ಮಾರುಕಟ್ಟೆಗಳ ಕಾಯಕಲ್ಪ ಯಾವಾಗ?


Team Udayavani, Aug 6, 2018, 12:07 PM IST

vij-1.jpg

ಸಿಂದಗಿ: ಸಿಂದಗಿ ಪಟ್ಟಣದ ನಗರ ಪಾಲಿಕೆಯಾಗುವಷ್ಟು ಬೆಳೆಯುತ್ತಿದೆ. ಆದರೆ ಇಲ್ಲಿ ಸುಸಜ್ಜಿತವಾದ ಒಂದು ಮಾರುಕಟ್ಟೆಯಿಲ್ಲ. ರೈತರಿಗೆ ಮತ್ತು ಬಾಗವಾನರಿಗೆ ಕಾಯಿಪಲ್ಲೆ ಮತ್ತು ಹಣ್ಣು ಮಾರಾಟ ಮಾಡಲು ಸುಸಜ್ಜಿತವಾದ ಮತ್ತು ನಗರ ವಾಸಿಗಳಿಗೆ ಅನಕೂಲಕರವಾದ ಸ್ಥಳದಲ್ಲಿ ಮಾರಕಟ್ಟೆಯಾಬೇಕು ಎಂಬುವುದು ರೈತರ, ಬಾಗವಾನರ ಮತ್ತು ಪಟ್ಟಣ ವಾಸಿಗಳ ಬಹುದಿನಗಳ ಬೇಡಿಕೆ ಕನಸಾಗಿ ಉಳಿದಿದೆ.

ಸಿಂದಗಿ ಪಟ್ಟಣದ ಬಸ್‌ ನಿಲ್ದಾಣದ ಹತ್ತಿರ ಮುಖ್ಯ ರಸ್ತೆ ಬದಿಗಳಲ್ಲಿ ಒತ್ತು ಗಾಡಿಗಳಲ್ಲಿ ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಅದರಂತೆ ಟಿಪ್ಪು ಸುಲ್ತಾನ್‌ ವೃತ್ತದಿಂದ ಪುರಸಭೆ ಹತ್ತಿರದಲ್ಲಿನ ಸಿಂಡಿಕೇಟ್‌ ಬ್ಯಾಂಕ್‌ ವರೆಗಿನ ಮುಖ್ಯ ರಸ್ತೆ ಎರಡು ಬದಿಗಳಲ್ಲಿ ಕಾಯಿಪಲ್ಲೆ ಮಾರಾಟ ಮಾರುತ್ತಾರೆ. ಟಿಪ್ಪು ಸುಲ್ತಾನ್‌ ವೃತ್ತದ ಬಳಿ ಮಟನ್‌ ಮಾರಟ ಮಾಡುತ್ತಾರೆ. ಇದರಿಂದ ಜನಸಂದಣಿ ಹೆಚ್ಚಾಗಿರುತ್ತದೆ. ರಸ್ತೆಯ ಅರ್ಧದಷ್ಟು ಭಾಗ ಮಾರಾಟಗಾರರು ಅಕ್ರಮಿಸಿದಾಗ ವಾಹನಗಳು ಸಂಚಾರಕ್ಕೂ ತೊಂದರೆಯಾಗುತ್ತಿದೆ. ಪದಾಚಾರಿಗಳಿಗೆ ಸಾಕಷ್ಟು ತೊಂದರೆಯಾಗುವ ದುಸ್ಥಿತಿ ಇಲ್ಲಿ ಉಂಟಾಗಿದೆ.

ಟಿಪ್ಪು ಸುಲ್ತಾನ್‌ ವೃತ್ತದಿಂದ ಪುರಸಭೆ ಹತ್ತಿರದಲ್ಲಿನ ಮುಖ್ಯ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತದೆ. ಮಾರುಕಟ್ಟೆಯನ್ನು ಸ್ಥಳಾಂತರಿಸಿ ಎಂದು ಸಂಘಟನೆಗಳು ಹಾಗೂ ಸಾರ್ವಜನಿಕರು ಪುರಸಭೆ ಮತ್ತು ತಹಶೀಲ್ದಾರ್‌ ಗೆ ಮನವಿ ಕೊಟ್ಟರು ಪ್ರಯೋಜನವಾಗಿಲ್ಲ. ಪುರಸಭೆ ವ್ಯಾಪ್ತಿಯಲ್ಲಿನ ಹಳೆ ಬಜಾರದಲ್ಲಿನ ಮಾರುಕಟ್ಟೆ ಮತ್ತು ಮಲಘಾಣ ಕ್ರಾಸ್‌ ಬಳಿ ನಿರ್ಮಾಣ ಮಾಡಿದ ಉದ್ಘಾಟನೆಯಾಗದೇ ಉಳಿದ ಮಟನ್‌ ಮಾರುಕಟ್ಟೆಗಳು ಹಾಳು ಬಿದ್ದಿವೆ.

ಬೇಡಿಕೆ: ಹಳೆ ಬಜಾರದಲ್ಲಿನ ಕಾಯಿಪಲ್ಲೆ ಮಾರುಕಟ್ಟೆ ಈಗ ಹಾಳು ಬಿದ್ದಿದ್ದನ್ನು ಪುನಶ್ಚೇತನ ಮಾಡಬೇಕು. ಇದರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುತ್ತದೆ. ಈ ಹಾಳು ಬಿದ್ದ ಮಾರುಕಟ್ಟೆ ಪಟ್ಟಣದ ಮಧ್ಯ ಭಾಗದಲ್ಲಿದ್ದು ಇಲ್ಲಿ ಮೊದಲು ಕಾಯಿಪಲ್ಲೆ ಮತ್ತು ಹಣ್ಣು ಮಾರಾಟ ಮಾಡಲಾಗುತ್ತಿತ್ತು. ನಂತರ ದಿನಗಳಲ್ಲಿ ಮಾರುಕಟ್ಟೆ ಹಳೆ ಬಜಾರ್‌ದಿಂದ ಹಳೆ ಎಸ್‌ಬಿಐ ರಸ್ತೆಗೆ ಹೋದ ನಂತರ ಈ ಮಾರುಕಟ್ಟೆ ಪಾಳು ಬಿದ್ದಿದೆ. ಇಲ್ಲಿನ ಮಾರುಕಟ್ಟೆ ಪುನಶ್ಚೇತನ ಮಾಡಬೇಕು ಎಂಬುದು ಸಾರ್ವಜನಿಕರ ಬೇಡಿಕೆ.

ಪಟ್ಟಣದ ಮಧ್ಯಭಾಗ ವಿನಾಯಕ ಚಿತ್ರ ಮಂದಿರದ ಎದುರಿಗಿದ್ದ ಹಳೆ ಪೋಲಿಸ್‌ ಠಾಣೆ ಜಾಗೆ ಈಗ ಖಾಲಿ ಇದೆ. ಇಲ್ಲಿ ಮಾರುಕಟ್ಟೆ ಮಾಡಲು ಅತ್ಯಂತ ಸೂಕ್ತ ಜಾಗ. ಇಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಿದಲ್ಲಿ ಒಂದು ಮಾದರಿ ಮಾರುಕಟ್ಟೆಯಾಗಿ ಸಾರ್ವಜನಿಕರಿಗೆ ಅನಕೂಲಕರವಾಗುತ್ತದೆ. ಈ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ರ್ಸಾಜನಿಕರು ಒತ್ತಾಯಿಸಿದ್ದಾರೆ.

ಬಸ್‌ ನಿಲ್ದಾಣದ ಎದುರಿನ ಹಳೆ ಪ್ರವಾಸಿ ಮಂದಿರದ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಿಕೊಟ್ಟು ಕಾಯಿಪಲ್ಲೆ, ಹಣ್ಣುಹಂಪಲು ಮಾರಾಟ ಮಾಡಿ ಉಪಜೀವನ ನಡೆಸುವ ಮಾರಾಟಗಾರರಿಗೆ ಅನಕೂಲಕರ ಮಾಡಿಕೊಡಬೇಕು ಎಂಬುದು ಮಾರಾಟಗಾರರು ಪುರಸಭೆಗೆ ಬೇಡಿಕೆ ಇಟ್ಟಿದ್ದಾರೆ.

ತೋಟಗಾರಿಕೆ ಬೆಳೆಗಳಾದ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡುವ ಬಡ ಕುಟುಂಬಗಳಿಗೆ ಅನುಕೂಲಕರವಾಗುವಂತೆ ಸಿಂದಗಿ ಪಟ್ಟಣದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಮಾಡಿಕೊಡಲಾಗುವುದು. ಮಾರುಕಟ್ಟೆ ನಿರ್ಮಾಣಕ್ಕೆ ಸ್ಥಳ ನಿಗದಿಪಡಿಸಿ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. 
ಎಂ.ಸಿ. ಮನಗೂಳಿ, ಜಿಲ್ಲಾ ಉಸ್ತುವಾರಿ ಸಚಿವ

ರೈತರು ಅಲ್ಪಾವಧಿ ತೋಟಗಾರಿಕೆ ಬೆಳೆ ತರಕಾರಿಯನ್ನು ಬೆಳೆದು ದಿನೆ ದಿನೆ ಮಾರಾಟ ಮಾಡಿ ಬದುಕು ಸಾಗಿಸುತ್ತಾರೆ.
ಅವರಿಗೆ ಪುರಸಭೆಗೆ ಸೇರಿದ ಜಾಗದಲ್ಲಿ ಸುಸಜ್ಜಿತ, ಮೂಲಭೂತ ಸೌಕರ್ಯಗಳುಳ್ಳ ಮಾರುಕಟ್ಟೆ ನಿರ್ಮಾಣ ಮಾಡಬೇಕು.
 ಡಾ| ಸಂಗಮೇಶ ಪಾಟೀಲ, ಭಾವಿಕಟ್ಟಿ ಆಸ್ಪತ್ರೆ, ಸಿಂದಗಿ

ಸಿಂದಗಿ ಪಟ್ಟಣದಲ್ಲಿ ಹೈಟೆಕ್‌ ಮಾರುಕಟ್ಟೆ ನಿರ್ಮಾಣ ಮಾಡುವ ಕುರಿತು ಸಂಬಂ ಧಿಸಿದ ಇಲಾಖೆಗೆ ಮತ್ತು ತೋಟಗಾರಿಕೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರಲ್ಲಿ ಮನವಿ ಮಾಡಿಕೊಂಡಿದ್ದು ಸಚಿವರ ಮಾರ್ಗದರ್ಶನ ತೆಗೆದುಕೊಂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು.
 ಬಾಷಾಸಾಬ ತಾಂಬೋಳಿ, ಪುರಸಭೆ ಅಧ್ಯಕ್ಷ

ರಮೇಶ ಪೂಜಾರ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.