ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ; ರಕ್ಷಿಸಲು ಯತ್ನಿಸಿದ ಮೀನುಗಾರರು
Team Udayavani, Nov 14, 2022, 9:45 PM IST
ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೊಲ್ಹಾರ ಬಳಿಯ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗಿದೆ.
ಹೆಗ್ಗೂರು ಮೂಲದ ಕೊಲ್ಹಾರ ತಾಲೂಕ ಮಟ್ಟಿಹಾಳ ನಿವಾಸಿ ಶಾಂತವ್ವ ಬಸಪ್ಪ ಜಂಬಗಿ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಶಾಂತವ್ವ ಕಳೆದ ಹಲವು ವರ್ಷಗಳಿಂದ ದೈಹಿಕವಾಗಿ ಅನಾರೋಗ್ಯ ಪೀಡಿತಳಾಗಿದ್ದಳು. ಹಲವು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ರೋಗ ವಾಸಿ ಆಗಿರಲಿಲ್ಲ. ಇದರಿಂದಾಗಿ ಮಾನಸಿಕವಾಗಿ ಬಳಲುತ್ತಿದ್ದ ಶಾಂತವ್ವ ಸೋಮವಾರ ಬೆಳಗ್ಗೆಯಿಂದ ಮನೆಯಿಂದ ನಾಪತ್ತೆ ಆಗಿದ್ದಳು. ಕುಟುಂಬ ಸದಸ್ಯರು ಹಲವು ಕಡೆಗಳಲ್ಲಿ ಹುಡುಕಿದ್ದರು.
ಆದರೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಹಾರ ಬಳಿ ಕೃಷ್ಣಾ ನದಿ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿದ್ದಾಳೆ. ನದಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಮಹಿಳೆ ನದಿಗೆ ಹಾರಿದ್ದನ್ನು ಗಮನಿಸಿದ ಮೀನುಗಾರರು ಕೂಡಲೇ ಸೇತುವೆ ಬಳಿಗೆ ಈಜುತ್ತಾ ಧಾವಿಸಿದ್ದಾರೆ.
ಆದರೆ ಮೀನುಗಾರರು ರಕ್ಷಣೆಗೆ ಧಾವಿಸುವ ವೇಳೆಗೆ ಶಾಂತವ್ವಳ ಪ್ರಾಣ ಹೋಗಿತ್ತು.
ಮೀನುಗಾರರಿಂದ ವಿಷಯ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿದ್ದಾರೆ. ಕೊಲ್ಹಾರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?