ಕಾಂಗ್ರೆಸ್‌ ವಿರುದ್ಧ ಜಿಗಜಿಣಗಿ ವಾಗ್ಧಾಳಿ


Team Udayavani, Mar 8, 2018, 3:45 PM IST

vij-2.jpg

ಇಂಡಿ: ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮಾನ-ಮರ್ಯಾದೆ ಇದೆ ಏನ್ರೀ? ಅದು ಸರ್ಕಾರ ಏನ್ರಿ? ರಾಜ್ಯದಲ್ಲಿ ಹಿಂದೂ ಯುವಕರ ಕೊಲೆ ನಡೆದಿವೆ. ಅಲ್ಪ ಸಂಖ್ಯಾತರ ಕೊಲೆ ಮಾಡಿ ಬಿಜೆಪಿ ತಲೆಗೆ ಕೊಲೆ ಪಟ್ಟ ಕಟ್ಟುವ ಪ್ರಯತ್ನ ಸರ್ಕಾರ
ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್‌ ಪಕ್ಷ ಮೂರನೇ ಸ್ಥಾನಕ್ಕೆ ಹೋಗಲಿದೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.

ಪಟ್ಟಣದ ಆಮಂತ್ರಣ ಹೊಟೇಲ್‌ ಹಿಂಭಾಗದಲ್ಲಿ ಬಿಜೆಪಿ ಇಂಡಿ ಮಂಡಲ ವತಿಯಿಂದ ಹಮ್ಮಿಕೊಂಡ ನವ ಕರ್ನಾಟಕ ನಿರ್ಮಾಣಕ್ಕಾಗಿ ನವಶಕ್ತಿ ಸಮಾವೇಶ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾಲುವೆ ನಿರ್ಮಾಣ ಮಾಡಲಾಗಿದೆ. ಆದರೆ ರೈತರ ಜಮೀನಿಗೆ ಬೆಲೆ ಕಟ್ಟದೆ ಅವರ ತೋಟದಲ್ಲಿ ಕಾಲುವೆ ಮಾಡಿದ್ದಾರೆ. ಆ ಕಾಲುವೆಗಳಲ್ಲಿ ನೀರೂ ಹರಿಸಿಲ್ಲ ಎಂದು ಆರೋಪಿಸಿದ ಅವರು, ವಿಜಯಪುರ ನಗರದಲ್ಲಿ 4 ಓವರ್‌ ಬ್ರಿಡ್ಜ್ ನಿರ್ಮಾಣ ಮಾಡಿಸಿದ್ದೇನೆ. ಇಂಡಿಯಲ್ಲಿ ಒಂದು ಓವರ್‌ ಬ್ರಿಡ್ಜ್ ನಿರ್ಮಾಣ, ಶಿರಾಡೋಣ ಲಿಂಗಸೂರು ರಸ್ತೆ ಮೇಲ್ದರ್ಜೆಗೇರಿಸಲಾಗಿದೆ.  ವಿಜಯಪುರ-ಸೊಲ್ಲಾಪುರ, ವಿಜಯಪುರ-ಸಂಕೇಶ್ವರ ಸೇರಿದಂತೆ ರಸ್ತೆ ನಿರ್ಮಾಣಕ್ಕೆ 2000 ಕೋಟಿ ಅನುದಾನ ನೀಡಲಾಗಿದೆ ಎಂದರು. 

ಡಾ| ಬಿ.ಆರ್‌. ಅಂಬೇಡ್ಕರ್‌ ಅವರಿಗೆ ಮೋಸ ಮಾಡಿದ ಪಕ್ಷ ಕಾಂಗ್ರೆಸ್‌ ಪಕ್ಷ ದಲಿತರ್ಯಾರೂ ಕಾಂಗ್ರೆಸ್‌ ಗೆ ಮತ ನೀಡಬೇಡಿ. ಇಂದು ಮೋದಿಯವರು ಡಾ| ಅಂಬೇಡ್ಕರ್‌ ನೆಲೆಸಿದ್ದ ಮನೆಯನ್ನು ಪ್ರವಾಸಿ ತಾಣವಾನ್ನಾಗಿ ಮಾಡಿದ್ದಾರೆ. ಅಲ್ಲಿ ಉತ್ತಮ ಗ್ರಂಥಾಲಯ ನಿರ್ಮಿಸಿದ್ದಾರೆ. ಮೋದಿಯವರಿಗೆ ಎಲ್ಲ ದಲಿತರೂ ಬೆಂಬಲಿಸಬೇಕು ಎಂದರು. 

ನನ್ನ ಹತ್ತಿರ ಟಿಕೆಟ್‌ ಕೇಳಲು ಯಾರೂ ಬರಬಾರದು, ನನ್ನ ಕೈಯಲ್ಲಿ ಟಿಕೆಟ್‌ ನೀಡುವ ಶಕ್ತಿ ಇಲ್ಲ. ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ನರೇಂದ್ರ ಮೋದಿಯವರೆ ಟಿಕೆಟ್‌ ನೀಡಲಿದ್ದಾರೆ. ಮುಂದೆ ನನಗೂ ಟಿಕೆಟ್‌ ಇದೆಯೋ ಇಲ್ಲವೋ ಗೊತ್ತಿಲ್ಲ.
ದಯಮಾಡಿ ಯಾರೂ ಟಿಕೆಟ್‌ಗಾಗಿ ನನ್ನ ಹತ್ತಿರ ಬರಬಾರದು ಎಂದು ಟಿಕೆಟ್‌ ಆಕಾಂಕ್ಷಿಗಳಿಗೆ ಶಾಕ್‌ ನೀಡಿದರು.

ಅಥಣಿ ಶಾಸಕ ಲಕ್ಷ್ಮಣ ಸವದಿ, ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕರುಗಳಾದ ರವಿಕಾಂಂತ ಪಾಟೀಲ, ಸಾರ್ವಭೌಮ ಬಗಲಿ, ಅಶೋಕ ಅಲ್ಲಾಪೂರೆ, ಪ್ರಕಾಶ ಅಕ್ಕಲಕೋಟ, ಕಾಸುಗೌಡ ಬಿರಾದಾರ, ಸಂಗ್ರಾಜ ದೇಸಾಯಿ, ಶ್ರೀಶೈಲಗೌಡ ಬಿರಾದಾರ, ಮುತ್ತು ದೇಸಾಯಿ, ದಯಾಸಾಗರ ಪಾಟೀಲ, ಪ್ರಭಾವತಿ ಪಾಟೀಲ, ಪಂಚಪ್ಪ ಕಲಬುರ್ಗಿ, ರವಿಕಾಂತ ಬಗಲಿ, ಜಿ.ಎಸ್‌. ಭಂಕೂರ, ಸಿದ್ದಲಿಂಗ ಹಂಜಗಿ, ಪಾಪು ಕಿತ್ತಲಿ, ಶೀಲವಂತ ಉಮರಾಣಿ, ಮಲ್ಲಯ್ಯ ಪತ್ರಿಮಠ, ಮಂಜುನಾಥ ವಂದಾಲ, ರವಿ ಖಾನಾಪುರ, ಹೇಮಂತ ಟೆಂಗಳೆ, ಪ್ರದೀಪ ದೇಶಪಾಂಡೆ, ವಿರಾಜ ಪಾಟೀಲ, ಬಿ.ಎಸ್‌. ಪಾಟೀಲ, ಶ್ರೀಕಾಂತ ದೇವರ, ಭೌರಮ್ಮ ಮುಳಜಿ, ಸುನಂದಾ ವಾಲೀಕಾರ, ಪ್ರಭಾವತಿ ಪಾಟಿಲ, ಅಣ್ಣಪ್ಪ ಖೈನೂರ, ಸುಶೀಲ ಪತ್ತಾರ, ಹನುಮಂತ್ರಾಯಗೌಡ ಪಾಟಿಲ, ಭೀಮನಗೌಡ ಪಾಟೀಲ, ಪುಟ್ಟಣಗೌಡ ಪಾಟೀಲ, ಜಗುಗೌಡ ಬಿರಾದಾರ, ಗೌಡಪ್ಪಗೌಡ ಬಿರಾದಾರ ಇದ್ದರು.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.