೇಳಿದರು.

ಬಬಲೇಶ್ವರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಹಾಗೂ ಬಬಲೇಶ್ವರ ಶಾಂತವೀರ ಕಾಲೇಜು ಎನ್‌ಎನ್ನೆಸ್ಸೆಸ್‌ ಘಟಕದ ಆಶ್ರಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಎಲ್ಲ ವಿಧದಲ್ಲಿಯೂ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಜನಸಂಖ್ಯೆ ಯಿಂದ ಆರ್ಥಿಕ ಹೊರೆ ಜೀವನ ಶೈಲಿ ಹಾಗೂ ವಿದ್ಯಾಭ್ಯಾಸಕ್ಕೆ, ಬಡತನಕ್ಕೆ ಪ್ರಮುಖ ಕಾರಣವಾಗಿದೆ ಎಂದು ವಿವರಿಸಿದರು.

ದೇಶದ ಪ್ರಗತಿ ಕುಂಠಿತವಾಗುವುದಲ್ಲದೆ, ಜನದಟ್ಟಣೆಯಿಂದ ಆರ್ಥಿಕತೆ ಕುಸಿತ, ಬೀದಿ ಬೀದಿಗಳಲ್ಲಿ ಕೊಳಚೆ ಪ್ರದೇಶ ಉದ್ಭವಿಸುವುದು ಇದರಿಂದ ಅನಾರೋಗ್ಯ ಹೆಚ್ಚಳ ಮತ್ತು ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಳವಾಗುತ್ತದೆ. ಕಾರಣ ಜನಸಂಖ್ಯೆಯನ್ನು ನಿಯಂತ್ರಿಸಿ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಸಕ್ತ ವರ್ಷದ ಇಲಾಖೆ ಘೋಷಣೆಯಾದ ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ ಎಂಬ ಘೋಷಣೆಯ ಹಿನ್ನಲೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಪೂರ್ಣ ತಯಾರಿ, ಜನಸಂಖ್ಯೆ ತಡೆಯಲು ಇರುವ ಮಾರ್ಗೊಪಾಯಗಳು, ಜನಸಂಖ್ಯೆ ಹೆಚ್ಚಳದಿಂದ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಪ್ರತಿಯೊಬ್ಬರೂ ಅರಿಯಬೇಕು ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಕವಿತಾ ಮಾತನಾಡಿ, ಅನಾರೊಗ್ಯದ 10 ಮಕ್ಕಳನ್ನು ಹಡೆಯುವುದಕ್ಕಿಂತ ಆರೊಗ್ಯಯುತ ಒಂದು ಮಗು ದೇಶದ ಸಂಪತ್ತು ಆಗುತ್ತದೆ. ಆರೊಗ್ಯವಂತ ಒಂದು ಮಗುವಿನಿಂದ ದೇಶಕ್ಕೆ ಮಾರಕವಾಗುವ
ಬಡತನ, ನಿರುದ್ಯೋಗ ಇವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕಾಗಿ ಟೋಬೇಕ್ಟಮಿ, ಲೇಪ್ರಸ್ಕೋಪಿಕ್‌, ಎನ್‌ಎಸ್‌ವಿ ವಿಧಾನಗಳನ್ನು ಹಾಗೂ ತಾತ್ಕಾಲಿಕ ವಿಧಾನಗಳಾದ ಐಯುಡಿ, ಒಪಿ, ನಿರೋಧ, ಚುಚ್ಚು ಮದ್ದುಗಳ ಬಗ್ಗೆ ತಿಳಿಸಿ ಇವುಗಳಿಂದ ಜನಸಂಖ್ಯೆ ನಿಯಂತ್ರಣ ಮಾಡಬಹುದು ಎಂದರು.

ಮನೆಗೊಂದು ಮಗು ದೇಶಕ್ಕೆ ನಗು ಇದರಿಂದ ತಂದೆ ತಾಯಿ ಆರೋಗ್ಯದ ಜೊತೆಗೆ ಕುಟುಂಬ ಸಂತೋಷದಿಂದ ಇರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬಲೇಶ್ವರ ಶಾಂತವೀರ ಕಾಲೇಜು ಪ್ರಾಂಶುಪಾಲ ವಿ.ಆರ್‌. ಚೌಧರಿ, ವಿಶ್ವದ ಜನಸಂಖ್ಯೆಯಲ್ಲಿ ಭಾರತ 2ನೇ ಪ್ರಬಲ ರಾಷ್ಟ್ರ ಎನಿಸಿದೆ. ಈಗಿರುವ ಅಂಕಿ ಅಂಶಗಳ ಏರಿಳಿತದ ಲೆಕ್ಕಾಚಾರಲದಲ್ಲಿ ಭಾರತ ದೇಶ ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವು ಅಪಾಯವೂ ಇದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ತುರ್ತು ನಿರ್ಧಾರ ಕೈಗೊಳ್ಳಬೇಕಿದೆ. ಚಿಕ್ಕ ಸಂಸಾರದೊಂದಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಒಳ್ಳೆ ನಾಗರಿಕರನ್ನಾಗಿ ಮಾಡಲು ಪ್ರಯತ್ನ ಪಟ್ಟರೆ ಆ ಮಕ್ಕಳೆ ದೇಶದ ಸಂಪತ್ತು ಆಗುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದಕ್ಕೂ ಮುನ್ನ ನಗದಲ್ಲಿ ಹಮ್ಮಿಕೊಂಡಿದ್ದ ಜನಸಂಖ್ಯೆ ಜಾಗೃತಿ ಜಾಥಕ್ಕೆ ನಡೆಯಿತು. ಡಾ| ಎಂ.ಸಿ.ನಿಗಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.