ಮನೆಯಲ್ಲಿಯೇ ಯೋಗಾ ಯೋಗ
ಸಾಮಾಜಿಕ ಅಂತರ ಕಾಪಾಡಲು ಸಾಮೂಹಿಕವಾಗಿ ನಡೆಯದ ಯೋಗ ಕಾರ್ಯಕ್ರಮ
Team Udayavani, Jun 22, 2020, 6:29 PM IST
ವಿಜಯಪುರ: ನಗರದ ಶಾಂತಿನಿಕೇತನ ಶಾಲೆಯ ಯೋಗ ತರಬೇತಿ ಪಡೆದ ಮಕ್ಕಳು ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರದರ್ಶನ ನೀಡಿದರು
ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಕೋವಿಡ್ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ.
ಹೀಗಾಗಿ ಸರ್ಕಾರ ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ನಿರ್ಬಂಧಿಸಿದ್ದರಿಂದ ಯೋಗಾಸಕ್ತರು ತಮ್ಮ ಮನೆಗಳಲ್ಲಿ, ಸ್ನೇಹಿತರೊಂದಿಗೆ ಅಲ್ಲಲ್ಲಿ ಕೂಡಿಕೊಂಡು ಸಾಂಕೇತಿಕವಾಗಿ ಯೋಗ ಪ್ರದರ್ಶನದ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಮಹಿಳೆಯರಿಂದ ದಿನಾಚರಣೆ
ಮುದ್ದೇಬಿಹಾಳ: ಭಾರತದ ಸನಾತನ ಪರಂಪರೆಯಾಗಿರುವ ಯೋಗಕ್ಕೆ ವಿಶ್ವಮನ್ನಣೆ ದೊರಕಿಸಿಕೊಟ್ಟ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಯೋಗ ಗುರುಮಾತೆ ಪ್ರೇಮಾ ಗುಡದಿನ್ನಿ ಹೇಳಿದರು.
ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ರವಿವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಅದರಲ್ಲೂ ಮುಖ್ಯವಾಗಿ ಸಂಸಾರದ ಜಂಜಾಟದಲ್ಲಿರುವ ಮಹಿಳೆಯರು ಕಡ್ಡಾಯವಾಗಿ ನಿತ್ಯ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆಯರಿಗಾಗಿಯೇ ನಿತ್ಯವೂ ಯೋಗಾಭ್ಯಾಸ ಹೇಳಿಕೊಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ವೇಳೆ ಪ್ರೇಮಾ ಅವರನ್ನು ಮಹಿಳೆಯರು ಗೌರವಿಸಿದರು. ರೂಪಾ ದೇಸಾಯಿ, ಸಂಗಮ್ಮ ದೇವರಳ್ಳಿ, ಅನುರಾಧಾ ಪ್ಯಾಟಿಗೌಡರ, ವಿಜಯಾ ಚೌಧರಿ, ಸರಸ್ವತಿ ಬಿರಾದಾರ, ಶಾರದಾ ಸಜ್ಜನ, ಗೀತಾ ಹುರಕಡ್ಲಿ, ಹೇಮಾ ಇದ್ದರು. ಇದಕ್ಕೂ ಮುನ್ನ ಒಂದು ಗಂಟೆ ಕಾಲ ಯೋಗಾಭ್ಯಾಸ ನಡೆಸಿ ಯೋಗ ದಿನ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ