ಲಾಭದಲ್ಲಿ ವಿಮುಲ್ಗೆ 2ನೇ ಸ್ಥಾನ

•ಕಳೆದ ಆರ್ಥಿಕ ವರ್ಷದಲ್ಲಿ 250 ಕೋಟಿ ವಹಿವಾಟು•2.92 ಕೋಟಿ ರೂ. ನಿವ್ವಳ ಲಾಭ

Team Udayavani, Jun 11, 2019, 10:01 AM IST

vp-tdy-1..

ವಿಜಯಪುರ: ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಕಚೇರಿ.

ವಿಜಯಪುರ : ಭೀಕರ ಬರದ ಮಧ್ಯೆಯೂ ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಒಕ್ಕೂಟ 2018-19ನೇ ಆರ್ಥಿಕ ವರ್ಷದಲ್ಲಿ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಾಭದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. 250.62 ಕೋಟಿ ರೂ. ವಹಿವಾಟು ನಡೆಸಿರುವ ವಿಮುಲ್, 27.07 ಕೋಟಿ ರೂ. ಲಾಭ ಹಾಗೂ 2.92 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಮುಲ್ ಒಕ್ಕೂಟದ ನಿರ್ದೇಶಕ ಶ್ರೀಶೈಲಗೌಡ ಪಾಟೀಲ ಮಾಹಿತಿ ನೀಡಿದರು.

ನಗರದ ಹೊರವಲಯದ ಭೂತನಾಳ ಬಳಿ ಇರುವ ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಒಕ್ಕೂಟ (ಕೆಎಂಎಫ್) ಆಡಳಿತ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ.14.5 ಹೆಚ್ಚು ವಹಿವಾಟು ಹೆಚ್ಚಾಗಿದೆ. ಬರದ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ದಾಖಲೆ ಮಾಡಿದ್ದು, ಐಎಸ್‌ಒ 22000 ಗುಣಮಟ್ಟದ ಪ್ರಮಾಣಪತ್ರ ಹೊಂದಿದೆ. ಏಪ್ರಿಲ್ನಿಂದಲೇ ಹಾಲು ಉತ್ಪಾದಕರ ಖಾತೆಗೆ ಸರ್ಕಾರದಿಂದ ನೇರವಾಗಿ ಅವರ ಖಾತೆಗೆ ಹಣ ಜಮೆಯಾಗುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಹಾಲು ಖರೀದಿ ದರದಲ್ಲಿ 1ರೂ. ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿ ಭೀಕರ ಬರ ಆವರಿಸಿರುವ ಕಾರಣ ಆವಳಿ ಜಿಲ್ಲೆಗಳ ಹಾಲು ಉತ್ಪಾದಕರನ್ನು ಆರ್ಥಿಕ ಸಬಲೀಕರಣ ಮಾಡುವುದಕ್ಕಾಗಿ 3ಕೋಟಿ ರೂ. ನೆರವು ನೀಡಲಾಗಿದೆ. ಪ್ರತಿ 50 ಕೆ.ಜಿ ಚೀಲ ಪಶು ಆಹಾರಕ್ಕೆ 100ರೂ. ರಿಯಾಯಿತಿ ನೀಡಲಾಗಿದೆ ಎಂದು ವಿವರಿಸಿದರು.

ಒಕ್ಕೂಟದ ವ್ಯಾಪ್ತಿಯಲ್ಲಿ 459 ಹಾಲು ಉತ್ಪಾದನೆ ಸಂಘಗಳಿದ್ದು, ಒಟ್ಟು 67,153 ಸದಸ್ಯರು ನಿತ್ಯವೂ ಹಾಲು ಪೂರೈಸುತ್ತಿದ್ದಾರೆ. 824 ಹಾಲು ವಿತರಕರಿದ್ದು, 16ಕ್ಷೀರ ಮಳಿಗೆ ಹೊಂದಿದೆ. 68 ನಂದಿನಿ ಪ್ರಾಂಚೈಸಿ ಹೊಂದಿದ್ದು, ಮಹಾರಾಷ್ಟ್ರದ ಸೋಲಾಪುರ, ಅಕ್ಕಲಕೋಟ, ಉಸ್ಮಾನಾಬಾದ್‌ ಹಾಗೂ ತೆಲಂಗಾಣದ ಹೈದ್ರಾಬಾದ್‌ ಮಾರುಕಟ್ಟೆಗೆ ಪ್ರತಿ ದಿನ 10 ಸಾವಿರ ಲೀ. ಹಾಲು ಮಾರಾಟ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಸದ್ಯ ನಮ್ಮ ಒಕ್ಕೂಟದ ವ್ಯಾಪ್ತಿಯಲ್ಲಿ ನಿತ್ಯವೂ 1.75ಲಕ್ಷ ಲೀಟರ್‌ ಹಾಲು ಉತ್ಪಾದಿಸುತ್ತಿದ್ದು, ಭವಿಷ್ಯದ 5 ವರ್ಷಗಳಲ್ಲಿ ವಿಮುಲ್ 3 ಲಕ್ಷ ಲೀಟರ್‌ ಹಾಲು ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ. ನಿತ್ಯ 64.7 ಸಾವಿರ ಲೀಟರ್‌ ಹಾಲು ಮಾರಾಟ ಮಾಡಲಾಗುತ್ತಿದೆ. 65 ಸಾವಿರ ಲೀಟರ್‌ ಬಲ್ಕ್ ಹಾಲು ಮಾರಾಟವಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ 65 ಸಾವಿರ ಲೀಟರ್‌ ಹಾಲು ನೀಡಲಾಗುತ್ತಿದೆ ಎಂದರು.

ಇದಲ್ಲದೇ ಪ್ರತಿ ತಿಂಗಳು 8 ಮೆಟ್ರಿಕ್‌ ಟನ್‌ ತುಪ್ಪ ಮಾರಾಟ ಮಾಡಲಾಗುತ್ತಿದೆ. 11ಮೆಟ್ರಿಕ್‌ ಟನ್‌ ನಂದಿನಿ ಉತ್ಪನ್ನಗಳಾದ ಪೇಡಾ, ಮಸಾಲಾ ಮಜ್ಜಿಗೆ, ಲಸ್ಸಿ, ಬೆಣ್ಣೆ, ಸುವಾಸಿತ ಹಾಲು, ಜಾಮೂನ್‌ ಮಿಕ್ಸ್‌, ಜಾಮೂನ್‌, ರಸಗುಲ್ಲಾ, ಪನ್ನೀರ್‌, ಧಾರವಾಡ ಪೇಡಾ, ಬೆಳಗಾವಿ ಕುಂದಾ, ಐಸ್‌ಕ್ರೀಂ, ಹಾಲಿನ ಪುಡಿ ಹಾಗೂ ಇತರ ಸಿಹಿ ಸೇರಿದಂತೆ 3 ಸಾವಿರ ಲೀ. ಹಾಲಿನಿಂದ ವಿವಿಧ ಉತ್ಪನ್ನಗಳ ತಯಾರಿಸಲಾಗುತ್ತದೆ. 8,091 ಕೆಜಿ ಮೊಸರು ಉತ್ಪಾದನೆಯೂ ಇದೆ ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ 1ಲಕ್ಷ ಲೀಟರ್‌ ಸಾಮರ್ಥ್ಯದ 22 ಕೋಟಿ ರೂ. ವೆಚ್ಚದಲ್ಲಿ ಡೇರಿ ನಿರ್ಮಾಣ ಯೋಜನೆ ರೂಪಿಸಲಾಗಿದ್ದು, 9.30 ಕೋಟಿ ರೂ. ವೆಚ್ಚದಲ್ಲಿ ಸಿವಿಲ್ ಕಾಮಗಾರಿ, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್ ಕಾಮಗಾರಿ, 40 ಲಕ್ಷ ರೂ. ವೆಚ್ಚದಲ್ಲಿ ಪ್ಯಾಂಕಿಂಗ್‌ ಯಂತ್ರ ಅಳವಡಿಕೆ ಮಾಡಲು ಯೋಜಿಸಲಾಗಿದೆ. ಇದಲ್ಲದೇ ಜಮಖಂಡಿಯಲ್ಲಿ 10 ಮೆಟ್ರಿಕ್‌ ಟನ್‌ ಸಾಮರ್ಥ್ಯದ 25 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಪುಡಿ ತಯಾರಿಕೆ ಘಟಕ ಸ್ಥಾಪನೆ, ವಿಜಯಪುರ ಡೇರಿಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರೆಫ್ರಿಜಿರೇಷನ್‌ ವ್ಯವಸ್ಥೆ ಬಲವರ್ಧನೆ ಮತ್ತು ಕೋಲ್ಡ್ ರೂಂ, 5 ಸಾವಿರ ಲೀ. ಸಾಮರ್ಥ್ಯದ ಐಸ್‌ಕ್ರಿಂ ತಯಾರಿಕೆ ಘಟಕ, ಪರಿಸರ ಸಂರಕ್ಷಣೆಗಾಗಿ 500 ಔಷಧೀಯ ಹಾಗೂ ಇತರ ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಘದ ನಿರ್ದೇಶಕರಾದ ಸಂಗಣ್ಣ ಹಂಡಿ, ಅಶ್ವಿ‌ನಿ ಹಳ್ಳೂರ, ಮಹಾದೇವಪ್ಪ ಹನಗಂಡಿ, ಸಿದ್ದಪ್ಪ ಕಡಪಟ್ಟಿ, ಸಂಜಯ ತಳೇವಾಡ, ಸಂಘದ ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.