ಕನ್ನೂರ ಗ್ರಾಮದಲ್ಲಿ ಕೋವಿಡ್ ನಿಯಮ ಮೀರಿ ಬಡಿಗೆ ಜಾತ್ರೆ ಆಚರಣೆ
Team Udayavani, Jun 6, 2021, 2:41 PM IST
ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆಗಳ ನಿರ್ಬಂಧದ ಮಧ್ಯೆಯೂ ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ ನೂರಾರು ಜನರು ಮೂರು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರೆ ಆಚರಣೆ ಮಾಡಿದ್ದಾಗಿ ವರದಿಯಾಗಿದೆ.
ಕನ್ನೂರು ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ರೇವಣ್ಣಸಿದ್ಧೇಶ್ವರ ಜಾತ್ರೆ ಆಚರಿಸಲಾಗಿತ್ತದೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜಾತ್ರೆ ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ನಿರ್ಬಂಧದ ಮಧ್ಯೆಯೂ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆಯನ್ನು ಮುಗ್ಗಿಸುವುವುದು (ರದ್ದು) ಬೇಡ, ಇದರಿಂದ ಭವಿಷ್ಯದಲ್ಲಿ ಊರಿಗೆ ಕೇಡಾಗಲಿದೆ. ಹೀಗಾಗಿ ಕದ್ದುಮುಚ್ಚಿ ಜಾತ್ರೆ ಮಾಡಲು ಮುಂದಾಗಿ ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ್ದಾರೆ.
ಇದನ್ನೂ ಓದಿ: ಯಾರೋ ದೆಹಲಿಗೆ ಹೋದ್ರೆ ಅದಕ್ಕೆ ನಾನು ಉತ್ತರ ಕೊಡುವುದಕ್ಕೆ ಆಗಲ್ಲ : ಬಿ ಸಿ ಪಾಟೀಲ್
ಭಾನುವಾರ ನಸುಕಿನಲ್ಲಿ ಬಡಿಗೆ ಜಾತ್ರೆ ಆಚರಣೆ ಮಾಡಿದ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ಜಾತ್ರೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಜಾತ್ರೆ ನಡೆಯುವ ವಿಷಯ ತಿಳಿದರೂ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ