ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಪಟ್ಟಿ ಪಡೆಯಿರಿ
Team Udayavani, Jun 18, 2021, 9:12 PM IST
ವಿಜಯಪುರ: ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಗ್ರಾಪಂಗೆ ಭೇಟಿ ನೀಡಿ ಶಾಲೆಗೆ ದಾಖಲಾಗಲು ಅರ್ಹ ವಿದ್ಯಾರ್ಥಿಗಳ ಪಟ್ಟಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ನಿರ್ದೇಶಕ ರಘುವೀರ ಸೂಚಿಸಿದರು.
ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಶೈಕ್ಷಣಿಕ ಚಟುವಟಿಕೆ ನಿರ್ವಹಣೆ ಕುರಿತು ಜಿಲ್ಲೆಯ ಎಲ್ಲ ಶಿಕ್ಷಣಾಧಿ ಕಾರಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ನಿರ್ದೇಶನ ನೀಡಿದ ಅವರು, ಮಕ್ಕಳ ಪಟ್ಟಿಯನ್ನು ಶಾಲಾ ಸಂದರ್ಶನ ನೀಡಿದ ಅಧಿ ಕಾರಿಗಳಿಗೆ ತೋರಿಸಬೇಕು ಎಂದು ಸೂಚಿಸಿದರು. ಶಿಕ್ಷಣ ಇಲಾಖೆ ಆಯುಕ್ತರು ಈಗಾಗಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಿದ್ದು, ಅದನ್ನು ಪ್ರತಿಯೊಬ್ಬ ಶಿಕ್ಷಕರು ಪಾಲಿಸಬೇಕು.
ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣಕ್ಕಾಗಿ ವ್ಯಾಪಕ ಪ್ರಸಾರ ಮಾಡುವುದು ಈ ನಿಟ್ಟಿನಲ್ಲಿ ಬಿಇಒ, ಡೈಟ್ ಉಪನ್ಯಾಸಕರು ಹಾಗೂ ಬಿಆರ್ಸಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು. ಸರ್ಕಾರ ಶಾಲಾ ದಾಖಲಾತಿ ಮತ್ತು ಶಾಲಾ ಆರಂಭೋತ್ಸವ ಕುರಿತು ಮಾಹಿತಿ ಒದಗಿಸಿದ್ದು ಇದನ್ನು ಪ್ರತಿಯೊಬ್ಬ ಮುಖ್ಯ ಗುರುಗಳು ಅದರನ್ವಯ ಅನುಸರಿಸಿ ದಾಖಲಾತಿ ಪ್ರಕ್ರಿಯೆ ಮಾಡಿಕೊಳ್ಳಬೇಕು.
ದಾಖಲಾತಿ ಮತ್ತು ಶಾಲೆ ಆರಂಭದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ನೇರ ಹಾಗೂ ಆನ್ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ಪೂರ್ವ ತಯಾರಿಯನ್ನು ಶಾಲಾ ಹಂತದಲ್ಲಿ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್ ಹಕ್ಕನ್ನು ಖರೀದಿಸಿದ ನೆಟ್ಫ್ಲಿಕ್ಸ್
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ