ಸಹೋದರಿಯೊಂದಿಗೆ ಮಾತನಾಡಲು ಬಿಡಿ: ಸಿ.ಡಿ ಯುವತಿಯ ತಮ್ಮನ ಅಳಲು
Team Udayavani, Apr 1, 2021, 4:00 PM IST
ವಿಜಯಪುರ: ನಮ್ಮ ಸಹೋದರಿಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಕೂಡಲೇ ನಮ್ಮ ಸಹೋದರಿಯನ್ನು ನಮ್ಮೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಸಿ.ಡಿ ಪ್ರಕರಣದ ಯುವತಿಯ ಸಹೋದರರು ಆಗ್ರಹಿಸಿದ್ದಾರೆ.
ಗುರುವಾರ ಬೆಳಗಾವಿ ನಗರದಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಜ್ಜಿಯ ಮನೆಗೆ ಸ್ಥಳಾಂತರಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಡಿ ಲೇಡಿ ಸಹೋದರರು ಹಾಗೂ ಆಕೆಯ ತಂದೆ, ನಮ್ಮ ಮಗಳೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಎಸ್ ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಅವಕಾಶ ನೀಡಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸಿಡಿಲೇಡಿ ಕುಟುಂಬ ವಿಜಯಪುರ ಜಿಲ್ಲೆಗೆ ಸ್ಥಳಾಂತರ
ಸದ್ಯ ಯಾರಿಂದಲೂ ನಮಗೆ ಭಯವಿಲ್ಲ, ಸೂಕ್ತ ಪೊಲೀಸ್ ಭದ್ರತೆ ಸಿಕ್ಕಿದೆ. ಪೊಲೀಸ್ ಭದ್ರತೆಯಲ್ಲೇ ಬೆಳಗಾವಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.
ತಮ್ಮ ರಾಜಕೀಯ ಲಾಭಕ್ಕಾಗಿ ಡಿ.ಕೆ.ಶಿವಕುಮಾರ್ ನಮ್ಮ ಸಹೋದರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ಅಗತ್ಯ ದಾಖಲೆಗಳಿವೆ. ಕೆಲವನ್ನು ಎಸ್ ಐಟಿ ತನಿಖಾ ತಂಡಕ್ಕೆ ನೀಡಿದ್ದೇವೆ. ನಮ್ಮಲ್ಲಿ ಇನ್ನೂ ಕೆಲ ದಾಖಲೆಗಳಿದ್ದು, ಸಮಯ ಬಂದಾಗ ಎಸ್ ಐಟಿ ತಂಡಕ್ಕೆ ನೀಡುತ್ತೇವೆ ಎಂದಿದ್ಧಾರೆ.
ನಮ್ಮ ಮಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಲೂ ಆಕೆಯ ಈಗಿನ ನಂಬರ್ ನಮ್ಮ ಬಳಿ ಇಲ್ಲವಾಗಿದೆ. ಡಿ.ಕೆ.ಶಿವಕುಮಾರ್ ರಾಜಕೀಯ ಷಡ್ಯಂತ್ರದ ಪ್ರಭಾವಿತಳಾಗಿ ಒತ್ತಡದಲ್ಲಿ ಇರುವ ಆಕೆಗೆ ನಮ್ಮ ಸಾಂತ್ವನದ ಅಗತ್ಯವಿದೆ. ಹೀಗಾಗಿ ಮಗಳೊಂದಿಗೆ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು