ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ತಾಕೀತು


Team Udayavani, Aug 18, 2018, 12:23 PM IST

bid-7.jpg

ವಿಜಯಪುರ: ಜಿಲ್ಲೆಯಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ಪೂರೈಕೆ ಆಗುತ್ತಿರುವ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಕೂಡಲೇ ವಿವಿಧ ಕಂದಾಯ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ತಂಡ ತಕ್ಷಣ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ಸೂಚಿಸಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು. 90 ದಿನಗಳು ನೀರು ಸರಬರಾಜಾದ ತಕ್ಷಣ ನೀರು ಸ್ಥಗಿತಗೊಳಿಸದೇ ಆಯಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಬೇಕು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇರುವ ಪ್ರದೇಶಗಳಲ್ಲಿ ಎಷ್ಟು ದಿನ ನೀರು ಪೂರೈಕೆ ಸಾಧ್ಯ, ಶಾಶ್ವತ ಪರಿಹಾರಕ್ಕೆ ಕೈಗೊಳ್ಳಬೇಕಿರುವ ಕ್ರಮಗಳೇನು ಎಂದು ಅಧಿಕಾರಿಗಳು ಯೋಜನೆ ರೂಪಿಸಿ ಎಂದರು. ಜಿಲ್ಲೆಯ ಆಯಾ ಎಲ್ಲಾ ತಹಶೀಲ್ದಾರ್‌ರು, ತಾಪಂ ಇಒ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಅಲ್ಪಾವಧಿ ಬೆಳೆ, ಹೆಚ್ಚು ಇಳುವರಿಯ ಬೆಳೆ, ಮಾರುಕಟ್ಟೆ ವ್ಯವಸ್ಥೆ ಕುರಿತು ಸೂಕ್ತ ತಿಳಿವಳಿಕೆ ನೀಡಬೇಕು. ಹವಾಮಾನಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವ ಬಗ್ಗೆಯೂ ಸೂಕ್ತ ಜಾಗೃತಿ ಮೂಡಿಸಲು ತಿಳಿಸಿದ ಅವರು, ಹೋಬಳಿವಾರು ವಿಶೇಷ ಕಾರ್ಯಾಗಾರಗಳನ್ನು ಏರ್ಪಡಿಸಿ ರೈತರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಿದರು.

ಅತಿವೃಷ್ಟಿ-ಅನಾವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪದಿಂದ ತೋಟಗಾರಿಕಾ ಬೆಳೆಗಳ ಹಾನಿ ಸಮೀಕ್ಷೆ ತ್ವರಿತಗೊಳಿಸಬೇಕು. ತಹಶೀಲ್ದಾರ್‌ರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಸಕಾಲಕ್ಕೆ ಸೌಲಭ್ಯ ಆಯಾ ಫಲಾನುಭವಿಗಳಿಗೆ ದೊರೆಯಬೇಕು. ಇದಕ್ಕಾಗಿ ತಾಲೂಕವಾರು ಕಡ್ಡಾಯವಾಗಿ ಕಂದಾಯ, ಪಿಂಚಣಿ ಅದಾಲತ್‌ ತಾಲೂಕಾವಾರು ನಡೆಸಬೇಕು. ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಪ್ರತಿ ತಾಲೂಕಾವಾರು ಸಮಯ ನಿಗದಿ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ತ್ವರಿತ ಇತ್ಯರ್ಥ ಮಾಡಬೇಕು.

ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ತಮ್ಮ ಅಧೀನ ಕಚೇರಿಗಳಿಗೂ ನಿರಂತರ ಭೇಟಿ ನೀಡಿ ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳು ಸಕಾಲಕ್ಕೆ ಪರಿಹರಿಸುವ ಜೊತೆಗೆ ಈ ಕುರಿತು ಮೇಲಾಧಿಕಾರಿಗಳಿಗೂ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಖಜಾನೆ ಮೂಲಕ 15 ಕೋಟಿ ರೂ. ಬಿಡುಗಡೆ ಮಾಡಿದೆ. ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸುವ ಕುರಿತಂತೆ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ ಜಿಲ್ಲಾ ಅಂಚೆ ಇಲಾಖೆ ಅಧಿಕಾರಿಗಳು ಈ ಕುರಿತು ಸೂಕ್ತ ಗಮನ ಹರಿಸಿ, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳನ್ನು ಸ್ಥಳೀಯವಾಗಿರುವ ಪ್ರಾಥಮಿಕ ಶಾಲಾ ಕಟ್ಟಡಗಳಿಗೆ ಸ್ಥಳಾಂತರ ಮಾಡಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ, ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.