ಹೊಳೆ ಬಬಲಾದಿ ಸ್ವಾಮೀಜಿ ವಾಣಿ ಅಪಾರ್ಥ ಮಾಡಿಕೊಂಡ ಭಕ್ತರು: ಮಠಕ್ಕೆ ಬಂದ ಸಾವಿರಾರು ಭಕ್ತರು


Team Udayavani, May 24, 2021, 6:04 PM IST

ಹೊಳೆ ಬಬಲಾದಿ ಸ್ವಾಮೀಜಿ ವಾಣಿ ಅಪಾರ್ಥ ಮಾಡಿಕೊಂಡ ಭಕ್ತರು: ಮಠಕ್ಕೆ ಬಂದ ಸಾವಿರಾರು ಭಕ್ತರು

ವಿಜಯಪುರ: ಜಿಲ್ಲೆಯ ಸ್ವಾಮೀಜಿಯೊಬ್ಬರು ಭಕ್ತರಿಗೆ ನೀಡಿದ ವಿಡಿಯೋ ಸಂದೇಶದ ಸಾರ ಅರಿಯದೇ ಅಪಾರ್ಥ ಮಾಡಿಕೊಂಡ ಭಕ್ತರು ಕೋವಿಡ್ ಕರ್ಫ್ಯೂ ಮೀರಿ ಸಾವಿರಾರು ಸಂಖ್ಯೆಯಲ್ಲಿ ಅಂಬಲಿ ನೈವೃದ್ಯ ಸಮರ್ಪಿಸಲು ಬಬಲಾದಿ ಮಠಕ್ಕೆ ಆಗಮಿಸಿದ ಘಟನೆ ಜರುಗಿದೆ.

ವಿಜಯಪುರ ಜಿಲ್ಲೆಯಲ್ಲಿ ಮದ್ಯದ ನೈವೇದ್ಯ ಜಾತ್ರೆ ನಡೆಯುವ ಮಠ ಎಂದೇ ಹೆಸರಾಗಿರುವ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಸದಾಶಿವ‌ ಮುತ್ಯಾನ ಮಠದ ಸಿದ್ಧರಾಮಯ್ಯ ಶ್ರೀಗಳು ಈ ಬಾರಿ ಕೋವಿಡ್ ಕರ್ಫ್ಯೂ ಮೀರಿ ಜನರು ಮನೆಯಿಂದ ಹೊರಗೆ ಬರಬೇಡಿ. ಬದಲಾಗಿ ಮನೆಯಲ್ಲೇ ಅಂಬಲಿ ನೈವೇದ್ಯ ಮಾಡಿ  ಮುತ್ಯಾನಿಗೆ ಸಮರ್ಪಿಸಿ ಎಂದು ಸಂದೇಶ ನೀಡಿದ್ದರು.

ಮದ್ಯದ ನೈವೇದ್ಯ ಬೇಡ ಬೇಡ ಎಂದು ಕಾರ್ಣಿಕ ಹೇಳಿದರೂ ಶ್ರೀಗಳ ಹೇಳಿಕೆಯನ್ನು ಅರ್ಥೈಸಿಕೊಳ್ಳುವಲ್ಲಿ ಎಡವಿದ ಭಕ್ತ ಸಮೂಹ,  ಕೋವಿಡ್ ಕರ್ಫ್ಯೂ ಮೀರಿ ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರು ಸೋಮವಾರ ಅಂಬಲಿ ನೈವೇದ್ಯ ಅರ್ಪಿಸಲು ಬಬಲಾದಿ ಮಠಕ್ಕೆ ಧಾವಿಸಿದ್ದು, ಪೊಲೀಸರು, ಮಠಕ್ಕೆ ಬಂದ ಭಕ್ತರನ್ನು ಮರಳಿ ಕಳಿಸುವಲ್ಲಿ ಹೆಣಗಾಡುವಂತೆ ಮಾಡಿದೆ.

ಹೊಳೆ ಬಬಲಾದಿ ಮಠದ ಸದಾಶಿವ ಮಠದ ಸಿದ್ಧರಾಮಯ್ಯ ಶ್ರೀಗಳು  ಎರಡು ವರ್ಷಗಳ ಹಿಂದೆ ಸದಾಶಿವ ಮಠದ ಕಾರ್ಣಿಕದ ಸಂದರ್ಭದಲ್ಲಿ  ವೈದ್ಯರಿಗೂ ಮದ್ದು ತಿಳಿಯದ  ರೋಗ ಜನರನ್ನು ಕಾಡಲಿದೆ ಎಂದು ಕಾರ್ಣಿಕ ಹೇಳಿದ್ದರು. ಭವಿಷ್ಯದ ದಿನಗಳಲ್ಲಿ ಔಷಧಿಯೇ ಸಿಗದ ಕೋವಿಡ್ ಸಾಂಕ್ರಾಮಿಕ ಸೋಂಕು ರೋಗ ಬಾಧಿಸಿತ್ತು. ಇದೀಗ ಕೋವಿಡ್ ಎರಡನೇ ಅಲೆ ಜೋರಾಗಿರುವ ಸಂದರ್ಭದಲ್ಲಿ ಸರ್ಕಾರ ರೋಗ ನಿಗ್ರಹಕ್ಕಾಗಿ ಕೋವಿಡ್ ಕರ್ಫ್ಯೂ ಜಾರಿಗೆ ತಂದಿದೆ. ಹೀಗಾಗಿ ಶ್ರೀಗಳು ಆತಂಕದಲ್ಲಿರುವ ಭಕ್ತರು ಈ ಬಾರಿ ರೋಗ ಇನ್ನೂ ಉಲ್ಬಣಗೊಂಡಿದೆ.  ನಿಯಂತ್ರಣಕ್ಕೆ ಪರಿಹಾರ ನೀಡಿ ಎಂದು ಹಲವು ಭಕ್ತರು ಮೊರೆ ಇಟ್ಟಿದ್ದರು.

ಹೀಗಾಗಿ ಬಬಲಾದಿ ಸಿದ್ದರಾಮಯ್ಯ  ಶ್ರೀಗಳು, ಸೋಮವಾರ ಭಕ್ತರು ಮದ್ಯಕ್ಕೆ ಬದಲಾಗಿ ಅಂಬಲಿ ನೈವೇದ್ಯ ಮಾಡಿ ಮನೆಯಲ್ಲೇ ಸಮರ್ಪಿಸಿ, ಎರಡು ಬೋಳು ಕಾಯಿ ಒಡೆಯಿರಿ. ಹುರಿದ, ಕರಿದ ಅಡುಗೆ ಮಾಡಬೇಡಿ ಹಾಗೂ ಮನೆಯಿಂದ ಹೊರಗೆ ಬರಬೇಡಿ. ಮನೆಯಲ್ಲೇ ನೆಮ್ಮದಿಯಾಗಿರಿ ಎಂದು ವಿಡಿಯೋ ಮೂಲಕ ಮೂಲಕ ಸಾತ್ವಿಕ ಸಂದೇಶ ನೀಡಿದ್ದರು.

ಆದರೆ ಸಿದ್ದರಾಮಯ್ಯ ಶ್ರೀಗಳ ಸಂದೇಶವನ್ನು ಅರ್ಥೈಸಿಕೊಳ್ಳುವಲ್ಲಿ ಎಡವಿದ ಭಕ್ತರು, ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಅಂಬಲಿ ನೈವೇದ್ಯ ಸಮೇತ ಗುಂಪು ಗುಂಪಾಗಿ ಶ್ರೀಮಠಕ್ಕೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಬಲೇಶ್ವರ ಪೊಲೀಸರು ಭಕ್ತರ ಮನವೊಲಿಸಿ ಮರಳಿ ಮನೆಗೆ ಕಳಿಸಲು ಹರಸಾಹಸ ಪಡುವಂತೆ ಮಾಡಿದೆ.

ಇದರಿಂದ ಮತ್ತೊಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಸಿದ್ಧರಾಮಯ್ಯ ಶ್ರೀಗಳು, ಭಕ್ತರು ಯಾರೂ ಕೋವಿಡ್ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬರಬೇಡಿ. ಮಠಕ್ಕೂ ಆಗಮಿಸಬೇಡಿ. ಕೋವಿಡ್ ಕರ್ಫ್ಯೂ ಉಲ್ಲಂಘಿಸದೇ ಮನೆಯಲ್ಲೇ ಪೂಜೆ ಮಾಡಿ, ನೈವೇದ್ಯ ಸಮರ್ಪಿಸಿ ಎಂದು ಸಂದೇಶ ನೀಡಿದ್ದಾರೆ.

ಇದನ್ನೂ ಓದಿ : ಜನ ಜಂಗುಳಿ ನಿಯಂತ್ರಿಸದೇ ಕೋವಿಡ್‌ ತಡೆ ಅಸಾಧ್ಯ

ಅಂಬಲಿ ಎಂದರೆ  ಜೋಳದ‌ ನುಚ್ವಿಗೆ ಮಜ್ಜಿಗೆ, ಬೆಳ್ಳುಳ್ಳಿ ‌ಬೆರೆಸಿದ ಗಂಜಿ ರೂಪದ ತೆಳುವಾದ ಆಹಾರವೇ ಅಂಬಲಿ.  ಈ‌ ಅಂಬಲಿ ಸೇವನೆ ಆರೋಗ್ಯ ವೃದ್ಧಿಗೆ ಸಹಕಾರಿ ಎಂಬ ಕಾರಣಕ್ಕೆ ಶ್ರೀಗಳು ಅಂಬಲಿ ಸಂದೇಶ ನೀಡಿದ್ದರು.

ಕೋವಿಡ್ ಸಂಕಷ್ಟ ಕಾಲದಲ್ಲಿ ಮನೆಯಲ್ಲಿಯೇ ಇರಿ ಎಂದು ಹಾಗೂ ಪೌಷ್ಠಿಕ ಆಹಾರವಾದ ಅಂಬಲಿ ತಯಾರಿಸಿ ನೈವೇದ್ಯ ಮಾಡಿ ಕುಡಿಯಿರಿ ಎಂದು ನೀಡಿದ ಸಂದೇಶ ಮುಗ್ದ ಭಕ್ತರು ಅರ್ಥೈಸುವಿಕೆಯಲ್ಲಿ  ಮಾಡಿಕೊಂಡ ಗೊಂದಲ ಶ್ರೀಗಳನ್ನು, ಪೊಲೀಸರನ್ನು ಹೈರಾಣು ಮಾಡಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.