ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನು?: ಮುರುಗೇಶ್ ನಿರಾಣಿ
ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳೂ ಅವರಲ್ಲಿದೆ ಎಂಬುದಂತೂ ಸತ್ಯ
Team Udayavani, Jun 8, 2022, 2:18 PM IST
ವಿಜಯಪುರ : ”ಮುಖ್ಯಮಂತ್ರಿಯಾಗಿದ್ದ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಮಗ ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ”ಎನ್ನುವ ಮೂಲಕ ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,”ವಿಜಯೇಂದ್ರ ಅವರಿಗೆ ತಂದೆಯಂತೆ ನಾಯಕತ್ದ ಗುಣಗಳಿವೆ. ಹೀಗಾಗಿ ಮುಖ್ಯಮಂತ್ರಿಯಾಗಿದ್ದ ತಂದೆ ಯಡಿಯೂರಪ್ಪ ಅವರಂತೆ ಮಗನೂ ಮುಖ್ಯಮಂತ್ರಿಯಾದರೆ ತಪ್ಪೇನಿದೆ. ರಾಜ್ಯದ ನಾಯಕರೊಬ್ಬರು ದೇಶದ ಪ್ರಧಾನಿಯಾದರು, ಅವರ ಮಗ ರಾಜ್ಯದ ಮುಖ್ಯಮಂತ್ರಿಯಾದರು. ಯಾರ ಹಣೆ ಬರಹದಲ್ಲಿ ಏನೇನು ಬರೆದಿದೆಯೋ ಅದು ಆಗೇ ಆಗುತ್ತದೆ” ಎಂದರು.
”ವಿಜಯೇಂದ್ರ ಅವರಿಗೆ ರಾಜ್ಯದಲ್ಲಿ ಪಕ್ಷ ಯಾವ ಜವಾಬ್ದಾರಿ ನೀಡಬೇಕು ಎಂದು ಕೇಂದ್ರದ ವರಿಷ್ಠರು ನಿರ್ಧರಿಸಲಿದ್ದಾರೆ. ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳೂ ವಿಜಯೇಂದ್ರ ಅವರಲ್ಲಿದೆ ಎಂಬುದಂತೂ ಸತ್ಯ” ಎಂದು ನಿರಾಣಿ ಹೇಳಿದರು.
ಇದನ್ನೂ ಓದಿ : ರಂಪಾಟ ಮಾಡಿಕೊಂಡು ಚುನಾವಣೆ ನಡೆಸಲು ನಾನು ಸಿದ್ಧನಿಲ್ಲ: ಡಿ.ಕೆ. ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ