ಮುಖ್ಯ ನಾಲೆಗೆ ಇಂದಿನಿಂದ ನೀರು

•ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳಿಗೆ ಅನುಕೂಲ: ಎಂ.ಬಿ. ಪಾಟೀಲ

Team Udayavani, May 14, 2019, 5:01 PM IST

bijapur-tdy-1..

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆ ವಿಜಯಪುರ ಮುಖ್ಯ ಕಾಲುವೆಯಿಂದ ಬುಧವಾರದಿಂದ ನೀರು ಹರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ನೀರಿನ ತೀವ್ರ ಅಭಾವ ಇರುದರಿಂದಾಗಿ ವಾರಾಬಂದಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ನೀರು ಹರಿಸಲಾಗುತ್ತಿದೆ. ಹೀಗಾಗಿ ರೈತರು ಸಹಕರಿಸಬೇಕು ಎಂದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಚಿಂಚೋಳಿ ಉಪ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ವಿಜಯಪುರ ಮುಖ್ಯ ಕಾಲುವೆಗೆ ನೀರು ಹರಿಸಲು ವಿನಂತಿಸಿ, ವಿವಿಧ ಗ್ರಾಮಗಳ ರೈತರ ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ವಿಜಯಪುರ ಮುಖ್ಯ ಕಾಲುವೆಯ ಕೂಡಗಿ ಹತ್ತಿರದ ರೈಲ್ವೆ ಲೈನ್‌ ಪಾಸಿಂಗ್‌ ಕಾಮಗಾರಿ ತಾಂತ್ರಿಕ ತೊಂದರೆಯಿಂದ ವಿಳಂಬದಿಂದ ಸಾಗಿದೆ. ಈಗಾಗಲೇ ಗುತ್ತಿಗೆ ಅವಧಿ 18 ತಿಂಗಳು ಪೂರ್ಣಗೊಂಡು, ವಿಸ್ತರಣೆಯ 6 ತಿಂಗಳು ಹೆಚ್ಚವರಿ ಅವಧಿ ಮುಗಿದಿದ್ದರೂ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಚಲಿಸುವ ರೈಲ್ವೆ ಲೈನ್‌ಗಳ ಕೆಳ ಭಾಗದಲ್ಲಿಯೇ ಬೃಹತ್‌ ಕಾಮಗಾರಿ ನಡೆಯುತ್ತಿರುವದು ವಿಳಂಬಕ್ಕೆ ಪ್ರಮುಖ ಕಾರಣ. ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಇಲಾಖೆಯವರು ಒಪ್ಪ್ಪುತ್ತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ತಾತ್ಕಾಲಿಕ ಪುಸ್ಸಿಂಗ್‌ ಕಾಮಗಾರಿ ಮೂಲಕ ನೀರು ಹರಿಸಲು ಸೂಚಿಸಲಾಗಿದ್ದು, ಇದಕ್ಕಾಗಿ 60 ಲಕ್ಷ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.

93 ಕ್ಯೂಮೆಕ್ಸ್‌ ನೀರು ಹರಿಸುವ ಸಾಮರ್ಥಯ ಹೊಂದಿರುವ ವಿಜಯಪುರ ಮುಖ್ಯ ಕಾಲುವೆಯಲ್ಲಿ ತಾತ್ಕಾಲಿಕ ಪೈಪ್‌ ಪುಸ್ಸಿಂಗ್‌ನಿಂದ 22 ಕ್ಯೂಮೆಕ್ಸ್‌ ನೀರು ಮಾತ್ರ ಹರಿಯಲಿದ್ದು, ವಿಜಯಪುರ ಮುಖ್ಯ ಕಾಲುವೆಯಲ್ಲಿ 136 ಕಿ.ಮೀ. ಜಾಲವಾದವರೆಗೆ ನೀರು ಹರಿಸಸಲಾಗುತ್ತದೆ. ಅಲ್ಲಿಂದ ಕಗ್ಗೋಡ, ಕುಮಟಗಿ, ಪಡಗಾನೂರ, ದೇವರಹಿಪ್ಪರಗಿ, ಮಣೂರ, ಮಾರ್ಕಬ್ಬಿನಹಳ್ಳಿ, ಬೊಮ್ಮನಜೋಗಿ ಕೆರೆಗಳನ್ನು ತುಂಬಿಸಲಾಗುತ್ತದೆ. ಹೂವಿನಹಿಪ್ಪರಗಿ ಶಾಖಾ ಕಾಲುವೆಯಿಂದ 40 ಕಿ.ಮೀ.ವರೆಗೆ ನೀರು ಹರಿಸಿ ನಾಗವಾಡ, ಮಣೂರ, ಮುಕರ್ತಿಹಾಳ, ಅಲಕೊಪ್ಪರ, ರೂಡಗಿ ಕೆರೆಗಳನ್ನು ತುಂಬಿಸಲಾಗುತ್ತದೆ.

ಅಲ್ಲಿಂದ ಮುಂದೆ ಬಸವನಬಾಗೇವಾಡಿ ಶಾಖಾ ಕಾಲುವೆಯಿಂದ 40 ಕಿ.ಮೀ. ನೀರು ಹರಿಸಿ ಡೋಣುರ, ಬಿಸನಾಳ, ರೆಬಿನಾಳ, ಸಾತಿಹಾಳ ಕೆರೆಗಳನ್ನುತುಂಬಲಾಗುತ್ತದೆ. ಇದಾದ ಬಳಿಕ ತಿಡಗುಂದಿ ಶಾಖಾ ಕಾಲುವೆಗೆ 2.7 ಕಿ.ಮೀ.ವರೆಗೆ ನೀರು ಹರಿಸಿ, ಮದಭಾವಿ, ನಾಗಠಾಣ ಕೆರೆಗಳನ್ನು ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ತುಂಬಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೆಲವು ಕೆರೆಗಳ ಮೇಲೆ ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳು ಅವಲಂಬಿತವಾಗಿದ್ದು, ಆ ಎಲ್ಲ ಯೋಜನೆಗಳಿಗೆ ವಿಜಯಪುರ ಮುಖ್ಯ ಕಾಲುವೆಗಳಿಂದ ನೀರು ಹರಿಸುವದರಿಂದ ಅನುಕೂಲವಾಗಲಿದೆ ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.