ಇಂಡಿಯಲ್ಲಿ ಕುಡಿಯುವ ನೀರಿಗೆ ಗ್ರಾಮಸ್ಥರ ಪರದಾಟ
Team Udayavani, May 25, 2018, 1:03 PM IST
ಇಂಡಿ: ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಜನರಿಗೆ ನೀರು ತರುವುದೇ ದೊಡ್ಡ
ಕೆಲಸವಾಗಿದೆ. ಸರ್ಕಾರ ಬೇಸಿಗೆಯ ಸಮಯದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಕೋಟ್ಯಂತರ ರೂಪಾಯಿ
ವೆಚ್ಚ ಮಾಡಿದರೂ ಸಾರ್ವಜನಿಕರಿಗೆ ಅವಶ್ಯಕತೆ ಇರುವಷ್ಟು ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಪ್ರಸಕ್ತ ವರ್ಷ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಬಿಸಿಲು ಹೆಚ್ಚಾಗಿದ್ದರಿಂದ ಬಿಸಿಲಿಗೆ ಹೆದರಿ ಜನ ಮನೆಯಿಂದ ಹೊರಗಡೆ ತಿರುಗಾಡದ ಪರಿಸ್ಥಿತಿ ಎದುರಾಗಿದೆ.
ಕುಡಿಯುವ ನೀರಿನ ತೊಂದರೆ: ಜನ-ಜಾನುವಾರುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಜಾನುವಾರುಗಳಿಗೆ ನೀರು ಮತ್ತು ಮೇವಿನ ಸಮಸ್ಯೆ ಎದುರಾಗಿದೆ. ಇಂಡಿ ಪಟ್ಟಣ ಸೇರಿದಂತೆ ಮಾವಿನಹಳ್ಳಿ,
ತಡವಲಗಾ, ರೂಗಿ, ಬೋಳೆಗಾಂವ, ಗಣವಲಗಾ, ನಿಂಬಾಳ(ಬಿ. ಕೆ), ನಿಂಬಾಳ(ಕೆ.ಡಿ), ಲಿಂಗದಳ್ಳಿ,
ಹಳಗುಣಕಿ, ರಾಜನಾಳ, ಹೋರ್ತಿ, ಬಬಲಾದ, ಚವಡಿಹಾಳ, ಚೋರಗಿ, ಗ್ರಾಮಗಳು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
ಟ್ಯಾಂಕರ್ ಮೂಲಕ ನೀರು: ಪ್ರಸಕ್ತ ವರ್ಷ ತಾಲೂಕಿನ 14 ಗ್ರಾಮಗಳು, 43 ಟ್ಯಾಂಕರ್ಗಳ ಮೂಲಕ 129 ಟ್ರಿಪ್ ನೀರು ಪೂರೈಕೆ ಮಾಡಲಾಗುತ್ತಿದೆ ಆದರೂ ಜನರಿಗೆ ನೀರು ಸಾಲದಂತಾಗಿದೆ.
ಕಳೆದ ಬಾರಿ ಎರಡು ತಿಂಗಳುಗಳವರೆಗೆ ಪ್ರತೀ ದಿನ 73 ಗ್ರಾಮಳಿಗೆಗ 353 ಟ್ರಿಪ್ ನೀರು ಸರಬರಾಜು ಮಾಡಲಾಗಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಅದರ ಅರ್ಧದಷ್ಟು ಟ್ಯಾಂಕರ್ ಆರಂಭವಾಗಿಲ್ಲ. ಕಾರಣ ತಾಲೂಕಿನಲ್ಲಿನ 13 ಕೆರೆಗಳು ತುಂಬಿದ್ದರಿಂದ ಈ ಬಾರಿ ನೀರಿನ ಹಾಹಾಕಾರ ಕಡಿಮೆಯಾಗಿದೆ. ಇನ್ನುಳಿದ ಕೆರೆ ಭರ್ತಿಯಾದರೆ ಮುಂದಿನ ವರ್ಷ ಟ್ಯಾಂಕರ್ ಆರಂಭಿಸುವ ಅವಶ್ಯಕತೆ ಬರುವುದಿಲ್ಲ
ನಮ್ಮ ಗ್ರಾಮದಲ್ಲಿ ವಿಪರೀತ ನೀರಿನ ತೊಂದರೆಯಿದೆ ಗ್ರಾಪಂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಇನ್ನಷ್ಟು ಟ್ಯಾಂಕರ್ಗಳನ್ನು ಹೆಚ್ಚಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು .
ಪ್ರಕಾಶ ಕೋರಳ್ಳಿ ಮಾವಿನಹಳ್ಳಿ ಗ್ರಾಮ
ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ತೊಂದರೆ ಇದೆ. ನೀರಿನ ತೊಂದರೆ ಇದ್ದ ಗ್ರಾಮಗಳಿಗೆ
ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ ಸಂಖ್ಯೆ ಹೆಚ್ಚಿಸಲು ಪ್ರತಿ ದಿನ ಬೇಡಿಕೆ ಬರುತ್ತಿದೆ. ಸಮಸ್ಯೆ ಇದ್ದಲ್ಲಿ
ಟ್ಯಾಂಕರ್ಗಳ ಸಂಖ್ಯೆ ಹೆಚ್ಚಿಸಲು ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳಿಗೆ ತಿಳಿಸಲಾಗಿದೆ.
ಡಿ.ಎಂ. ಪಾಣಿ, ತಹಶೀಲ್ದಾರ್
ತಾಲೂಕಿನಲ್ಲಿ ಎಲ್ಲಿ ನೀರಿನ ಸಮಸ್ಯೆ ಇದೆಯೋ ಎಲ್ಲ ಕಡೆಗೂ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ತಾಲೂಕು ಆಡಳಿತಕ್ಕೆ ಕಟ್ಟುನಿಟ್ಟಿನಿಂದ ಸೂಚಿಸಲಾಗಿದೆ. ನೀರಿನ ಸಮಸ್ಯೆಗೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸದಿದ್ದರೆ ನನ್ನ ಗಮನಕ್ಕೆ ತರಬೇಕ.
ಯಶವಂತರಾಯಗೌಡ ಪಾಟೀಲ, ಶಾಸಕರು.
ಉಮೇಶ ಬಳಬಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ