ಮೂಢನಂಬಿಕೆ ಕಿತ್ತೂಗೆಯಲು ಬದುಕು ಸವೆಸಿದ ವೀರೇಶ್ವರರು


Team Udayavani, Feb 19, 2019, 9:56 AM IST

vij-2.jpg

ನಾಲತವಾಡ: ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೂಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವತೆ, ಸಹಕಾರ, ಜಾತಿ ಭೇದ ಭಾವಗಳನ್ನು ತೊಲಗಿಸಿ ಪ್ರಾಣಿ ಬಲಿಗೆ ಕಡಿವಾಣ ಹಾಕುವಲ್ಲಿ ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಅವಿರತವಾಗಿ ಶ್ರಮಿಸಿದ ನಾಲತವಾಡದ ಶರಣ ವೀರೇಶ್ವರರು ದೇಹ ತೊರೆಯುವವರೆಗೂ ಸಂಕಷ್ಟದ ಬದುಕನ್ನೇ ನಡೆಸಿದವರು. ಬರದ ನಾಡು, ಸಂತ ಶರಣ ಬೀಡು ಎಂಬ ಖ್ಯಾತಿ ಪಡೆದ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಂದಿನ ಲಿಲಾವತಿ ಪಟ್ಟಣ ಎಂದು ಕರೆಸಿಕೊಂಡ ಗ್ರಾಮವು ವೀರೇಶ್ವರರ ಸುಮಾರು 40 ಪವಾಡಗಳಿಂದ ನಲವತ್ತವಾಡ ಎಂದು ಕರೆಸಿಕೊಂಡಿತು.

ಕಂಠಿಮಠದ ದೊಡ್ಡಾರ್ಯ ಹಾಗೂ ರುದ್ರಾಂಬೆ ತಾಯಿಯವರ ಉದರಲ್ಲಿ 1848ರಲ್ಲಿ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಜನಿಸಿದರು. ಪಟ್ಟಣದ ಹಿರೇಮಠದ ರಾಮಗಿರಿ ನಾಥರನ್ನು ವೀರೇಶ್ವರರು ಗುರುವಾಗಿ ಸ್ವೀಕರಿಸಿ, ಚಿಕ್ಕಂದಿನಿಂದಲೇ ಮನೆ ಸಂಸ್ಕಾರದಂತೆ ಗುರುಸೇವೆ
ಲಿಂಗಪೂಜೆ ಜಂಗಮ ಪೂಜೆಯೊಂದಿಗೆ ಅಂದಿನ ಮುಲ್ಕಿ ಪರೀಕ್ಷೆ ಪಾಸಾದರು. ನಂತರ ಪಕ್ಕದ ಸಿದ್ದಾಪುರ ಗ್ರಾಮದ ಗಾಂವಠಿ ಶಾಲೆಯಲ್ಲಿ ದುಡಿಯುತ್ತ ಬಿದರಕುಂದಿಯ ಗುರುದೇವಿ ತಾಯಿಯವರನ್ನು ಮದುವೆಯಾದರು. ನಂತರ ವೃತ್ತಿ ಬಿಟ್ಟ ಶರಣರು, ಭಿಕ್ಷಾಟನೆ ಮೂಲಕ ದಿನಕ್ಕೆ 5 ಮನೆಗಳಿಗೆ
ಹೋಗಿ ಭಿಕ್ಷೆ ಮಾಡುವ ಕಾಯಕ ಶುರು ಮಾಡಿ, ಬೇಕು ಬೇಡ ಎಂಬಂತೆ ಜಂಗಮಗೆ ಬದುಕು ನಡೆಸಿದರು. ಬದುಕಿನಲ್ಲಿ ಹೆಚ್ಚಿದ ಸಂಕಷ್ಟಗಳಿಗೆ ನೊಂದ ಶರಣರು, ಸಂಸಾರದ ಸುಗಮಕ್ಕೆ ನೇಗಿಲು ಹಿಡಿದರು.

ಸಂಸಾರದ ನಡೆಸುತ್ತಲೇ ಗ್ರಾಮದಲ್ಲಿ ಪ್ಲೇಗ್‌ ರೋಗ ಹರಡಿದ್ದ ವೇಳೆ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವತೆಗೆ ಕೋಣ ಬಲಿಗೆ ಮುಂದಾಗಿದ್ದರು. ಇದನ್ನರಿತ ಶರಣ ವೀರೇಶ್ವರರು, ಕೋಣ ಬಲಿ ತಡೆಗೆ ಯತ್ನಿಸಿದರು. ಆದರೆ ಅದು ಫಲ ನೀಡದ ಕಾರಣ ಮನನೊಂದು ಪತ್ನಿಯೊಂದಿಗೆ ಗ್ರಾಮವನ್ನು ತೊರೆದು ಸೊಲ್ಲಾಪುರಕ್ಕೆ ಹೋದರು. ಅಲ್ಲಿಯೂ ಸಹ ಜನರಿಂದ ಅನೇಕ ಬಾರಿ ಹೊಡೆತಗಳಿಂದ ಸಂಕಷ್ಟಕ್ಕಿಡಾದರು. ಅಪಮಾನ ನಿಂದನೆಗೆ
ಒಳಗಾದ ಇವರು ಅಲ್ಲಿಯ ವಾರದ ಮಲ್ಲಪ್ಪ ಎಂಬುವರಿಗೆ ಸಂತಾನ ಭಾಗ್ಯ ನೀಡುವುದರ ಮೂಲಕ ಪವಾಡ ಮಾಡಿದರು.

ನಂತರ ಕೊಡೆಕಲ್‌ ಗ್ರಾಮದ ಶಿವಯೋಗಿಗಳ ಅಪ್ಪಣೆಯಂತೆ ಪತ್ನಿ ಸಂಗ ತೊರೆದು ಪರಮಾರ್ಥ ಜೀವನ ಪ್ರಾರಂಭಿಸಿದರು. ಇಡೀ ಜೀವನವನ್ನೇ ಸಮಾಜದ ತಿದ್ದುಪಡಿಗಾಗಿ, ಮೂಢನಂಬಿಕೆ ತಡೆಯುವಲ್ಲಿ ನಿರತರಾದ ಶರಣರು 1920ರಲ್ಲಿ ದೇಹ ತೊರೆಯುವ ಮುನ್ನ ಹಾನಗಲ್ಲ ಕುಮಾರ ಸ್ವಾಮಿಗಳ ದರ್ಶನಕ್ಕೆ ಆಸೆ ಹೊಂದಿದರು. ವಿಷಯ ತಿಳಿದ ಹಾನಗಲ್‌ ಶ್ರೀಗಳು ಎಂದೂ ವಾಹನಗಳಲ್ಲಿ ಪ್ರಯಾಣ ಮಾಡದ ಅವರು ವೀರೇಶ್ವರರನ್ನು
ಕಾಣಲು ರೈಲ್ವೆ ಮೂಲಕ ಬಂದು ವೀರೇಶ್ವರರನ್ನು ಕಂಡರು. ನಂತರ 72 ವರ್ಷಗಳ ಸಾರ್ಥಕ ಬದುಕನ್ನು ಮುಗಿಸಿದ ವೀರೇಶ್ವರ ಶರಣರು ಇಂದಿಗೂ ಸಹ ಹೊರ ರಾಜ್ಯ ಮಹಾರಷ್ಟ್ರದಲ್ಲೂ ಸಹ ಅಲ್ಲಿನ ಜನರು ಇವರನ್ನು ಆರಾಧಿಸುತ್ತಿದ್ದಾರೆ.

ಪಟ್ಟಣದಲ್ಲಿರುವ ಶರಣ ದಂಪತಿಗಳ ದೇವಸ್ಥಾನವನ್ನು ಹಿರಿಯರ ಸಹಾಯದಿಂದ ಹಾಗೂ ವೀರೇಶ್ವರರ ಮಹಾಮನೆಯನ್ನು ಅದ್ಭುತ ರೀತಿಯಲ್ಲಿ ನಿರ್ಮಿಸಲಾಗಿದೆ. ಶರಣರ ದೇವಸ್ಥಾನದ ಗೋಪುರವು ಅನುಭವ ಮಂಟಪದಲ್ಲಿ 120ಕ್ಕೂ ಹೆಚ್ಚು ಶರಣರ ಮೂರ್ತಿಗಳನ್ನು ಕೆತ್ತಲಾಗಿದೆ. ವಿವಿಧ
ದಾರ್ಶನಿಕ ಶರಣ ಮೂರ್ತಿಗಳಿಂದ ನಿರ್ಮಾಣಗೊಂಡ ಮಹಾಮನೆ ನೋಡಲು ಜಿಲ್ಲೆ ಸೇರಿದಂತೆ ಹೊರ ರಾಜ್ಯದಿಂದ ಭಕ್ತರು ಆಗಮಿಸುತ್ತಿರವುದಕ್ಕೆ ನಿಜಕ್ಕೂ ಶರಣರ 40 ಪವಾಡಗಳೇ ಕಾರಣ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.