ವಿಜಯಪುರ: ಅನಾಮಧೇಯನಿಂದ ನಗರದ ಮತದಾರರ ಮಾಹಿತಿ ಸಂಗ್ರಹ


Team Udayavani, Nov 30, 2022, 7:30 PM IST

ವಿಜಯಪುರ: ಅನಾಮಧೇಯನಿಂದ ನಗರದ ಮತದಾರರ ಮಾಹಿತಿ ಸಂಗ್ರಹ

ವಿಜಯಪುರ: ರಾಜ್ಯದಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಹಾಗೂ ಮತದಾರರ ಪಟ್ಟಿ ರೂಪಿಸುವಲ್ಲಿ ಅಕ್ರಮ ನಡೆದ ಹಗರಣ ಹಸಿರಾಗಿರುವ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಅಂಥದ್ದೇ ತಾಜಾ ಪ್ರಕರಣ ಬೆಳಕಿಗೆ ಬಂದಿದೆ.

ವಿಜಯಪುರ ನಗರದ ವಾರ್ಡ್ ನಂ. 30 ರಲ್ಲಿ ಬುಧವಾರ ಮಧ್ಯಾಹ್ನ ಮತದಾರರ ಪಟ್ಟಿಯೊಂದಿಗೆ ಮತದಾರ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದ ವ್ಯಕ್ತಿ ತನ್ನನ್ನು ತಾನು ಬಿಎಲ್‍ಎ ಎಂದು ಹೇಳಿಕೊಂಡಿದ್ದು, ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ಎಂದು ಕಾಂಗ್ರೆಸ್ ಮುಖಂಡರು ಆತನನ್ನು ಕೂಡಿಹಾಕಿದ್ದರು.

ಯುವಕನ ವರ್ತನೆಯಿಂದ ಅನುಮಾನಗೊಂಡ ಪ್ರಶ್ನಿಸಿದಾಗ ಸೂಕ್ತ ಉತ್ತರ ನೀಡುವಲ್ಲಿ ವಿಫಲನಾಗಿದ್ದಾನೆ. ಸದರಿ ಯುವಕ ತನ್ನನ್ನು ಮಹಾಂತೇಶ ಎಂದೂ, ಖಾಸಗಿ ಸಂಸ್ಥೆಯ ನೌಕರನೆಂದೂ ಹೇಳಿಕೊಂಡಿದ್ದಾನೆ.  ಕೂಡಲೇ ವಿಜಯಪುರ ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಬ್ದುಲ್ ಹಮೀದ್ ಮುಶ್ರೀಫ್ ಬೆಂಬಲಿಗರು ಯುವಕನನ್ನು ಹಾಗೂ ಆತನಲ್ಲಿದ್ದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇದರ ಬೆನ್ನಲ್ಲೇ ಆತಂಕಗೊಂಡ ಯುವಕ ಸ್ಥಳೀಯ ಶಾಸಕರ ಆಪ್ತ ಎಂಬ ವ್ಯಕ್ತಿ ಜೊತೆ ಮೊಬೈಲ್‍ನಲ್ಲಿ ಮಾತನಾಡಿ, ತನ್ನನ್ನು ಕೂಡಿ ಹಾಕಿರುವ ವಿಷಯ ತಿಳಿಸಿದ್ದಾನೆ. ಹೀಗಾಗಿ ಸದರಿ ಮತದಾರರ ಖಾಸಗಿ ಮಾಹಿತಿ ಸಂಗ್ರಹದ ಅಕ್ರಮ ಪ್ರಕರಣದಲ್ಲಿ ಸ್ಥಳೀಯ ಶಾಸಕರ ಕೈವಾಡ ಇದೆ ಎಂದು ಮುಶ್ರೀಫ್ ಆಪ್ತ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇರ್ಫಾನ್ ಶೇಖ್ ದೂರಿದ್ದಾರೆ.

ವಿಜಯಪುರ ನಗರ ವಿಧಾನಸಭೆ ಮುಸ್ಲಿಂ ಸಮುದಾಯದ ಹೆಚ್ಚಿರುವ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಿಂದ ರದ್ದು ಮಾಡುವ, ಇಲ್ಲವೇ ನಗರ ಕ್ಷೆತ್ರದ ಕೆಲಭಾಗವನ್ನು ಹೊಂದಿರುವ ನಾಗಠಾಣಾ ಮೀಸಲು ಕ್ಷೇತ್ರ ವ್ಯಾಪ್ತಿಯ ವಾರ್ಡ್‍ಗಳಿಗೆ ಮತದಾರರನ್ನು ವರ್ಗಾಯಿಸಲು ಇಂಥ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅಬ್ದುಲ್ ಹಮೀದ್ ಮುಶ್ರೀಫ್ ಆರೋಪಿಸಿದ್ದಾರೆ.

ಬಳಿಕ ತಹಸೀಲ್ದಾರರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಲ್ಲದೇ, ತಮ್ಮ ವಶದಲ್ಲಿದ್ದ ಯುವಕನನ್ನು ತಹಸೀಲ್ದಾರ ಸಿದ್ಧರಾಯ ಭೋಸಗಿ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ತಮ್ಮ ವಶಕ್ಕೆ ಪಡೆದ ತಹಸೀಲ್ದಾರರು, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಬಿಎಲ್‍ಒ ಜೊತೆ ಸಂರ್ಪ ಸಾಧಿಸಲು ರಾಜಕೀಯ ಪಕ್ಷಗಳ ಏಜೆಂಟರನ್ನು ನೇಮಿಸಲು ಅವಕಾಶ ಇರುತ್ತದೆ. ಈ ಪ್ರಕರಣದಲ್ಲಿ ಅದೇ ಆಗಿರುವ ಸಾಧ್ಯತೆ ಇದೆ. ಯಾವುದಕ್ಕೂ ವಿಚಾರಣೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿದ್ಧರಾಯ ಭೋಸಗಿ ಸ್ಥಳದಲ್ಲಿದ್ದವರಿಗೆ ಹೇಳಿದರು.

ಆದರೆ ಸದರಿ ಬೆಳವಣಿಗೆ ಕುರಿತು ಜಿಲ್ಲಾಡಳಿತ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.