ಕಾಲುವೆಗೆ ನೀರು: ಧರಣಿ ಹಿಂಪಡೆದ ರೈತರು


Team Udayavani, Nov 28, 2017, 2:27 PM IST

R-3.jpg

ಆಲಮಟ್ಟಿ: ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯ ಕೊನೆಯ ವಿತರಣಾ ಕಾಲುವೆವರೆಗೂ ನೀರು ಹರಿಸಲಾಗುತ್ತಿದ್ದು, ಉಳಿದ ಮೂರು ಕಿ.ಮೀ ಕಾಲುವೆಗೆ ಎರಡು ದಿನದೊಳಗೆ ನೀರು ಹರಿಸುವ ಲಿಖೀತ ಭರವಸೆಯನ್ನು ಕೆಬಿಜೆಎನ್‌ ಎಲ್‌ ಅಧಿಕಾರಿಗಳು ನೀಡಿದ್ದರಿಂದ ಸರದಿ ಧರಣಿ ಸತ್ಯಾಗ್ರಹ ಹಾಗೂ ನ. 28ರಿಂದ ನಡೆಸಲು ಉದ್ದೇಶಿಸಿದ್ದ ಆಮರಣ ಉಪವಾಸ ಸತ್ಯಾಗ್ರಹವನ್ನು ಕೈಬಿಡಲಾಗಿದೆ ಎಂದು ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.

ಚಿಮ್ಮಲಗಿ ಏತ ನೀರಾವರಿ ಪಶ್ಚಿಮ ಕಾಲುವೆಯು ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿ ತಾಲೂಕಿನ ಜಮೀನುಗಳಿಗೆ ನೀರುಣಿಸಲಿದ್ದು, ನೀರಿಗಾಗಿ ಭೂಮಿ ಕಳೆದುಕೊಂಡ ತಾಲೂಕಿನ ಜನತೆಗೆ ನೀರು ಬಾರದಂತಾಗಿತ್ತು. ಈಗ ಕಾಲುವೆ ವ್ಯಾಪ್ತಿಯ ಎಲ್ಲ ರೈತರ ಜಮೀನಿಗೆ ನೀರು ಪೂರೈಕೆಯಾಗುವುದರಿಂದ ರೈತರಿಗೆ ಸಂತಸವಾಗಲಿದೆ ಎಂದರು.

ಇದಕ್ಕೂ ಮುಂಚೆ ಧರಣಿ ಸ್ಥಳಕ್ಕೆ ಮುಖ್ಯ ಅಭಿಯಂತರ ಜಗನ್ನಾಥರೆಡ್ಡಿ, ಅಧೀಕ್ಷಕ ಅಭಿಯಂತರ ಎಸ್‌.ಎಚ್‌. ಮಂಜಪ್ಪ ಭೇಟಿ ನೀಡಿ, ವಿದ್ಯುತ್‌ ಪೂರೈಕೆ ತೊಂದರೆಯಿಂದ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಮುಖ್ಯ ಸ್ಥಾವರದಲ್ಲಿ ಪಂಪಸೆಟ್‌ ಕಾರ್ಯಾರಂಭ ಮಾಡುವಲ್ಲಿ ತಾಂತ್ರಿಕ ತೊಂದರೆಯಾಗಿತ್ತು. ಈಗ ಸಮಸ್ಯೆ ಬಗೆಹರಿದು ಪಂಪಸೆಟ್‌ಗಳು ದಿನದ 24 ಗಂಟೆಯೂ ಕಾರ್ಯಾರಂಭ ಮಾಡಿವೆ. ಸೋಮವಾರ ಬೆಳಗಿನ ಜಾವ ಪಶ್ಚಿಮ ಕಾಲುವೆಯಲ್ಲಿ 49 ಕಿ.ಮೀ ಹಾಗೂ ಎಲ್ಲಾ ವಿತರಣಾ ಕಾಲುವೆಯಲ್ಲಿ ನೀರು ಹರಿದಿದೆ.

ಸೋಮವಾರ ಸಂಜೆಯವರೆಗೆ 52 ಕಿ.ಮೀ ವರೆಗೂ ನೀರು ಹರಿಯಲಿದೆ, ಹೀಗಾಗಿ ಹೋರಾಟವನ್ನು ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು. 

ಸೋಮವಾರ ಧರಣಿ ಸತ್ಯಾಗ್ರಹದಲ್ಲಿ ಸಂಗಮೇಶ ಶಿವಯೋಗಿ, ತಿರುಪತಿ ಬಂಡಿವಡ್ಡರ, ಸಂಗಣ್ಣ ಕೋತಿನ್‌, ಕಲ್ಲಪ್ಪ ಕುಂಬಾರ, ಬಿಜೆಪಿ ಮುಖಂಡರಾದ ಎಂ.ಎಸ್‌. ಪಾಟೀಲ (ನಾಲತವಾಡ), ರಾಮು ಜಗತಾಪ, ಆರ್‌.ಎಸ್‌. ಪಾಟೀಲ (ಕೂಚಬಾಳ), ರಾಮು ಜಗತಾಪ, ಬಸವರಾಜ ದಂಡೀನ,ನಿತ್ಯಾನಂದ ಮೇಲಿನಮಠ ಮೊದಲಾದವರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.