ಪ್ರಜಾಧ್ವನಿ ಹೆಸರಿನಲ್ಲಿ ಬಬಲೇಶ್ವರ ಕ್ಷೇತ್ರದಲ್ಲಿ ಮತದಾರರಿಗೆ ಸೀರೆ ಹಂಚಿಕೆ: ವಿಜುಗೌಡ ಆರೋಪ


Team Udayavani, Feb 20, 2023, 11:35 AM IST

ಪ್ರಜಾಧ್ವನಿ ಹೆಸರಿನಲ್ಲಿ ಬಬಲೇಶ್ವರ ಕ್ಷೇತ್ರದಲ್ಲಿ ಮತದಾರರಿಗೆ ಸೀರೆ ಹಂಚಿಕೆ: ವಿಜುಗೌಡ ಆರೋಪ

ವಿಜಯಪುರ: ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಸಿದ್ಧೇಶ್ವರ ಶ್ರೀಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಾಗೂ ಮತದಾರರಿಗೆ ಈಗಿನಿಂದಲೇ ಸೀರೆ ಹಂಚುವ ಹೇಡಿತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಆರೋಪಿಸಿದರು.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ಕ್ಷೇತ್ರದ ರಾಜಕೀಯ ಕುತಂತ್ರದಿಂದ ನನಗೆ ಸೋಲಾಗಿದೆ. ಹಣ ಗಳಿಸಿಲ್ಲ, ಜನರ ಹೃದಯ ಗೆದ್ದಿದ್ದೇನೆ. ಹೀಗಾಗಿ ಹೇಡಿ ರಾಜಕಾರಣ ಮಾಡುವ ಕೆಲಸ ಮತ್ತೆ ಈಗಿನಿಂದಲೇ ಆರಂಭಗೊಂಡಿದೆ ಎಂದು ಪರೋಕ್ಷವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಿರುದ್ಧ ದೋಷಾರೋಪ ಮಾಡಿದರು.

ಇಷ್ಟಕ್ಕೂ ಚುನಾವಣೆಯಲ್ಲಿ ಆಯ್ಕೆಯಾದ 4 ವರ್ಷ 9 ತಿಂಗಳ ಅವಧಿಯಲ್ಲಿ ಇವರು ಅಭಿವೃದ್ಧಿ ಮಾಡಿದ್ದಾದರೂ ಏನು ಎಂದು ಪ್ರಶ್ನಿಸಿದರು.

ಬಬಲೇಶ್ವರ ಕ್ಷೇತ್ರದಲ್ಲಿ ನಿರಂತರ ಸೋಲು ಅನುಭವಿಸಿದರೂ 15 ವರ್ಷಗಳ ಕಾಲ ಬಬಲೇಶ್ವರ ಜನತೆಗಾಗಿ ನನ್ನ ಕೈಲಾದಷ್ಟು ಕೆಲಸ ಮಾಡಿದ್ದೇನೆ. ಇದನ್ನು ಗಮನಿಸಿ ಯಡಿಯೂರಪ್ಪ, ಪ್ರಹ್ಲಾದ ಜೋಶಿ ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಅನಾರೋಗ್ಯ: ಮಂಗಳೂರಿನ ಆಸ್ಪತ್ರೆಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಚಿಕಿತ್ಸೆ

ಬಬಲೇಶ್ವರ ಕ್ಷೇತ್ರದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ಸೀರೆ, ಮೊಬೈಲ್ ಹಂಚುವ ಆಮಿಷದ ಅಕ್ರಮ ಮಾರ್ಗ ಅನುಸರಿಸುತ್ತಿದೆ ಎಂದು ದೂರಿದರು.

ಸೋಲುವ ಭೀತಿಯಿಂದ ಆಧುನಿಕ ಭಗೀರತ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಹಿಳೆಯರಿಗೆ ಸೀರೆ ಹಾಗೂ ಮೊಬೈಲ್ ವಿತರಣೆ ಮಾಡುತ್ತಿದ್ದಾರೆ. ಆದರೂ ಬಬಲೇಶ್ವರ ಕ್ಷೇತ್ರದ ಜನರು ಇವರ ಸಣ್ಣತನದ ಆಮಿಷಕ್ಕೆ ಬಲಿಯಾಗುವುದಿಲ್ಲ. ಬಬಲಾಗಿ ಈ ಬಾರಿ ಕ್ಷೇತ್ರದ ಜನರು ಬಿಜೆಪಿ ಪಕ್ಷದ ಮೂಲಕ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೊಂದೆಡೆ 9 ಸಾವಿರ ರೂ. ಮೌಲ್ಯದ ಹಿಟ್ಟಿನ ಗಿರಣಿಯನ್ನು 20 ಸಾವಿರ ರೂ. ಮೌಲ್ಯ ಕಟ್ಟಿ, 10 ಸಾವಿರ ರೂ. ರಿಯಾಯಿತಿ ನೀಡುವ ನಾಟಕ ಆಡುತ್ತಿದ್ದಾರೆ ಎಂದು ಆರೋಪಿಸಿದರು.

ಸುಳ್ಳು ಹೇಳಿಕೆ ಮೂಲಕ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಹೇಡಿ ರಾಜಕಾರಣ ಮಾಡುತ್ತಿದ್ದಾರೆ. ತಿರುಗಲು ಒಂದು ರಸ್ತೆಯನ್ನೂ ಮಾಡಲಾಗದವರು ತಮ್ಮನ್ನು ತಾವು ಅಭಿವೃದ್ಧಿ ಹರಿಕಾರ ಎಂದು ಕರೆಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

ಸಿದ್ಧೇಶ್ವರ ಶ್ರೀಗಳ ಹೆಸರು ಬಳಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಈಚೆಗಷ್ಟೇ ಸಿದ್ಧೇಶ್ವರ ಶ್ರೀಗಳ ಸಂಪರ್ಕಕ್ಕೆ ಬಂದಿರುವ ಇವರಿಗೆ, ಮಲ್ಲಿಕಾರ್ಜುನ ಶ್ರೀಗಳಿಗೂ ನಮ್ಮ ಕುಟುಂಬಕ್ಕೆ ಇದ್ದ ಅವಿನಾಭಾವ ಸಂಬಂಧ ಇತ್ತು. ಆದರೂ ರಾಜಕೀಯ ಲಾಭಕ್ಕೆ ಬಳಸಿಕೊಂಡಿಲ್ಲ. 2013, 2018 ರಲ್ಲಿ ಬಬಲೇಶ್ವರ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು, ಆದರೆ ವಾಮ‌ಮಾರ್ಗದಿಂದ ನನ್ನ ಗೆಲುವಿನ ಸರ್ಟಿಫಿಕೇಟ್ ಕದಿಯುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಿಜಕ್ಕೂ ನೀವು ಅಭಿವೃದ್ಧಿ ಮಾಡಿದ್ದರೆ ಕ್ಷೇತ್ರದಲ್ಲಿ ನಾನೂ ಹಾಗೂ ನೀವು ಇಬ್ಬರೂ ಪ್ರಚಾರಕ್ಕೆ ಹೋಗುವುದು ಬೇಡ. ಕೇವಲ ನಾವು ಮಾಡಿದ ಕೆಲಸದ ಬಗ್ಗೆ ಹೇಳಿಕೆ ಕೊಟ್ಟು ನಮ್ಮ ಮನೆಯಲ್ಲಿ ಕುಳಿತುಕೊಳ್ಳೋಣ. ಜನರೇ ತೀರ್ಮಾನಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಬಬಲೇಶ್ವರ ಮಂಡಲ ಅಧ್ಯಕ್ಷ ವಿಠ್ಠಲ ಕಿರಸೂರು, ಯುವ ಮೋರ್ಚಾ ಅಧ್ಯಕ್ಷ ಶಂಕರಗೌಡ ಬಿರಾದಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.