![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ವಿವಿಯಲ್ಲಿ ಶೀಘ್ರವೇ ಮಹಿಳಾ ವಸ್ತು ಸಂಗ್ರಹಾಲಯ
Team Udayavani, Sep 20, 2020, 6:06 PM IST
![ವಿವಿಯಲ್ಲಿ ಶೀಘ್ರವೇ ಮಹಿಳಾ ವಸ್ತು ಸಂಗ್ರಹಾಲಯ](https://www.udayavani.com/wp-content/uploads/2020/09/VP-TDY-1-14-620x372.jpg)
ವಿಜಯಪುರ: ಮಹಿಳಾ ಸಬಲೀಕರಣಕ್ಕಾಗಿ ಜನ್ಮ ತಳೆದಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಲ ತಿಂಗಳಲ್ಲಿ ದೇಶದಲ್ಲೇ ವಿಶಿಷ್ಟವಾದ ಮಹಿಳಾ ವಸ್ತು ಸಂಗ್ರಹಾಲಯ ಕಾರ್ಯಾರಂಭ ಮಾಡಲಿದೆ ಎಂದು ಹಂಗಾಮಿ ಕುಲಪತಿ ಪ್ರೋ| ಓಂಕಾರ ಕಾಕಡೆ ಪ್ರಕಟಿಸಿದರು.
ಶನಿವಾರ ನಡೆದ ವಿವಿಯ 11ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಿಷಯ ತಜ್ಞರು ವಸ್ತು ಸಂಗ್ರಹಾಲ ಯದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಈ ಯೋಜನೆಯಲ್ಲಿ ಮಹಿಳೆಯರ ಜ್ಞಾನ, ಕೌಶಲ್ಯ, ಸಮಾಜಕ್ಕೆ ನೀಡಿದ ಕೊಡುಗೆ ಬಿಂಬಿಸಲಾಗುತ್ತಿದೆ. ಇದಕ್ಕಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಹುತೇಕ ಮುಕ್ತಾಯದ ಹಂತದಲ್ಲಿದೆ ಎಂದರು.
ಈಗಾಗಲೇ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಶಿಲೊ³àದ್ಯಾನದಲ್ಲಿ ಗ್ರಾಮೀಣ ಬದುಕು ಬಿಂಬಿಸುವಕಲಾಕೃತಿಗಳು, ಸಾಧಕ ಮಹಿಳೆಯರೊಂದಿಗೆ ಹಳ್ಳಿ ಮಹಿಳೆಯರು ಜನ ಜೀವನದ ಮಾದರಿಗಳು ಗಮನ ಸೆಳೆದಿದೆ. ಈ ಭಾಗದಲ್ಲಿ ಇಂತಹ ಕಲಾಕೃತಿಗಳು ವಿಶೇಷವಾಗಿದ್ದು ಗ್ರಾಮೀಣ ಮಹಿಳಾ ಬದುಕನ್ನು ಪರಿಚಯಿಸುತ್ತಿವೆ ಎಂದರು.
ಉತ್ತಮವಾದ ಶೈಕ್ಷಣಿಕ ಚಟುವಟಿಕೆಗಳಿಗೆ ಮೂಲಸೌಕರ್ಯಗಳು ಅವಶ್ಯಕ ಎಂಬುದನ್ನು ವಿಶ್ವವಿದ್ಯಾಲಯ ಮನಗಂಡಿದ್ದು ಕಳೆದ ಸಾಲಿನಲ್ಲಿ ವಿಶ್ವವಿದ್ಯಾಲಯ ಕೆಲವು ಮಹತ್ವದ ಮೂಲಭೂತ ಸೌಕರ್ಯ ಕಾರ್ಯ ಕೈಗೆತ್ತಿಕೊಂಡಿದೆ. ಹೊಸ ಕಟ್ಟಡಗಳ ನಿರ್ಮಾಣ, ಹಳೆ ಕಟ್ಟಡಗಳ ದುರಸ್ತಿ ಕಾರ್ಯ, ಪ್ರಯೋಗಾಲಯಗಳ ಉನ್ನತೀಕರಣಕ್ಕೆ ಪಾರದರ್ಶಕವಾಗಿ ರೂಸಾ ಅನುದಾನಬಳಸಿಕೊಳ್ಳಲಾಗಿದೆ. ಶಿಕ್ಷಣ, ದೈಹಿಕ ಶಿಕ್ಷಣ, ವಿದ್ಯುನ್ಮಾನ ವಿಭಾಗಗಳು ತಮ್ಮ ಸ್ವಂತ ಕಟ್ಟಡಗಳಲ್ಲಿ ಕಾರ್ಯ ಮಾಡಲಾರಂಭಿಸಿವೆ.ಗ್ರಂಥಾಲಯ ಕಟ್ಟಡದ ವಿಸ್ತರಣಾ ಕಾಮಗಾರಿ ಮುಕ್ತಾಯಗೊಂಡಿದೆ. ಇದು ಆಡಳಿತಾತ್ಮಕ, ವಿದ್ಯಾರ್ಥಿನಿಯರ ಶೈಕ್ಷಣಿಕ ದೃಷ್ಟಿಯಿಂದ ಅನುಕೂಲವಾಗಿದೆ. ಇದನ್ನು ಸಾಕಾರಗೊಳಿಸಿದ ಹಿಂದಿನ ಕುಲಪತಿ ಪ್ರೊ| ಸಬಿಹಾ ಭೂಮಿಗೌಡ ಶ್ರಮ ಇಲ್ಲಿ ಸ್ಮರಣೀಯ ಎಂದರು. ಸಮಾಜ ಕಲ್ಯಾಣ ಇಲಾಖೆಯ 8 ಕೋಟಿ ರೂ. ಅನುದಾನದಲ್ಲಿ ಅರ್ಧಕ್ಕೆ ನಿಂತಿದ್ದ ಬೃಹತ್ ಸಭಾಂಗಣದ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು ಡಾ| ಬಿ.ಆರ್. ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದರು.
ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ರಾಸಾಯನ ಶಾಸ್ತ್ರ ವಿಭಾಗ, ಸಸ್ಯಶಾಸ್ತ್ರ ವಿಭಾಗ, ವಸತಿ ನಿಲಯ, ಹಿಂದಿ ಭವನ ಮುಂತಾದ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ. ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಹೊಸದಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಲಾಗಿದೆ. ಮಂಡ್ಯ ವಿಸ್ತರಣಾ ಕೇಂದ್ರದ ಆಡಳಿತ ಕಟ್ಟಡ 5 ಕೋಟಿ ರೂ. ಅನುದಾನದ ಕಾಮಗಾರಿಗಳು ಪ್ರಗತಿಯಲ್ಲಿವೆ. 13 ಕೋಟಿ ರೂ. ವೆಚ್ಚದಲ್ಲಿ ಸಿಂಧನೂರು ಆಡಳಿತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.
ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಪದವಿಯ 5, 6ನೇ ಸೆಮಿಸ್ಟರ್ ಗೆ ಕನ್ನಡ ಮತ್ತು ಇಂಗ್ಲಿಷ್ನ 12 ಭಾಷಾ ಪಠ್ಯಪುಸ್ತಕ ಪ್ರಕಟಿಸಿದೆ. ಪದವಿ ಭಾಷಾ ಕನ್ನಡ ಮತ್ತು ಇಂಗ್ಲಿಷ್, ಪ್ರಸ್ತುತ ಪದವಿಯ 1 ಮತ್ತು 2ನೇ ಸೆಮಿಸ್ಟರ್ ಹಿಂದಿ ಭಾಷಾ ಪಠ್ಯಪುಸ್ತಕ ಪ್ರಕಟಗೊಂಡಿವೆ. ಉಳಿದ ಸೆಮಿಸ್ಟರ್ನ ಪಠ್ಯಗಳು ಮುದ್ರಣ ಹಂತದಲ್ಲಿವೆ ಎಂದು ವಿವರಿಸಿದರು.
ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಪದವಿಯ 5, 6ನೇ ಸೆಮಿಸ್ಟರ್ಗೆ ಕನ್ನಡ ಮತ್ತು ಇಂಗ್ಲಿಷ್ನ 12 ಭಾಷಾ ಪಠ್ಯಪುಸ್ತಕ ಪ್ರಕಟಿಸಿದೆ. ಪದವಿ ಭಾಷಾ ಕನ್ನಡ ಮತ್ತು ಇಂಗ್ಲಿಷ್, ಪ್ರಸ್ತುತ ಪದವಿಯ 1 ಮತ್ತು 2ನೇ ಸೆಮಿಸ್ಟರ್ ಹಿಂದಿ ಭಾಷಾ ಪಠ್ಯಪುಸ್ತಕ ಪ್ರಕಟಗೊಂಡಿವೆ. ಉಳಿದ ಸೆಮಿಸ್ಟರ್ನ ಪಠ್ಯಗಳು ಮುದ್ರಣ ಹಂತದಲ್ಲಿವೆ. -ಓಂಕಾರ ಕಾಕಡೆ, ಪ್ರಭಾರ ಕುಲಪತಿ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.