ಹೆಲ್ಮೆಟ್‌ ಧರಿಸಿ ನಿಯಮ ಪಾಲಿಸಿ


Team Udayavani, Oct 11, 2021, 12:18 PM IST

Untitled-8

ಮುದ್ದೇಬಿಹಾಳ:  ಪಟ್ಟಣದಲ್ಲಿ ಸ್ಥಳೀಯ ಪೊಲೀಸ್‌ ಠಾಣೆ ವತಿಯಿಂದ ಹೆಲ್ಮೆಟ್‌ ಧರಿಸುವ ಅವಶ್ಯಕತೆ ಕುರಿತು ಜನ ಜಾಗೃತಿ ಮೂಡಿಸುವ ಬೈಕ್‌ ಜಾಥಾ ಮತ್ತು ಹೆಲ್ಮೆಟ್‌ ತೊಡಿಸುವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭ ಸಿಪಿಐ ಆನಂದ ವಾಘ್ಮೋಡೆ ಮಾತನಾಡಿ, ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಪ್ರಯಾಣ ಮಾಡಬೇಕು. ಇದರಿಂದ ಅಮೂಲ್ಯವಾದ ಜೀವ ಉಳಿಯುತ್ತದೆ. ಅನೇಕ ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್‌ ಇಲ್ಲದವರೇ ಜೀವ ಕಳೆದುಕೊಂಡಿದ್ದಾರೆ. ನಿಮ್ಮ ಜೀವ ನಿಮ್ಮ ಕುಟುಂಬದವರಿಗೆ ಅತ್ಯಮೂಲ್ಯ ಎನ್ನುವುದನ್ನು ದ್ವಿಚಕ್ರ ವಾಹನ ಸವಾರರು ಅರಿತುಕೊಳ್ಳಬೇಕು ಎಂದರು.

ಪಿಎಸೈ ರೇಣುಕಾ ಜಕನೂರ ಮಾತನಾಡಿ, ಜನರಲ್ಲಿ ಸಂಚಾರ ನಿಯಮಗಳ ಅರಿವಿನ ಕೊರತೆ ಇದೆ. ಅಪಘಾತ ಸಂಭವಿಸಿದಾಗ ಪೊಲೀಸರು ಸ್ಥಳಕ್ಕೆ ಬರುತ್ತಾರೆ, ತಮ್ಮ ಕರ್ತವ್ಯ ನಿಭಾಯಿಸಿ ಮರಳುತ್ತಾರೆ. ಆದರೆ ಅಪಘಾತಕ್ಕೀಡಾದವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿರುತ್ತದೆ. ಅನೇಕ ಸಾರಿ ಪ್ರಾಣವೇ ಹೋಗಿರುತ್ತದೆ. ಕೈ ಕಾಲು ಮುರಿದರೆ, ಏನಾದರೂ ಅಂಗ ಊನವಾದರೆ ಇದಕ್ಕೆಲ್ಲ ಚಾಲಕ ಹೆಲ್ಮೆಟ್‌ ಧರಿಸದ ನಿರ್ಲಕ್ಷ್ಯವೇ ಕಾರಣವಾಗಿರುತ್ತದೆ. ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿಯೇ ಸಂಚರಿಸಬೇಕು. ಜಾಗೃತಿ ಜಾಥಾ ಹಿನ್ನೆಲೆ 650 ರೂ. ಮೌಲ್ಯದ ಹೆಲ್ಮೆಟ್‌ ಅನ್ನು 550 ರೂ.ಗೆ ಕೊಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಂಡು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಇದನ್ನೂ ಓದಿ:ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ.. : ಸರಕಾರದ ವಿರುದ್ಧ ಎಚ್ ಡಿಕೆ ಧಿಕ್ಕಾರ

ಪತ್ರಕರ್ತ ಶಂಕರ ಹೆಬ್ಟಾಳ ಮಾತನಾಡಿ, ಹೆಲ್ಮೆಟ್‌ ಧರಿಸದೇ ಪೊಲೀಸರು ಬೈಕಗಳನ್ನು ತಡೆಹಿಡಿದಾಗ ಅವರೊಂದಿಗೆ ವಿನಾಕಾರಣ ವಾಗ್ವಾದ ನಡೆಸುವ ಬದಲು ದೂರದೂರಿಗೆ ಹೋಗುವ ಸಮಯದಲ್ಲಿ ಜೊತೆಗೆ ಹೆಲ್ಮೆಟ್‌ ತೆಗೆದುಕೊಂಡು ಹೋಗುವುದು ಜಾಣತನ ಮತ್ತು ಜೀವದ ರಕ್ಷಣೆಯ ಜೊತೆಗೆ ಪೊಲೀಸರು ಹಾಕುವ ದಂಡದಿಂದಲೂ ಬಚಾವ್‌ ಆಗಬಹುದು. ಜೀವಕ್ಕಿಂತ ಹೆಚ್ಚು ಯಾವುದೂ ಇಲ್ಲ ಎಂದರು.

ಇದೇ ವೇಳೆ ಹೆಲ್ಮೆಟ್‌ ಇಲ್ಲದೇ ಸಂಚರಿಸುತ್ತಿದ್ದ ಬೈಕ್‌, ಸ್ಕೂಟಿ ಸವಾರರನ್ನು ತಡೆದ ಪೊಲೀಸರು ಅವರಿಗೆ ಹೆಲ್ಮೆಟ್‌ ತೊಡಿಸಿ ಹೆಲ್ಮೆಟ್‌ ಧರಿಸುವ ಮಹತ್ವದ ಮನವರಿಕೆ ಮಾಡಿಕೊಟ್ಟರು. ಪೊಲೀಸ್‌ ಇಲಾಖೆಯಿಂದ ಪತ್ರಕರ್ತರಿಗೆ ಉಚಿತವಾಗಿ ಹೆಲ್ಮೆಟ್‌ ವಿತರಿಸಲಾಯಿತು. ಇದಕ್ಕೂ ಮುನ್ನ ಪೊಲೀಸ್‌ ಠಾಣೆಯಿಂದ ಎಂಜಿವಿಸಿ ಕಾಲೇಜು ಮುಂಭಾಗದ ವಿಜಯಪುರ ಮುಖ್ಯ ರಸ್ತೆ ಮೂಲಕ ಡಾ| ಬಿ.ಆರ್. ಅಂಬೇಡ್ಕರ್‌, ಸಂಗೊಳ್ಳಿ ರಾಯಣ್ಣ, ಬಸವೇಶ್ವರ ವೃತ್ತ ಮಾರ್ಗವಾಗಿ ಪೊಲೀಸರು ಹೆಲ್ಮೆಟ್‌ ಧರಿಸಿ ಬೈಕ್‌ ಜಾಥಾ ನಡೆಸಿ ಜನ ಜಾಗೃತಿ ಮೂಡಿಸಿದರು.

ಪ್ರೊಬೇಷನರಿ ಪಿಎಸೈ ದೀಪಾ ವೈ.ಜಿ, ಎಎಸೈ ಎಚ್‌.ಬಿ. ಸುತಗೊಂಡರ, ಪೊಲೀಸ್‌ ಸಿಬ್ಬಂದಿಗಳಾದ ಎಸ್‌ .ಪಿ.ಜಾಧವ, ಉಮೇಶ್‌ ಚುಂಚೂರ, ಪಾಂಡುರಂಗ ಪಾಟೀಲ, ಶಿವಾನಂದ ಮ್ಯಾಗೇರಿ, ಮಲ್ಲನಗೌಡ ಬಿರಾದಾರ, ಶ್ರೀಕಾಂತ ಬಿರಾದಾರ, ವೀರೇಶ ಹಾಲಗಂಗಾಧರ ಮಠ, ಸಲೀಂ ಹತ್ತರಕಿಹಾಳ, ಶಿವಾನಂದ ಮಾಶೆಟ್ಟಿ, ಆರ್‌.ಎಸ್‌.ಭಂಗಿ, ಮಲ್ಲಪ್ಪ ಬೋಳರಡ್ಡಿ, ಎಂ.ಎನ್‌.ಬುಳ್ಳಾ, ಶಾಂತಗೌಡ ಬನ್ನೆಟ್ಟಿ, ಎಂ.ಬಿ. ಮುಳವಾಡ, ಸ್ಥಳೀಯ ಪತ್ರಕರ್ತರು ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.