ಮಾಸ್ಕ್ ಧರಿಸಿ ಸಂಚರಿಸಿ: ಡಿವೈಎಸ್ಪಿ
Team Udayavani, May 9, 2020, 7:29 AM IST
ಮುದ್ದೇಬಿಹಾಳ: ಲಾಕ್ಡೌನ್ ಸಡಿಲಿಕೆ ಆಗಿದ್ದರೂ ಕೆಲ ನಿಯಮ ಜಾರಿಯಲ್ಲಿವೆ. ಸಾರ್ವಜನಿಕರು, ವಾಹನಗಳ ಚಾಲಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವನಬಾಗೇವಾಡಿ ಪೊಲೀಸ್ ವಲಯದ ಡಿವೈಎಸ್ಪಿ ಈ. ಶಾಂತವೀರ ವಿನಂತಿಸಿದ್ದಾರೆ.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮಾಸ್ಕ್ ಧರಿಸಿ ಮತ್ತು ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದರು. ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ, ನಾಲ್ಕು ಚಕ್ರದ ವಾಹನದಲ್ಲಿ ಚಾಲಕ ಸೇರಿ ಮೂವರಿಗೆ ಮಾತ್ರ ಅವಕಾಶವಿದೆ. ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಕುವುದು ಅನಿವಾರ್ಯವಾಗಲಿದೆ. ನಿಯಮ ಪಾಲಿಸಿ ಪೊಲೀಸರ ಜತೆ ಸಹಕರಿಸಿ ಎಂದು ವಿನಂತಿಸಿದರು. ಇದೇ ಕೆಲವರಿಗೆ ಲಾಠಿ ರುಚಿ ತೋರಿಸಿದರು.
ಅಂಬೇಡ್ಕರ್ ವೃತ್ತದಲ್ಲಿ ಬುಲೆಟ್ ಬೈಕ್ ಮೇಲೆ ಆರ್ಮಿ ಎಂದು ಬರೆದುಕೊಂಡಿದ್ದ ವ್ಯಕ್ತಿ ಮಾಸ್ಕ್ ಧರಿಸದೆ ಮತ್ತೂಬ್ಬ ಸವಾರನನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ. ಈತನನ್ನು ತಡೆದ ಡಿವೈಎಸ್ಪಿ ಆರ್ಮಿಯಲ್ಲಿರುವ ನೀವೇ ಕಾನೂನು ಉಲ್ಲಂಘಿಸಿದರೆ ಹೇಗೆ. ಮೊದಲು ಮಾಸ್ಕ್ ಧರಿಸಿ ಎಂದು ಬುದ್ದಿವಾದ ಹೇಳಿದರು.