ಮುಖ್ಯ ನಾಲೆಗೆ ಇಂದಿನಿಂದ ನೀರು

•ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳಿಗೆ ಅನುಕೂಲ: ಎಂ.ಬಿ. ಪಾಟೀಲ

Team Udayavani, May 14, 2019, 5:01 PM IST

bijapur-tdy-1..

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆ ವಿಜಯಪುರ ಮುಖ್ಯ ಕಾಲುವೆಯಿಂದ ಬುಧವಾರದಿಂದ ನೀರು ಹರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ನೀರಿನ ತೀವ್ರ ಅಭಾವ ಇರುದರಿಂದಾಗಿ ವಾರಾಬಂದಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ನೀರು ಹರಿಸಲಾಗುತ್ತಿದೆ. ಹೀಗಾಗಿ ರೈತರು ಸಹಕರಿಸಬೇಕು ಎಂದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಚಿಂಚೋಳಿ ಉಪ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ವಿಜಯಪುರ ಮುಖ್ಯ ಕಾಲುವೆಗೆ ನೀರು ಹರಿಸಲು ವಿನಂತಿಸಿ, ವಿವಿಧ ಗ್ರಾಮಗಳ ರೈತರ ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ವಿಜಯಪುರ ಮುಖ್ಯ ಕಾಲುವೆಯ ಕೂಡಗಿ ಹತ್ತಿರದ ರೈಲ್ವೆ ಲೈನ್‌ ಪಾಸಿಂಗ್‌ ಕಾಮಗಾರಿ ತಾಂತ್ರಿಕ ತೊಂದರೆಯಿಂದ ವಿಳಂಬದಿಂದ ಸಾಗಿದೆ. ಈಗಾಗಲೇ ಗುತ್ತಿಗೆ ಅವಧಿ 18 ತಿಂಗಳು ಪೂರ್ಣಗೊಂಡು, ವಿಸ್ತರಣೆಯ 6 ತಿಂಗಳು ಹೆಚ್ಚವರಿ ಅವಧಿ ಮುಗಿದಿದ್ದರೂ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಚಲಿಸುವ ರೈಲ್ವೆ ಲೈನ್‌ಗಳ ಕೆಳ ಭಾಗದಲ್ಲಿಯೇ ಬೃಹತ್‌ ಕಾಮಗಾರಿ ನಡೆಯುತ್ತಿರುವದು ವಿಳಂಬಕ್ಕೆ ಪ್ರಮುಖ ಕಾರಣ. ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಇಲಾಖೆಯವರು ಒಪ್ಪ್ಪುತ್ತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ತಾತ್ಕಾಲಿಕ ಪುಸ್ಸಿಂಗ್‌ ಕಾಮಗಾರಿ ಮೂಲಕ ನೀರು ಹರಿಸಲು ಸೂಚಿಸಲಾಗಿದ್ದು, ಇದಕ್ಕಾಗಿ 60 ಲಕ್ಷ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.

93 ಕ್ಯೂಮೆಕ್ಸ್‌ ನೀರು ಹರಿಸುವ ಸಾಮರ್ಥಯ ಹೊಂದಿರುವ ವಿಜಯಪುರ ಮುಖ್ಯ ಕಾಲುವೆಯಲ್ಲಿ ತಾತ್ಕಾಲಿಕ ಪೈಪ್‌ ಪುಸ್ಸಿಂಗ್‌ನಿಂದ 22 ಕ್ಯೂಮೆಕ್ಸ್‌ ನೀರು ಮಾತ್ರ ಹರಿಯಲಿದ್ದು, ವಿಜಯಪುರ ಮುಖ್ಯ ಕಾಲುವೆಯಲ್ಲಿ 136 ಕಿ.ಮೀ. ಜಾಲವಾದವರೆಗೆ ನೀರು ಹರಿಸಸಲಾಗುತ್ತದೆ. ಅಲ್ಲಿಂದ ಕಗ್ಗೋಡ, ಕುಮಟಗಿ, ಪಡಗಾನೂರ, ದೇವರಹಿಪ್ಪರಗಿ, ಮಣೂರ, ಮಾರ್ಕಬ್ಬಿನಹಳ್ಳಿ, ಬೊಮ್ಮನಜೋಗಿ ಕೆರೆಗಳನ್ನು ತುಂಬಿಸಲಾಗುತ್ತದೆ. ಹೂವಿನಹಿಪ್ಪರಗಿ ಶಾಖಾ ಕಾಲುವೆಯಿಂದ 40 ಕಿ.ಮೀ.ವರೆಗೆ ನೀರು ಹರಿಸಿ ನಾಗವಾಡ, ಮಣೂರ, ಮುಕರ್ತಿಹಾಳ, ಅಲಕೊಪ್ಪರ, ರೂಡಗಿ ಕೆರೆಗಳನ್ನು ತುಂಬಿಸಲಾಗುತ್ತದೆ.

ಅಲ್ಲಿಂದ ಮುಂದೆ ಬಸವನಬಾಗೇವಾಡಿ ಶಾಖಾ ಕಾಲುವೆಯಿಂದ 40 ಕಿ.ಮೀ. ನೀರು ಹರಿಸಿ ಡೋಣುರ, ಬಿಸನಾಳ, ರೆಬಿನಾಳ, ಸಾತಿಹಾಳ ಕೆರೆಗಳನ್ನುತುಂಬಲಾಗುತ್ತದೆ. ಇದಾದ ಬಳಿಕ ತಿಡಗುಂದಿ ಶಾಖಾ ಕಾಲುವೆಗೆ 2.7 ಕಿ.ಮೀ.ವರೆಗೆ ನೀರು ಹರಿಸಿ, ಮದಭಾವಿ, ನಾಗಠಾಣ ಕೆರೆಗಳನ್ನು ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ತುಂಬಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೆಲವು ಕೆರೆಗಳ ಮೇಲೆ ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳು ಅವಲಂಬಿತವಾಗಿದ್ದು, ಆ ಎಲ್ಲ ಯೋಜನೆಗಳಿಗೆ ವಿಜಯಪುರ ಮುಖ್ಯ ಕಾಲುವೆಗಳಿಂದ ನೀರು ಹರಿಸುವದರಿಂದ ಅನುಕೂಲವಾಗಲಿದೆ ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.